ಪತ್ನಿ ಹತ್ಯೆಗೆ ಮುನ್ನ “ಸಮಾಧಿ ಸ್ಥಳ’ ಗುರುತು


Team Udayavani, Aug 20, 2019, 3:05 AM IST

patni

ಬೆಂಗಳೂರು: ವೇತನ ಬಂದ ನಂತರ ಹಣ ನೀಡಲಿಲ್ಲ ಎಂಬ ವಿಚಾರಕ್ಕೆ ಪತ್ನಿಯನ್ನು ಕೊಲೆಮಾಡಿ, ನಾಪತ್ತೆಯಾಗಿದ್ದಾಳೆ ಎಂಬ ಕಥೆ ಕಟ್ಟಲು ಹೋದ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಶಿಲ್ಪಾ (21) ಎಂಬಾಕೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಕಲ್ಲೇಶ್‌ (32), ಆತನ ಸಹೋದರ ಕೃಷ್ಣಪ್ಪ ಎಂಬಾತನನ್ನು ಬಂಧಿಸಿರುವ ಇನ್ಸ್‌ಪೆಕ್ಟರ್‌ ಸುಬ್ರಹ್ಮಣ್ಯ ಸ್ವಾಮಿ ಎಂ.ಎಲ್‌, ನೇತೃತ್ವದ ತಂಡ ತನಿಖೆ ಮುಂದುವರಿಸಿದೆ.

ಬಳ್ಳಾರಿ ಮೂಲದ ಕಲ್ಲೇಶ್‌ ಹಾಗೂ ಶಿಲ್ಪಾ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದು, ದುರ್ಗಾ ಪರಮೇಶ್ವರಿ ಲೇಔಟ್‌ನಲ್ಲಿ ವಾಸವಿದ್ದರು. ಕಲ್ಲೇಶ್‌ ಸ್ವಿಗ್ಗಿ ಕಂಪನಿಯಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡಿಕೊಂಡಿದ್ದಾನೆ. ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಸಣ್ಣಪುಟ್ಟ ವಿಚಾರಕ್ಕೂ ದಂಪತಿ ನಡುವೆ ಜಗಳ ನಡೆಯುತ್ತಿತ್ತು.

ಒಂದು ತಿಂಗಳ ಹಿಂದೆ ಶಿಲ್ಪಾ ಖಾಸಗಿ ಕಂಪನಿಯೊಂದರಲ್ಲಿ ಹೌಸ್‌ ಕೀಪಿಂಗ್‌ ಕೆಲಸಕ್ಕೆ ಹೋಗುತ್ತಿದ್ದು, ಇದು ಕಲ್ಲೇಶ್‌ಗೆ ಇಷ್ಟವಿರಲಿಲ್ಲ. ಆ.12ರಂದು ಶಿಲ್ಪಾಗೆ ಸಂಬಳ ಬಂದಿತ್ತು. ಅದೇ ದಿನ ರಾತ್ರಿ ಪತ್ನಿಯನ್ನು ವೇತನದ ಹಣ ಕೊಡುವಂತೆ ಕೇಳಿದ್ದು, ಆಕೆ ಕೊಟ್ಟಿಲ್ಲ. ಇದರಿಂದ ಇಬ್ಬರ ನಡುವೆ ಜಗಳ ನಡೆದಿತ್ತು.

ಕಲ್ಲೇಶ್‌ ಪೂರ್ವನಿರ್ಧಾರಿತ ಸಂಚಿನಂತೆ ಆಕೆ ನಿದ್ದೆ ಹೋದ ಮೇಲೆ ದಿಂಬಿನಿಂದ ಆಕೆಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಪಕ್ಕದ ಬಡಾವಣೆಯಲ್ಲಿ ವಾಸವಿರುವ ತನ್ನ ಸಹೋದರ ಕೃಷ್ಣಪ್ಪನನ್ನು ಮನೆಗೆ ಕರೆಸಿಕೊಂಡು ಮೃತದೇಹವನ್ನು ಸಾಗಿಸಿ ನಿರ್ಜನ ಪ್ರದೇಶದಲ್ಲಿ ಗುಂಡಿ ತೋಡಿ ಮುಚ್ಚಿ, ಏನು ನಡೆಯದವರಂತೆ ಸುಮ್ಮನಿದ್ದಾರೆ.

ನಾಪತ್ತೆ ನಾಟಕ!: ಶಿಲ್ಪಾ ಮನೆಯಲ್ಲಿ ಕಾಣಿಸದಿದ್ದುದನ್ನು ಗಮನಿಸಿದ ಸ್ಥಳೀಯರು ಹಾಗೂ ಸಂಬಂಧಿಕರು, ಆಯಕೆ ಎಲ್ಲಿ ಹೋಗಿದ್ದಾಳೆ ಎಂದು ಪ್ರಶ್ನಿಸಿದಾಗ ಕಲ್ಲೇಶ ಪ್ರತಿ ಬಾರಿಯೂ ಒಂದೊಂದು ಸಬೂಬು ಹೇಳುತ್ತಿದ್ದ. ಹೀಗಾಗಿ ಶಿಲ್ಪಾಳ ಸಂಬಂಧಿಕರು ಪೊಲೀಸರಿಗೆ ದೂರು ನೀಡು, ಅವರೇ ಹುಡುಕುತ್ತಾರೆ ಎಂದು ಹೇಳಿದ್ದರು. ನೀನು ದೂರು ನೀಡದಿದ್ದರೆ ನಾವೇ ಬೆಂಗಳೂರಿಗೆ ಬಂದು ದೂರು ನೀಡುತ್ತೇವೆ ಎಂದಿದ್ದರು.

ಇದರಿಂದ ಕಂಗಾಲಾದ ಕಲ್ಲೇಶ್‌ ಆ.17ರಂದು ಕೊತ್ತನೂರು ಠಾಣೆಯಲ್ಲಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ. ಆತನ ಅನುಮಾನಸ್ಪದ ವರ್ತನೆ ಕಂಡು ಅನುಮಾನಗೊಂಡ ಪೊಲೀಸರು, ವಿಚಾರಣೆ ನಡೆಸಿದಾಗ ಪನ್ನಿಯನ್ನು ಕೊಂದಿರುವುದಾಗಿ ಬಾಯ್ಬಿಟ್ಟಿದ್ದಾನೆ ಎಂದು ಹಿರಿಯ ಅಧಿಕಾರಿ ತಿಳಿಸಿದರು. ಆರೋಪಿ ಕಲ್ಲೇಶ್‌ ಪತ್ನಿ ಶಿಲ್ಪಾಳ ಕೊಲೆ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಬೇಕಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.