ಬಜೆಟ್‌ನ ಪ್ರತಿಕ್ರಿಯೆ


Team Udayavani, Jul 6, 2018, 6:25 AM IST

180705kpn95.jpg

ನಾವು ಕೋರಿದ್ದ ಕೆಲ ಬೇಡಿಕೆಗಳನ್ನು ಮೊದಲ ಹಂತದಲ್ಲಿ ಈಡೇರಿಸಿದ್ದಾರೆ. ಚಿತ್ರರಂಗಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.  
– ಎಸ್‌.ಎ.ಚಿನ್ನೇಗೌಡ, ಚಲನಚಿತ್ರ ಮಂಡಳಿ ಅಧ್ಯಕ್ಷ

ಕರ್ನಾಟಕದಲ್ಲಿ ನಮ್ಮ ಸರ್ಕಾರವು ರೈತರ ಸಾಲ ಮನ್ನಾ ಮಾಡಿ, ಅವರಿಗೆ ನ್ಯಾಯ ಒದಗಿಸಿದೆ. ಕೇಂದ್ರ ಸರ್ಕಾರಕ್ಕೆ ಶ್ರೀಮಂತರ ಸಾಲ ಮನ್ನಾ ಮಾಡಲು ಸಾಧ್ಯವಾಗಿರುವಾಗ, ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ 

ಇದು ಕರ್ನಾಟಕದ ಬಜೆಟ್‌ ಅಲ್ಲ. ಹಾಸನ, ಮಂಡ್ಯ, ರಾಮನಗರ ಬಜೆಟ್‌. ಉತ್ತರ ಕರ್ನಾಟಕ, ಹೈದರಾಬಾದ್‌-ಕರ್ನಾಟಕಕ್ಕೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಹೈ-ಕ ವಿಶೇಷ ಪ್ಯಾಕೇಜ್‌ ಬಗ್ಗೆ ಪ್ರಸ್ತಾಪ ಮಾಡಿಲ್ಲ.
– ಜಗದೀಶ್‌ ಶೆಟ್ಟರ್‌, ಮಾಜಿ ಮುಖ್ಯಮಂತ್ರಿ

ಬಹು ನಿರೀಕ್ಷಿತ ಬಜೆಟ್‌ ಅನ್ನು  ನಮ್ಮ ಸರ್ಕಾರ ಮಂಡಿಸಿದ್ದು  ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ, ತೋಟಗಾರಿಕೆ ಇತರೆ ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿಂದಿನ ಯೋಜನೆಗಳನ್ನು ಮುಂದುವರಿಸಲಾಗುತ್ತದೆ.  
– ಶಿವಾನಂದ ಎಸ್‌.ಪಾಟೀಲ್‌, ಆರೋಗ್ಯ ಸಚಿವ

ರಾಜ್ಯಸರ್ಕಾರದ ಬಜೆಟ್‌ನಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ. ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ರಕ್ಷಿಸಲು ಸಾಲಮನ್ನಾ ಮಾಡಲಾಗಿದೆ. ಮತ್ತೆ ಸಾಲ ನೀಡಲು 6.500 ಕೋಟಿ ರೂ. ಮೀಸಲಿಟ್ಟಿದೆ. 
– ಎಚ್‌.ವಿಶ್ವನಾಥ್‌, ಶಾಸಕರು

ರೈತರ ಸಾಲ ಮನ್ನಾ ಮಾಡುವಂತಹ ದಿಟ್ಟ ನಿರ್ಧಾರವನ್ನು ಸರಕಾರ ಘೋಷಿಸಿದೆ. ಇದೇ ಮೊದಲ ಬಾರಿಗೆ ಇಸ್ರೇಲ್‌ ಮಾದರಿ ಕೃಷಿಗೆ ಮನ್ನಣೆ ನೀಡಲಾಗಿದೆ.  ಇದೊಂದು ಸಮತೋಲನದ ಬಜೆಟ್‌. 
– ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ

ಇದು ರಾಜ್ಯದ ಜನತೆಗೆ ಸಿಕ್ಕಿದ ದೋಖಾ ಬಜೆಟ್‌. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಸಿಎಂ ಹೇಳಿಕೊಂಡಿದ್ದರು. ಆದರೆ, ಹೇಳಿದಂತೆ ಅವರು ನಡೆದುಕೊಂಡಿಲ್ಲ.
– ಕೆ.ಎಸ್‌.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ

ಬಜೆಟ್‌ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ. ಹೈದ್ರಾಬಾದ್‌ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂಬ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುವುದು. 
– ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ರೈತರ ಸಾಲ ಮನ್ನಾ ಮಾಡಿರುವುದು ಸಮಾಧಾನ ತಂದಿದೆ. ಆದರೆ, ಸರ್ಕಾರ ಇದೀಗ 34 ಸಾವಿರ ಕೋಟಿಯಷ್ಟೇ ಮನ್ನಾ ಮಾಡಿದ್ದು, ಮುಂದಿನ ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿ.
– ಕೋಡಿಹಳ್ಳಿ ಚಂದ್ರಶೇಖರ್‌, ರಾಜ್ಯ ರೈತ ಸಂಘ 

ಸಾಲ ಮನ್ನಾ ಮಾಡಿರುವುದೇನೋ ಸರಿ, ಆದರೆ, ಹಣ ಹೊಂದಾಣಿಕೆ ಸೇರಿ ಇನ್ನಿತರ ವಿಷಯಗಳ ಬಗ್ಗೆ ಸ್ಪಷ್ಟತೆ ನೀಡಿಲ್ಲ.  ಹೀಗಾಗಿ, ಇದೊಂದು ಸರಾಸರಿಯ ಬಜೆಟ್‌ ಎಂದು ಹೇಳಬಹುದಷ್ಟೇ.
– ಪ್ರೊ.ನರಸಿಂಹಯ್ಯ, ಆರ್ಥಿಕ ತಜ್ಞ

34 ಸಾವಿರ ಕೋಟಿ ರೂ. ಸಾಲಮನ್ನಾ ಎಂದು ಹೇಳಿದ್ದಾರೆ. ಆದರೆ ಸಾಲ ಅವಧಿ ಸೇರಿ ಅಂಕಿ-ಅಂಶಗಳ ಬಗ್ಗೆ ಬಜೆಟ್‌ನಲ್ಲಿ ನಿಖರ ಮಾಹಿತಿ ನೀಡಿಲ್ಲ. ಉತ್ತರಕರ್ನಾಟಕವನ್ನು ಕಡೆಗಣಿಸಿರುವುದು ಸರಿಯಲ್ಲ. 
– ಬಸವರಾಜ ಬೊಮ್ಮಾಯಿ, ಬಿಜೆಪಿ ಶಾಸಕ

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ನೀಡಲಾಗುತ್ತಿರುವ ಅಕ್ಕಿಯನ್ನು 7 ರಿಂದ 5ಕ್ಕೆ ಕಡಿತಗೊಳಿಸಿರುವ ಕ್ರಮ ಸರಿಯಲ್ಲ. ಸರ್ಕಾರ ಈ ಬಗ್ಗೆ ಪುನರ್‌ ಪರಿಶೀಲನೆ ಮಾಡಬೇಕು. ಬಡವರಿಗೆ ಅನ್ಯಾಯವಾಗಬಾರದು.
– ಡಿ.ಕೆ.ಸುರೇಶ್‌, ಬೆಂಗಳೂರು ಗ್ರಾಮಾಂತರ ಸಂಸದ

9 ಜಿಲ್ಲಾ ಘಟಕಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಿ ಕ್ಲಸ್ಟರ್‌ ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಿಸಿದ್ದಾರೆ. ವಾಣಿಜ್ಯ ತೆರಿಗೆ ಆಡಳಿತವನ್ನು ವಿವೇಚಿಸಲು ಕರಸಮಾಧಾನ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ. 
– ವಿಜಯ್‌ ಕುಮಾರ್‌, ಸಹಾಯಕ ಕಾರ್ಯದರ್ಶಿ, ಎಫ್ಕೆಸಿಸಿಐ

ರಾಜ್ಯ ನೌಕರರಿಗೆ ಎನ್‌ಪಿಎಸ್‌ ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ ಜಾರಿ ಮಾಡುತ್ತೇ ವೆಂದು ಕುಮಾರಸ್ವಾಮಿ ಹೇಳಿದ್ದರು. ಆದರೆ, ಬಜೆಟ್‌ನಲ್ಲಿ ಎನ್‌ಪಿಎಸ್‌ ಯೋಜನೆಯ ವಿಚಾರವನ್ನೇ ಎತ್ತಿಲ್ಲ.  
– ರಮೇಶ್‌ ಜಿ. ಸಂಗಾ, ಅಧ್ಯಕ್ಷ, ಎನ್‌ಪಿಎಸ್‌ ನೌಕರರ ಸಂಘ

ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಈ ಬಜೆಟ್‌ ಪೂರಕವಾಗಿದೆ. ಎಸ್ಸಿ, ಎಸ್ಟಿ ಮಹಿಳೆಯರಿಗೆ ಉದ್ಯಮಶೀಲತಾ ಯೋಜನೆಯಡಿ 10 ಕೋಟಿ ವರೆಗೂ ಸಾಲ ನೀಡಲು ಮುಂದಾಗಿರುವುದು ಸ್ವಾಗತಾರ್ಹ. 
– ರವಿಕಿರಣ್‌ ಕುಲಕರ್ಣಿ,  ಪ್ರ.ಕಾರ್ಯದರ್ಶಿ, ಕಾಸಿಯಾ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.