ಬಿವಿಕೆ ಅಯ್ಯಂಗಾರ್‌ ರಸ್ತೆ ಅವ್ಯವಸ್ಥೆಗಳ ಆಗರ


Team Udayavani, Feb 22, 2019, 6:23 AM IST

bvk-ayan.jpg

ಬೆಂಗಳೂರು: ಬೆಳಗ್ಗೆಯಿಂದ ರಾತ್ರಿವರೆಗೆ ಸಂಚಾರ ದಟ್ಟಣೆಯ ಕಿರಿಕಿರಿ, ಅಡ್ಡ ರಸ್ತೆಗಳಿಂದ ಒಮ್ಮೆಲೆ ಮೈಮೇಲೆ ಬರುವ ವಾಹನಗಳು, ಜನರಿಗೆ ಬಳಕೆಯಾಗದೆ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗಿರುವ ಪಾದಚಾರಿ ಮಾರ್ಗಗಳು, ರಸ್ತೆಯ ಬಹುತೇಕ ಭಾಗ ಅಕ್ರಮಿಸಿಕೊಂಡಿರುವ ವಾಹನಗಳು, ರಸ್ತೆ ಬದಿ ಕಂಡುಬರುವ ತ್ಯಾಜ್ಯ ರಾಶಿ…

ಶುಭ ಸಮಾರಂಭಗಳಿಗೆ ಬಟ್ಟೆ ಖರೀದಿಸುವ ವಿಚಾರದ ಬಂದಾಗ ಮೊದಲು ನೆನಪಾಗುವಂತಹ ಚಿಕ್ಕಪೇಟೆಯ ಬಿವಿಕೆ ಅಯ್ಯಂಗಾರ್‌ ರಸ್ತೆಯಲ್ಲಿ ನಿತ್ಯ ಕಂಡುಬರುವ ಸಾಮಾನ್ಯ ದೃಶ್ಯಗಳಿವು. ರಸ್ತೆಯಲ್ಲಿ ಭಾರಿ ಸಂಖ್ಯೆಯ ಜವಳಿ ಮಳಿಗೆಗಳಿರುವುದರಿಂದ ನಗರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಜನರು ಬಟ್ಟೆ ಖರೀದಿಗಾಗಿ ಇಲ್ಲಿಗೆ ಬರುತ್ತಾರೆ.

ಇದರೊಂದಿಗೆ ನಮ್ಮ ಮೆಟ್ರೋ ನಿಲ್ದಾಣವೂ ಸಹ ನಿರ್ಮಾಣವಾಗಿದೆ. ಅದರಂತೆ ನಿಲ್ದಾಣವಿರುವ ಒಂದು ಭಾಗ ವೇಗವಾಗಿ ಬೆಳೆಯುತ್ತಿದ್ದರೆ, ಮತ್ತೂಂದು ಕಡೆ ಅದಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಿದೆ. ಕೆ.ಜಿ.ರಸ್ತೆಯ ತುದಿಯಿಂದ ಆರಂಭವಾಗುವ ಬಿವಿಕೆ ರಸ್ತೆಯ ಎರಡೂ ಬದಿಗಳಲ್ಲಿ ಸಾವಿರಾರು ವಾಣಿಜ್ಯ ಮಳಿಗೆಗಳಿದ್ದು, ದೇವಾಲಯ, ಮಸೀದಿ ಹಾಗೂ ಚಿತ್ರಮಂದಿರ ಇರುವುದರಿಂದ ನಿತ್ಯ ಹತ್ತಾರು ಸಾವಿರ ಜನರು ಇಲ್ಲಿಗೆ ಭೇಟಿ ನೀಡುತ್ತಾರೆ.

ಇದರಿಂದಾಗಿ ತೀವ್ರ ಸಂಚಾರ ದಟ್ಟಣೆ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದರೂ, ಸ್ಥಳೀಯ ಸಂಸ್ಥೆಗಳು ಮಾತ್ರ ಸಮಸ್ಯೆ ಪರಿಹರಿಸುವ ಗೋಜಿಗೆ ಹೋಗಿಲ್ಲ. ಈ ರಸ್ತೆಯಲ್ಲಿ ಸಾರ್ವಜನಿಕರು, ವಾಹನ ಸವಾರರು ಒಂದು ರೀತಿಯ ಸಮಸ್ಯೆಗಳನ್ನು ಅನುಭವಿಸಿದರೆ, ವ್ಯಾಪಾರಿಗಳು ಮತ್ತೂಂದು ರೀತಿಯ ಸಮಸ್ಯೆಗಳನು ಅನುಭವಿಸುತ್ತಿದ್ದಾರೆ. 

ತಲೆ ಹಾಕದ ಸಂಚಾರ ಪೊಲೀಸರು: ರಸ್ತೆಯ ಎರಡೂ ಬದಿ ಕಾರು, ಟೆಂಪೋ, ಆಟೋಗಳು ಹಾಗೂ ಪಾದಚಾರಿ ಮಾರ್ಗವನ್ನು ದ್ವಿಚಕ್ರ ವಾಹನಗಳು ಅಕ್ರಮಿಸಿಕೊಂಡ ಪರಿಣಾಮ ಜನರಿಗೆ ತೊಂದರೆಯಾಗುತ್ತಿದೆ. ಜತೆಗೆ ಸಾವಿರಾರು ಜನರು ಭೇಟಿ ನೀಡುವುದರಿಂದ ಬೆಳಗ್ಗೆಯಿಂದ ರಾತ್ರಿವರೆಗೆ ದಟ್ಟಣೆ ಸಮಸ್ಯೆಯಿದ್ದರೂ, ಸಂಚಾರ ಪೊಲೀಸರು ಮಾತ್ರ ದಟ್ಟಣೆ ನಿವಾರಿಸಲು ಹಾಗೂ ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಮುಂದಾಗುವುದಿಲ್ಲ ಎಂದು ಸಾರ್ವಜನಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು.

ಪಾದಚಾರಿ ಮಾರ್ಗವೇ ಕಾಣೆ!: ಬಿವಿಕೆ ಅಯ್ಯಂಗಾರ್‌ ರಸ್ತೆಯಲ್ಲಿ ಪಾದಚಾರಿಗಳು ಅಪಾಯದ ನಡುವೆಯೇ ಸಂಚರಿಸಬೇಕಾದ ಪರಿಸ್ಥಿತಿಯಿದೆ. ಕೇವಲ ಒಂದೆರೆಡು ಅಡಿಗಳಿಗೆ ಸೀಮಿತವಾಗಿರುವ ಪಾದಚಾರಿ ಮಾರ್ಗಗಳನ್ನೂ ಬಹುತೇಕ ವಾಣಿಜ್ಯ ಮಳಿಗೆಗಳು ಸಂಪೂರ್ಣವಾಗಿ ಅಕ್ರಮಿಸಿಕೊಂಡಿದ್ದು, ಜನರು ವಿಧಿಯಿಲ್ಲದೆ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಪಾದಚಾರಿ ಮಾರ್ಗದಲ್ಲಿಯೇ ಮಳಿಗೆಯ ಜಾಹೀರಾತು ಫ‌ಲಕಗಳು, ಸಗಟು ಉತ್ಪನ್ನಗಳ ಬಾಕ್ಸ್‌ಗಳು, ವ್ಯಾಪಾರ ಉತ್ಪನ್ನಗಳನ್ನು ಇರಿಸಿಕೊಂಡಿದ್ದರೂ ಪಾಲಿಕೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವ ಗೋಜಿಗೆ ಹೋಗಿಲ್ಲ. 

ಅರ್ಧ ರಸ್ತೆ ವಾಹನಗಳಿಗೆ ಮೀಸಲು: ಈ ರಸ್ತೆಯಲ್ಲಿ ಅತಿ ಹೆಚ್ಚಿನ ವಾಣಿಜ್ಯ ಉದ್ದಿಮೆಗಳಿದ್ದು, ಸರಕು-ಸಾಗಾಟ ಪ್ರಕ್ರಿಯೆ ಹೆಚ್ಚಾಗಿರುತ್ತದೆ. ಆ ಹಿನ್ನೆಲೆಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೆ ಆಟೋಗಳು, ಟೆಂಪೋಗಳು ಹಾಗೂ ಮಾನವ ತಳ್ಳುಗಾಡಿಗಳು ಸಾಲುಗಟ್ಟಿ ನಿಂತಿರುತ್ತವೆ. ಈಗಾಗಲೇ ಕಿರಿದಾಗಿರುವ ರಸ್ತೆಯ ಅರ್ಧ ಭಾಗವನ್ನು ಈ ವಾಹನಗಳೇ ಕಬಳಿಸಿರುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. 

ರಸ್ತೆಯಲ್ಲೇ ಚರಂಡಿ ನೀರು: ಜಲಮಂಡಳಿಯಿಂದ ರಸ್ತೆಯಲ್ಲಿ ನಿರ್ಮಿಸಲಾಗಿರುವ ಮ್ಯಾನ್‌ಹೋಲ್‌ಗ‌ಳಿಂದ ಎರಡು ದಿನಗಳಿಗೊಮ್ಮೆ ಉಕ್ಕಿ ಹರಿದು ರಸ್ತೆಯಲ್ಲಿ ದುರ್ವಾಸನೆ ಹರಡುತ್ತದೆ. ಇನ್ನು ವಾಹನಗಳು ವೇಗವಾಗಿ ಸಂಚರಿಸಿದರೆ, ಕೊಳಚೆ ನೀರು ರಸ್ತೆಯಲ್ಲಿ ಓಡಾಡುವವರ ಮೈಮೇಲೆ ಬಿದ್ದ ಉದಾಹರಣೆಗಳೂ ಇವೆ. ಅವುಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಾಯೋಜನವಾಗಿಲ್ಲ ಎಂಬುದು ಇಲ್ಲಿನ ವ್ಯಾಪಾರಿಗಳ ಬೇಸರ.

ರಸ್ತೆಯಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ಸಂಚಾರ ದಟ್ಟಣೆಯಿರುತ್ತದೆ. ಹತ್ತಾರು ವರ್ಷಗಳಿಂದ ಇದೇ ಸಮಸ್ಯೆಯಿದ್ದರೂ ಸಂಚಾರ ಪೊಲೀಸರು ಮಾತ್ರ ಶಾಶ್ವತ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ. ರಸ್ತೆ ಪಕ್ಕದಲ್ಲಿಯೇ ಗ್ರಾಹಕರು ವಾಹನಗಳನ್ನು ನಿಲುಗಡೆ ಮಾಡುವುದರಿಂದ ಮತ್ತಷ್ಟು ಸಮಸ್ಯೆಯಾಗುತ್ತಿದ್ದು, ಸಂಚಾರ ಪೊಲೀಸರು ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು.
-ಅನುರಾಗ್‌, ಬೈಕ್‌ ಸವಾರ

ಸಮೀಪದ ಮಹಾರಾಜ ಕಾಂಪ್ಲೆಕ್ಸ್‌ನಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆಯಿದೆ. ಆದರೆ, ಗ್ರಾಹಕರು ಹಣ ಪಾವತಿಸಬೇಕೆಂಬ ಉದ್ದೇಶದಿಂದ ಮಳಿಗೆಗಳ ಮುಂದೆ ಅಥವಾ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುತ್ತಾರೆ. ಇನ್ನು ಪಾದಚಾರಿ ಮಾರ್ಗಗಳನ್ನು ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದು, ಪಾಲಿಕೆಯ ಅಧಿಕಾರಿಗಳು ಅವರನ್ನು ತೆರವುಗೊಳಿಸಲು ಕ್ರಮಕೈಗೊಳ್ಳುತ್ತಿಲ್ಲ.
-ರಮಣ್‌ ಸಿಂಗ್‌, ಜವಳಿ ವ್ಯಾಪಾರಿ

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.