ರೈಲು ನಿಲ್ದಾಣದ ಬಾಗಿಲಿಗೇ ಬಸ್‌


Team Udayavani, Dec 17, 2019, 10:31 AM IST

bng-tdy-3

ಬೆಂಗಳೂರು: ಮೆಜೆಸ್ಟಿಕ್‌ನ ಸಿಟಿ ರೈಲು ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರಿಗೊಂದು ಸಿಹಿ ಸುದ್ದಿ. ಬಿಎಂಟಿಸಿ ಬಸ್‌ಗಾಗಿ ಇನ್ಮುಂದೆ ಲಗೇಜು ಹೊತ್ತು, ಸ್ಕೈವಾಕ್‌ ಅಥವಾ ಸುರಂಗಮಾರ್ಗ ಹತ್ತಿ-ಇಳಿಯುವ ಸರ್ಕಸ್‌ ಮಾಡಬೇಕಿಲ್ಲ. ನಿಲ್ದಾಣದ ಬಾಗಿಲಿಗೇ ಬಸ್‌ ಗಳು ಬರಲಿವೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ನೈರುತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ ಸಹಯೋಗದಲ್ಲಿ ನಗರದ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ ಆರ್‌) ರೈಲು ನಿಲ್ದಾಣದ ಮೂರನೇ ಪ್ರವೇಶ ದ್ವಾರದಿಂದ ಸೋಮವಾರ ಈ ಸೇವೆಗೆ ಚಾಲನೆ ನೀಡಿತು. ಪ್ರಾಯೋಗಿಕವಾಗಿ ಈ ಪ್ರವೇಶ ದ್ವಾರದಿಂದ ಕಾಡುಗೋಡಿ, ಹೊಸಕೋಟೆ, ಅತ್ತಿಬೆಲೆ, ಸರ್ಜಾಪುರ, ಯಲಹಂಕ ಮತ್ತು ನಾಗವಾರಕ್ಕೆ ತಲಾ 9 ಟ್ರಿಪ್‌ಗ್ಳಲ್ಲಿ ಒಟ್ಟಾರೆ ದಿನಕ್ಕೆ 54 ಸುತ್ತುವಳಿಯಲ್ಲಿ ಬಸ್‌ ಸಂಚಾರ ಸೌಲಭ್ಯ ಸಿಗಲಿದೆ. ಬಸ್‌ಗಳು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10.30ರವರೆಗೆ ಕಾರ್ಯಾಚರಣೆ ಮಾಡಲಿವೆ.

ರೈಲು ನಿಲ್ದಾಣದ ಎದುರಿನಲ್ಲೇ ಬಿಎಂಟಿಸಿ ಬಸ್‌ ನಿಲ್ದಾಣವಿದ್ದರೂ, ವಿವಿಧೆಡೆಯಿಂದ ಬಸ್‌ನಲ್ಲಿ ಬರುವವರು ರೈಲು ನಿಲ್ದಾಣಕ್ಕೆ ಹಾಗೂ ರೈಲು ನಿಲ್ದಾಣದಿಂದ ಬಸ್‌ ನಿಲ್ದಾಣಕ್ಕೆ ತೆರಳಲು ಸರ್ಕಸ್‌ ಮಾಡಬೇಕಿತ್ತು. ಇದರಿಂದ ಮಹಿಳೆಯರು, ಹಿರಿಯ ನಾಗರಿಕರಿಗೆ ಹೆಚ್ಚು ಸಮಸ್ಯೆ ಆಗುತ್ತಿತ್ತು. ಹಾಗಾಗಿ, ರೈಲು ಪ್ರಯಾಣಿಕರು ಆಟೋ, ಟ್ಯಾಕ್ಸಿಗಳ ಮೊರೆಹೋಗುತ್ತಿದ್ದರು. ಇದರಿಂದ ಪರೋಕ್ಷವಾಗಿ ಬಿಎಂಟಿಸಿ ಆದಾಯಕ್ಕೂ ಕತ್ತರಿ ಬೀಳುತ್ತಿತ್ತು. ಹೊಸ ವ್ಯವಸ್ಥೆಯಿಂದ ಆ ಕಿರಿಕಿರಿ ಇರುವುದಿಲ್ಲ. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಈ ಸೇವೆಯನ್ನು ಮುಂದಿನ ದಿನಗಳಲ್ಲಿ ವಿಸ್ತರಿಸಲಾಗುವುದು ಎಂದು ಸಂಸ್ಥೆ ಅಧಿಕಾರಿಗಳು ತಿಳಿಸಿದರು.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ಸಾರ್ವಜನಿಕರನ್ನು ಸಮೂಹ ಸಾರಿಗೆಯತ್ತ ಹೆಚ್ಚಾಗಿ ಸೆಳೆಯುವ ಸಲುವಾಗಿ ಹೊಸ ಸೇವೆಗಳನ್ನು ಆರಂಭಿಸಲಾಗುತ್ತಿದೆ. ಅದರಂತೆ ಇದೀಗ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬಸ್‌ ಸೇವೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಸದ ಪಿ.ಸಿ. ಮೋಹನ್‌ ಮಾತನಾಡಿ, ಪ್ರಯಾಣಿಕರಿಗೆ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ನೀಡುವ ಸಲುವಾಗಿ ರೈಲು ನಿಲ್ದಾಣದಿಂದ ಬಸ್‌ ಸೇವೆ ಆರಂಭಿಸಲಾಗುತ್ತಿದೆ. ಉಪನಗರ ರೈಲು ಯೋಜನೆ ಅನುಷ್ಠಾನದ ಬಳಿಕ ಬಸ್‌ ಸೇವೆ ಮತ್ತಷ್ಟು ಹೆಚ್ಚಿಸಬೇಕಾಗುತ್ತದೆ ಎಂದರು.

ಇದಕ್ಕೂ ಮುನ್ನ ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ ಸೇವೆಗೆ ಚಾಲನೆ ನೀಡಿದರು. ಬೆಂಗಳೂರು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ ಸೇರಿದಂತೆ ಬಿಎಂಟಿಸಿ ಹಾಗೂ ರೈಲ್ವೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೆಟ್ರೋ ಪ್ರಯಾಣಿಕರಿಗಿಲ್ಲ ಅವಕಾಶ:  ನಗರಕ್ಕೆ ಬಂದಿಳಿಯುವ ರೈಲು ಪ್ರಯಾಣಿಕರು ಮೆಟ್ರೋ ಮೂಲಕ ವಿವಿಧ ಪ್ರದೇಶಗಳಿಗೆ ತೆರಳುವವರಿಗೆ ರಸ್ತೆ ದಾಟುವ ಸರ್ಕಸ್‌ ಅನಿವಾರ್ಯ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣ (ನೇರಳೆ ಮಾರ್ಗದಲ್ಲಿ ಹೋಗುವವರು) ಅಥವಾ ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕಾಗಿ ಕನಿಷ್ಠ 300 ಮೀಟರ್‌ ಸಂಚರಿಸಲೇಬೇಕಾಗುತ್ತದೆ. ಇನ್ನು ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಕ್ಕೆ ಬಂದಿಳಿದು, ಬಸ್‌ನಲ್ಲಿ ಬೇರೆ ಕಡೆಗೆ ಹೋಗುವವರಿಗೆ ಈ ಹೊಸ ವ್ಯವಸ್ಥೆ ಅನುಕೂಲ ಆಗಲಿದೆ.

ಮೈಸೂರಿಗೆ “ಮೆಮು’ ವಿಶೇಷ ರೈಲು: ಮೈಸೂರು-ಬೆಂಗಳೂರು -ಯಲಹಂಕ ನಡುವೆ ಮಂಗಳ ವಾರದಿಂದ “ಮೆಮು’ ವಿಶೇಷ ರೈಲು ಸಂಚಾರ ಆರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ ಟ್ವೀಟ್‌ ಮಾಡಿದ್ದಾರೆ. ಪ್ರತಿದಿನ ರಾತ್ರಿ 10.20ಕ್ಕೆ ಮೈಸೂರಿನಿಂದ ಹೊರಟು ಮಧ್ಯರಾತ್ರಿ 1.30ಕ್ಕೆ ಬೆಂಗಳೂರಿನ ಯಲಹಂಕ ತಲುಪಲಿದೆ. 2.30ಕ್ಕೆ ಯಲಹಂಕದಿಂದ ಹೊರಟು ಬೆಳಗ್ಗೆ 5.35ಕ್ಕೆ ಮೈಸೂರು ತಲುಪಲಿದೆ. ಬೆಳಗಿನ ಜಾವ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಮತ್ತು ಈ ಭಾಗದ ತರಕಾರಿ, ಹೂವು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ದರ ಪರಿಷ್ಕರಣೆ; ಸಾಧಕ-ಬಾಧಕ ಚರ್ಚೆ:  ಬಿಎಂಟಿಸಿ ಬಸ್‌ ಸಂಚರಿಸುತ್ತಿರುವ ಎಲ್ಲಾ ಮಾರ್ಗಗಳ ದರದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಸದ್ಯ ದರ ಇಳಿಕೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಶಿಖಾ ತಿಳಿಸಿದ್ದಾರೆ. ಬಸ್‌ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವೇ ಎಂಬುದರ ಬಗ್ಗೆ ಬಿಎಂಟಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಸ್‌ ಪ್ರಯಾಣದರ ಇಳಿಕೆ ಮಾಡುವಂತೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ದರ ಇಳಿಕೆ ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ನಗರದಲ್ಲಿ ಸಂಚಾರದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.