![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬಜೆಟ್ನ ಪ್ರತಿಕ್ರಿಯೆ
Team Udayavani, Jul 6, 2018, 6:25 AM IST
![180705kpn95.jpg](https://www.udayavani.com/wp-content/uploads/2018/07/6/180705kpn95-620x428.jpg)
ನಾವು ಕೋರಿದ್ದ ಕೆಲ ಬೇಡಿಕೆಗಳನ್ನು ಮೊದಲ ಹಂತದಲ್ಲಿ ಈಡೇರಿಸಿದ್ದಾರೆ. ಚಿತ್ರರಂಗಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
– ಎಸ್.ಎ.ಚಿನ್ನೇಗೌಡ, ಚಲನಚಿತ್ರ ಮಂಡಳಿ ಅಧ್ಯಕ್ಷ
ಕರ್ನಾಟಕದಲ್ಲಿ ನಮ್ಮ ಸರ್ಕಾರವು ರೈತರ ಸಾಲ ಮನ್ನಾ ಮಾಡಿ, ಅವರಿಗೆ ನ್ಯಾಯ ಒದಗಿಸಿದೆ. ಕೇಂದ್ರ ಸರ್ಕಾರಕ್ಕೆ ಶ್ರೀಮಂತರ ಸಾಲ ಮನ್ನಾ ಮಾಡಲು ಸಾಧ್ಯವಾಗಿರುವಾಗ, ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?
– ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
ಇದು ಕರ್ನಾಟಕದ ಬಜೆಟ್ ಅಲ್ಲ. ಹಾಸನ, ಮಂಡ್ಯ, ರಾಮನಗರ ಬಜೆಟ್. ಉತ್ತರ ಕರ್ನಾಟಕ, ಹೈದರಾಬಾದ್-ಕರ್ನಾಟಕಕ್ಕೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಹೈ-ಕ ವಿಶೇಷ ಪ್ಯಾಕೇಜ್ ಬಗ್ಗೆ ಪ್ರಸ್ತಾಪ ಮಾಡಿಲ್ಲ.
– ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ
ಬಹು ನಿರೀಕ್ಷಿತ ಬಜೆಟ್ ಅನ್ನು ನಮ್ಮ ಸರ್ಕಾರ ಮಂಡಿಸಿದ್ದು ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ, ತೋಟಗಾರಿಕೆ ಇತರೆ ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿಂದಿನ ಯೋಜನೆಗಳನ್ನು ಮುಂದುವರಿಸಲಾಗುತ್ತದೆ.
– ಶಿವಾನಂದ ಎಸ್.ಪಾಟೀಲ್, ಆರೋಗ್ಯ ಸಚಿವ
ರಾಜ್ಯಸರ್ಕಾರದ ಬಜೆಟ್ನಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ. ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ರಕ್ಷಿಸಲು ಸಾಲಮನ್ನಾ ಮಾಡಲಾಗಿದೆ. ಮತ್ತೆ ಸಾಲ ನೀಡಲು 6.500 ಕೋಟಿ ರೂ. ಮೀಸಲಿಟ್ಟಿದೆ.
– ಎಚ್.ವಿಶ್ವನಾಥ್, ಶಾಸಕರು
ರೈತರ ಸಾಲ ಮನ್ನಾ ಮಾಡುವಂತಹ ದಿಟ್ಟ ನಿರ್ಧಾರವನ್ನು ಸರಕಾರ ಘೋಷಿಸಿದೆ. ಇದೇ ಮೊದಲ ಬಾರಿಗೆ ಇಸ್ರೇಲ್ ಮಾದರಿ ಕೃಷಿಗೆ ಮನ್ನಣೆ ನೀಡಲಾಗಿದೆ. ಇದೊಂದು ಸಮತೋಲನದ ಬಜೆಟ್.
– ಆರ್.ವಿ.ದೇಶಪಾಂಡೆ, ಕಂದಾಯ ಸಚಿವ
ಇದು ರಾಜ್ಯದ ಜನತೆಗೆ ಸಿಕ್ಕಿದ ದೋಖಾ ಬಜೆಟ್. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಸಿಎಂ ಹೇಳಿಕೊಂಡಿದ್ದರು. ಆದರೆ, ಹೇಳಿದಂತೆ ಅವರು ನಡೆದುಕೊಂಡಿಲ್ಲ.
– ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ
ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ. ಹೈದ್ರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂಬ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುವುದು.
– ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ
ರೈತರ ಸಾಲ ಮನ್ನಾ ಮಾಡಿರುವುದು ಸಮಾಧಾನ ತಂದಿದೆ. ಆದರೆ, ಸರ್ಕಾರ ಇದೀಗ 34 ಸಾವಿರ ಕೋಟಿಯಷ್ಟೇ ಮನ್ನಾ ಮಾಡಿದ್ದು, ಮುಂದಿನ ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿ.
– ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ರೈತ ಸಂಘ
ಸಾಲ ಮನ್ನಾ ಮಾಡಿರುವುದೇನೋ ಸರಿ, ಆದರೆ, ಹಣ ಹೊಂದಾಣಿಕೆ ಸೇರಿ ಇನ್ನಿತರ ವಿಷಯಗಳ ಬಗ್ಗೆ ಸ್ಪಷ್ಟತೆ ನೀಡಿಲ್ಲ. ಹೀಗಾಗಿ, ಇದೊಂದು ಸರಾಸರಿಯ ಬಜೆಟ್ ಎಂದು ಹೇಳಬಹುದಷ್ಟೇ.
– ಪ್ರೊ.ನರಸಿಂಹಯ್ಯ, ಆರ್ಥಿಕ ತಜ್ಞ
34 ಸಾವಿರ ಕೋಟಿ ರೂ. ಸಾಲಮನ್ನಾ ಎಂದು ಹೇಳಿದ್ದಾರೆ. ಆದರೆ ಸಾಲ ಅವಧಿ ಸೇರಿ ಅಂಕಿ-ಅಂಶಗಳ ಬಗ್ಗೆ ಬಜೆಟ್ನಲ್ಲಿ ನಿಖರ ಮಾಹಿತಿ ನೀಡಿಲ್ಲ. ಉತ್ತರಕರ್ನಾಟಕವನ್ನು ಕಡೆಗಣಿಸಿರುವುದು ಸರಿಯಲ್ಲ.
– ಬಸವರಾಜ ಬೊಮ್ಮಾಯಿ, ಬಿಜೆಪಿ ಶಾಸಕ
ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ನೀಡಲಾಗುತ್ತಿರುವ ಅಕ್ಕಿಯನ್ನು 7 ರಿಂದ 5ಕ್ಕೆ ಕಡಿತಗೊಳಿಸಿರುವ ಕ್ರಮ ಸರಿಯಲ್ಲ. ಸರ್ಕಾರ ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು. ಬಡವರಿಗೆ ಅನ್ಯಾಯವಾಗಬಾರದು.
– ಡಿ.ಕೆ.ಸುರೇಶ್, ಬೆಂಗಳೂರು ಗ್ರಾಮಾಂತರ ಸಂಸದ
9 ಜಿಲ್ಲಾ ಘಟಕಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಿ ಕ್ಲಸ್ಟರ್ ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಿಸಿದ್ದಾರೆ. ವಾಣಿಜ್ಯ ತೆರಿಗೆ ಆಡಳಿತವನ್ನು ವಿವೇಚಿಸಲು ಕರಸಮಾಧಾನ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ.
– ವಿಜಯ್ ಕುಮಾರ್, ಸಹಾಯಕ ಕಾರ್ಯದರ್ಶಿ, ಎಫ್ಕೆಸಿಸಿಐ
ರಾಜ್ಯ ನೌಕರರಿಗೆ ಎನ್ಪಿಎಸ್ ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ ಜಾರಿ ಮಾಡುತ್ತೇ ವೆಂದು ಕುಮಾರಸ್ವಾಮಿ ಹೇಳಿದ್ದರು. ಆದರೆ, ಬಜೆಟ್ನಲ್ಲಿ ಎನ್ಪಿಎಸ್ ಯೋಜನೆಯ ವಿಚಾರವನ್ನೇ ಎತ್ತಿಲ್ಲ.
– ರಮೇಶ್ ಜಿ. ಸಂಗಾ, ಅಧ್ಯಕ್ಷ, ಎನ್ಪಿಎಸ್ ನೌಕರರ ಸಂಘ
ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಈ ಬಜೆಟ್ ಪೂರಕವಾಗಿದೆ. ಎಸ್ಸಿ, ಎಸ್ಟಿ ಮಹಿಳೆಯರಿಗೆ ಉದ್ಯಮಶೀಲತಾ ಯೋಜನೆಯಡಿ 10 ಕೋಟಿ ವರೆಗೂ ಸಾಲ ನೀಡಲು ಮುಂದಾಗಿರುವುದು ಸ್ವಾಗತಾರ್ಹ.
– ರವಿಕಿರಣ್ ಕುಲಕರ್ಣಿ, ಪ್ರ.ಕಾರ್ಯದರ್ಶಿ, ಕಾಸಿಯಾ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.