“ಗ್ರಾಮಗಳಿಗೆ ಅರೆಕಾಸಿನ ಮಜ್ಜಿಗೆ ಕೊಟ್ಟಂತೆ’
Team Udayavani, Feb 2, 2017, 11:40 AM IST
ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಗ್ರಾಮೀಣ ಭಾಗದ ಬಗ್ಗೆ ಘೋಷಣೆಗಳನ್ನು ಕೊಟ್ಟಿದ್ದಾರೆ. ಅಗತ್ಯವಿರುವಷ್ಟು ಹಣಕಾಸು ಒದಗಿಸಿಲ್ಲ. ಸ್ವಚ್ಚ ಭಾರತ ಸಲುವಾಗಿ ಪ್ರಚಾರ ಮಾಡುವ ಕೇಂದ್ರ ಸರ್ಕಾರ ಕೇವಲ 9 ಸಾವಿರ ಕೋಟಿ ಪಾಯಿ ಒದಗಿಸಿ, ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ದೇಶವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವ ರಾಜಕೀಯ ಇಚ್ಛಾ ಶಕ್ತಿಯಲ್ಲಿ ಕೇಂದ್ರ ಸರ್ಕಾರದ ಕೊರತೆ ಎದ್ದು ಕಾಣುತ್ತಿದೆ. ನೋಟು ಅಪನಗದೀಕರಣ ಮಾಡಿದ ನಂತರ ಬಂದಿರುವ ಹಣಕಾಸು ಉಪಯೋಗಿಸಿ ರೈತರು ಹಾಗೂ ಗ್ರಾಮೀಣ ಜನರಿಗೆ ವಿಶೇಷ ಕೊಡುಗೆಗಳು ಹರಿದು ಬರುತ್ತವೆ ಆಶಾ ಭಾವನೆ ಇಟ್ಟುಕೊಂಡಿದ್ದರು. ಮೋದಿ ಸರ್ಕಾರದ ಕೃಷಿಕರ ಬಗ್ಗೆ ಇರುವ ನಿರ್ಲಕ್ಷ್ಯ ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ