ನಕಲಿ ಕೀ ಬಳಸಿ ಬೈಕ್ ಕದಿಯುತ್ತಿದ್ದವನ ಬಂಧನ
Team Udayavani, Sep 4, 2018, 12:19 PM IST
ಬೆಂಗಳೂರು: ನಕಲಿ ಕೀಲಿ ಬಳಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಉಮಾಶಂಕರ್ (41) ಎಂಬಾತನನ್ನು ಆರ್.ಟಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಆರ್.ಟಿ ನಗರ ವ್ಯಾಪ್ತಿಯಲ್ಲಿ ಕಡಿಮೆ ಬೆಲೆಗೆ ಸ್ಕೂಟರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮಾಹಿತಿ ಆಧರಿಸಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಫುಲ್ ಟೈಂ ಬೈಕ್ಗಳ ಕಳ್ಳನಾಗಿದ್ದು, ಹಲವು ವಾಹನ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಆತನಿಂದ 10.91 ಲಕ್ಷ ರೂ. ಮೌಲ್ಯದ 32 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.
ಗಂಗಾನಗರ ನಿವಾಸಿಯಾಗಿರುವ ಉಮಾಶಂಕರ್ ಬಿಕಾಂ ಪದವೀಧರನಾಗಿದ್ದ ಇಂಗ್ಲೀಷ್ ಸೇರಿದಂತೆ ಹಲವು ಭಾಷೆಗಳನ್ನು ಸರಾಗವಾಗಿ ಮಾತನಾಡುತ್ತಾನೆ. “ಅಮಲು’ ಭರಿಸುವ ಕೆಮ್ಮು ನಿವಾರಕವಾಗಿರುವ ಕೋರೆಕ್ಸ್ ಔಷಧ ಸೇವಿಸಿ ನಶೆ ಏರಿಸಿಕೊಂಡು ಓಡಾಡಿಕೊಂಡು . ರಸ್ತೆ ಬದಿ, ನಿರ್ಜನ ರಸ್ತೆಗಳು, ಪಾರ್ಕಿಂಗ್ ಸೇರಿದಂತೆ ವಿವಿಧೆಡೆ ನಿಲ್ಲಿಸಿರುವ ದ್ವಿಚಕ್ರ ವಾಹನಗಳನ್ನು ನಕಲಿ ಕೀಲಿ ಬಳಸಿ ಕಳವು ಮಾಡುತ್ತಿದ್ದ. ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಮೋಜಿನ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ