ಬಫ‌ರ್‌ಝೋನ್‌ ವ್ಯಾಪ್ತಿ ಸಡಿಲಕ್ಕೆ ಚಿಂತನೆ


Team Udayavani, Sep 1, 2018, 1:02 PM IST

blore-6.jpg

ಬೆಂಗಳೂರು: ನಗರದ ಕೆರೆ ಹಾಗೂ ರಾಜ ಕಾಲುವೆಗಳ ಸುತ್ತ 25 ಮೀಟರ್‌ನಿಂದ 75 ಮೀಟರ್‌ ವರೆಗೆ ನಿರ್ಬಂಧಿತ ಪ್ರದೇಶ (ಬಫ‌ರ್‌ ಝೋನ್‌) ಕಾಯ್ದಿರಿಸಬೇಕೆಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಧ್ಯಂತರ ಆದೇಶ ನೀಡಿದ್ದರೂ ಬಫ‌ರ್‌ ಝೋನ್‌ ಮಿತಿ ಸಡಿಲಿಸಲು ಸರ್ಕಾರ ಚಿಂತಿಸಿದಂತಿದ್ದು, ಮತ್ತೆ ಕೆರೆ, ಕಾಲುವೆಗಳ ಸುತ್ತಮುತ್ತ ಹೊಸ ಕಟ್ಟಡಗಳು ತಲೆಯೆತ್ತುವವೇ ಎಂಬ ಆತಂಕ ಎದುರಾಗಿದೆ.

ಕಾನ್ಫಿಡರೇಷನ್‌ ಆಫ್ ರಿಯಲ್‌ ಎಸ್ಟೇಟ್‌, ಡೆವಲಪರ್ ಅಸೋಸಿಯೇಷನ್‌ ಆಫ್ ಇಂಡಿಯಾ (ಕ್ರೆಡಾಯ್‌) ಒಕ್ಕೂಟದ ಪ್ರಮುಖರ ಭೇಟಿ ಬಳಿಕ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು
ಎನ್‌ಜಿಟಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲದ ಕಾರಣ ನಿರ್ಬಂಧ ಮಿತಿಯನ್ನು ಸಡಿಲಿಸಲು ಸರ್ಕಾರ ಚಿಂತಿಸಿದೆ
ಎಂಬುದಾಗಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ನಗರದಲ್ಲಿ ಕೆರೆಗಳ ಮಾಲಿನ್ಯ, ನಾಶ, ಒತ್ತುವರಿ ಹಾಗೂ ರಾಜ ಕಾಲುವೆಗಳ ಒತ್ತುವರಿ, ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ನಗರದ ಸುಸ್ಥಿರ ಬೆಳವಣಿಗೆ ಜತೆಗೆ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಸಲುವಾಗಿ ಎನ್‌ಜಿಟಿ ಕೆರೆ, ಕಾಲುವೆಗಳ ಸುತ್ತ ಬಫ‌ರ್‌ ಝೋನ್‌ ವ್ಯಾಪ್ತಿ ನಿಗದಿಪಡಿಸಿತ್ತು.

ಕೆರೆಯ ಅಂಚಿನಿಂದ 75 ಮೀಟರ್‌, ಪ್ರಾಥಮಿಕ ಕಾಲುವೆಯ ಅಂಚಿನಿಂದ 50 ಮೀಟರ್‌, ದ್ವಿತೀಯ ಹಂತದ ಕಾಲುವೆಯ ತಡೆಗೋಡೆಯಿಂದ 35 ಮೀಟರ್‌ ಹಾಗೂ ತೃತೀಯ ಹಂತದ ಕಾಲುವೆ ಅಂಚಿನಿಂದ 25 ಮೀಟರ್‌ ಪ್ರದೇಶವನ್ನು ಬಫ‌ರ್‌
ಝೋನ್‌ ಎಂದು ಕಾಯ್ದಿರಿಸುವಂತೆ ಎನ್‌ಜಿಟಿ ಮಧ್ಯಂತರ ಆದೇಶ ಹೊರಡಿಸಿತ್ತು. 

ಈ ಬಫ‌ರ್‌ ಝೋನ್‌ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡದಂತೆಯೂ ಆದೇಶದಲ್ಲಿ ತಿಳಿಸಿತ್ತು. ಬಫ‌ರ್‌ ಜೋನ್‌ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿದ್ದು, ಪರಿಸರವಾದಿಗಳಲ್ಲಿ ತುಸು ಸಮಾಧಾನ ತಂದಿತ್ತು. ಇದೀಗ ಉಪಮುಖ್ಯಮಂತ್ರಿಗಳ ಹೇಳಿಕೆಯಿಂದಾಗಿ ಮತ್ತೆ ಬಫ‌ರ್‌ ಝೋನ್‌ನಲ್ಲಿ ಹೊಸ ಕಟ್ಟಡಗಳು ನಿರ್ಮಾಣವಾಗುವ ಆತಂಕ ಎದುರಾಗಿದೆ.

ವಿಧಾನಸೌಧದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಕ್ರೆಡಾಯ್‌ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಕೆರೆ, ರಾಜಕಾಲುವೆಗಳಿಗೆ ಬಫ‌ರ್‌ ಝೋನ್‌ ನಿಗದಿಪಡಿಸಿರುವ ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನೀಡಿರುವ ಆದೇಶವನ್ನು ಕಾನೂನಾತ್ಮಕವಾಗಿ ಸಡಿಲಗೊಳಿಸುವ ಬಗ್ಗೆ ಪರಿಶೀಲಿಸಲಾಗುವುದು. ಬಫ‌ರ್‌ಝೋನ್‌ ನಿಗದಿಗೆ ಸಂಬಂಧಿಸಿದಂತೆ ಎನ್‌ಜಿಟಿ ನೀಡಿರುವ ಆದೇಶ ಪಾಲಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಸಡಿಲಗೊಳಿಸ ಬೇಕಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಕೆರೆ, ರಾಜಕಾಲುವೆಗಳ ಸುತ್ತ 25ರಿಂದ 75 ಮೀಟರ್‌ವರೆಗೆ ಬಫ‌ರ್‌ಝೋನ್‌ ನಿಗದಿಪಡಿಸಿ ಹಸಿರು ನ್ಯಾಯಾಧಿಕರಣ ಆದೇಶ ಹೊರಡಿಸಿದೆ. ದೇಶದ ಬೇರಾವುದೇ ನಗರಗಳಿಗೂ ಈ ನಿಯಮ ವಿಧಿಸಿಲ್ಲ. ಕೇವಲ ಬೆಂಗಳೂರಿಗೆ ಸೀಮಿತವಾಗಿ ಈ ಆದೇಶವಿದೆ ಎಂದರು.
 
ಈ ಎಲ್ಲಾ ಕಾರಣಗಳಿಂದಾಗಿ ಬಫ‌ರ್‌ಝೋನ್‌ಗೆ ಸಂಬಂಧಿಸಿದಂತೆ ಎನ್‌ಜಿಟಿ ವಿಧಿಸಿರುವ ನಿರ್ಬಂಧವನ್ನು ಸಡಿಲಗೊಳಿಸುವಂತೆ ಕ್ರೆಡಾಯ್‌ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಅದರಂತೆ ಕಾನೂನಾತ್ಮಕವಾಗಿ ಪರಿಶೀಲಿಸಿ ನಿರ್ಬಂಧ ಸಡಿಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

ದುರದೃಷ್ಟಕರ ಚಿಂತನೆ ನಗರದ ಕೆರೆ, ಕಾಲುವೆಗಳನ್ನು ಉಳಿಸುವ ಜತೆಗೆ ಪರಿಸರ ಸಂರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಕೆರೆ , ಕಾಲುವೆಗಳ ಸುತ್ತ ಬಫ‌ರ್‌ ಜೋನ್‌ ವ್ಯಾಪ್ತಿ ನಿಗದಿಪಡಿಸಿ ಮಧ್ಯಂತರ
ಆದೇಶ ನೀಡಿತ್ತು. ಆ ನಿರ್ಬಂಧ ಮಿತಿ ಸಡಿಲಿಸಲು ಪ್ರಯತ್ನಿಸುವುದಾಗಿ ಸರ್ಕಾರ ಚಿಂತನೆ ನಡೆಸಿರುವುದು ದುರದೃಷ್ಟಕರ ಎಂದು “ನಮ್ಮ ಬೆಂಗಳೂರು ಪ್ರತಿಷ್ಠಾನ’ದ ಸಿಇಒ ಶ್ರೀಧರ್‌ ಪಬ್ಬಿಸೆಟ್ಟಿ “ಉದಯವಾಣಿ’ಗೆ ತಿಳಿಸಿದರು.

ಬೆಳ್ಳಂದೂರು ಕೆರೆ ಅಂಗಳದಲ್ಲಿ ಡೆವಲಪರ್‌ ಸಂಸ್ಥೆ ಅಪಾರ್ಟ್‌ಮೆಂಟ್‌ ನಿರ್ಮಾಣ ಪ್ರಶ್ನಿಸಿ ಪ್ರತಿಷ್ಠಾನವು ಕಾನೂನು ಹೋರಾಟ ಆರಂಭಿಸಿತ್ತು. ಅದರಂತೆ ಎನ್‌ಜಿಟಿ ಮಹತ್ತರ ತೀರ್ಪು ನೀಡಿತ್ತು. ಇದೀಗ ಸರ್ಕಾರ ಬಫ‌ರ್‌ ಝೋನ್‌ ಮಿತಿಯನ್ನು ಸಡಿಲಿಸಲು ಮುಂದಾದರೆ ಮತ್ತೆ ಹೊಸ ಕಟ್ಟಡಗಳು ನಿರ್ಮಾಣವಾಗುವ ಸಾಧ್ಯತೆ ಇದೆ. ಪ್ರಕರಣ ನ್ಯಾಯಾಲಯ ದಲ್ಲಿರುವಾಗ ಈ ರೀತಿ ಚಿಂತನೆ ನಡೆಸಿರುವುದು ಸೂಕ್ತವೆನಿಸದು. ರಾಜ್ಯ ಸರ್ಕಾರ ತನ್ನ ನಿಲುವನ್ನು ನ್ಯಾಯಾಲಯಕ್ಕೆ ತಿಳಿಸಿದರೆ ಮುಂದೆ ಸೂಕ್ತ ವಾದವನ್ನು ಪ್ರತಿಷ್ಠಾನ ಮಂಡಿಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.