ತ್ಯಾಜ್ಯ ಘಟಕದ ಸುತ್ತ ಬಫರ್ ಜೋನ್
Team Udayavani, Jun 16, 2018, 11:35 AM IST
ಬೆಂಗಳೂರು: ದುರ್ವಾಸನೆ ತಡೆಯುವ ಉದ್ದೇಶದಿಂದ ದೊಡ್ಡಬಿದರಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕದ ಸುತ್ತ 200 ಮೀ. ಬಫರ್ ವಲಯ ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳೊಂದಿಗೆ ಶುಕ್ರವಾರ ದೊಡ್ಡಬಿದರಕಲ್ಲು ಹಾಗೂ ಹೆಮ್ಮಿಗೆಪುರ ತ್ಯಾಜ್ಯ ಸಂಸ್ಕರಣೆ ಘಟಕಗಳ ಪರಿಶೀಲನೆ ನಡೆಸಿದ ಅವರು, ಘಟಕದ ಸುತ್ತ ಬಫರ್ ವಲಯ ನಿರ್ಮಾಣದಿಂದ ದುರ್ವಾಸನೆ ಪ್ರಮಾಣ ಕಡಿಮೆ ಮಾಡಬಹುದಿದ್ದು, ಜಮೀನು ಮಾಲೀಕರು, ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ದಂಡದಿಂದ ಪರಿಹಾರ ಸಿಗದು: ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಸಮರ್ಪಕವಾಗಿ ವಿಂಗಡಣೆ ಆಗದ ಕಾರಣ ಸಮಸ್ಯೆ ಸೃಷ್ಟಿಯಾಗುತ್ತಿದೆ. ಜನ ತ್ಯಾಜ್ಯ ವಿಂಗಡಿಸಿ ಕೊಡುವುದರಿಂದ ತ್ಯಾಜ್ಯ ವಿಲೇವಾರಿ ಸುಲಭವಾಗಲಿದೆ. ತ್ಯಾಜ್ಯ ವಿಂಗಡಣೆ ಮಾಡದವರು ಹಾಗೂ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸುವುದು ಎರಡು ನಿಮಿಷದ ಕೆಲಸ. ಆದರೆ, ದಂಡದಿಂದ ಸಮಸ್ಯೆ ಪರಿಹಾರವಾಗದು. ಬದಲಿಗೆ ಸಮಸ್ಯೆಗೆ ಪರಿಹರಿಸಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದರು.
ವಿಶೇಷ ಸಭೆ: ವೈಜ್ಞಾನಿಕವಾಗಿ ನಿರ್ಮಿಸಿರುವ ದೊಡ್ಡ ಬಿದರಕಲ್ಲು ತ್ಯಾಜ್ಯ ಸಂಸ್ಕರಣೆ ಘಟಕದಲ್ಲಿ ಅತ್ಯಾಧುನಿಕ ಯಂತ್ರಗಳಿದ್ದು, ನಿತ್ಯ 150 ಟನ್ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸು ಸಾಮರ್ಥ್ಯವಿದೆ. ಘಟಕದ ಸಾಮರ್ಥ್ಯ ವೃದ್ಧಿಸುವ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳು, ಇತರೆ ನಗರಗಳು ತ್ಯಾಜ್ಯಕ್ಕೆ ವ್ಯಯ ಮಾಡುತ್ತಿರುವ ಹಣದ ಪ್ರಮಾಣ ಹಾಗೂ ಪಾಲಿಕೆಯಲ್ಲಿ ತ್ಯಾಜ್ಯ ವಿಲೇವಾರಿಗೆ ವ್ಯಯಿಸುತ್ತಿರುವ ಹಣದ ಕುರಿತು ಮಾಹಿತಿ ಪಡೆಯಲು ವಿಶೇಷ ಸಭೆ ಕರೆಯಲಾಗುವುದು ಎಂದು ಸಚಿವರು ಹೇಳಿದರು.
ಶಾಸಕ ಎಸ್.ಟಿ.ಸೋಮಶೇಖರ್, ಮೇಯರ್ ಆರ್.ಸಂಪತ್ರಾಜ್, ಎಂ.ಶಿವರಾಜು, ಬಿಬಿಎಂಪಿ ಆಯುಕ್ತ ಮಹೇಶ್ವರ್ರಾವ್, ಘನತ್ಯಾಜ್ಯ ನಿರ್ವಹಣೆ ವಿಭಾಗದ ಜಂಟಿ ಆಯುಕ್ತ ಸಫ್ರಾಜ್ ಖಾನ್ ಹಾಜರಿದ್ದರು.
ಡಿಸಿಎಂಗೆ ಘೇರಾವ್: ದೊಡ್ಡಬಿದರಕಲ್ಲು ಘಟಕಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಸ್ಥಳೀಯ ನಾಗರಿಕರು ಘೇರಾವ್ ಹಾಕಿದರು. “ಘಟಕದಿಂದ ಹೊಮ್ಮುತ್ತಿರುವ ದುರ್ವಾಸನೆಯಿಂದ ತೀವ್ರ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ಸ್ಥಳೀಯರೊಂದಿಗೆ ಮಾತನಾಡಿದ ಡಿಸಿಎಂ, ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ