2022ರ ವೇಳೆಗೆ ಎಲ್ಲರಿಗೂ ಸೂರು


Team Udayavani, Aug 30, 2017, 11:29 AM IST

2022-sooru.jpg

ಕೆ.ಆರ್‌.ಪುರ: 2022ರ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸೂರು ಕಲ್ಪಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದರು.

ನಗರದ ಐಟಿಐ ಕ್ರೀಡಾಂಗಣದಲ್ಲಿ ಕ್ವಿಟ್‌ ಇಂಡಿಯಾ ಚಳವಳಿಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಮಾತನಾಡಿ, 2022ರ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನೂ ತನ್ನ ಸ್ವಂತ ಸೂರು ಹೊಂದುವ ಮಹತ್ವದ ನಿರ್ಧಾರವನ್ನು ಪ್ರಧಾನಿ ಮೋದಿ ಹೊಂದಿದ್ದಾರೆ ಎಂದರು.

ಕಾರ್ಮಿಕ ಭವಿಷ್ಯ ನಿಧಿಯೂ ಅವರ ಧ್ಯೇಯವನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಮಿಕನೂ ತನ್ನ ನಿವೃತ್ತಿ ವೇಳೆಗೆ ಸ್ವಂತ ಸೂರು ಹೊಂದಲು ಹಲವು ಸೌಲಭ್ಯಗಳನ್ನು ಉನ್ನತೀಕರಿಸಲಾಗಿದೆ. ಕಾರ್ಮಿಕ ಭವಿಷ್ಯ ನಿಧಿಯೂ ಸಹ ಇದಕ್ಕೆ ಪೂರಕವಾಗಿದೆ, ಕಚೇರಿಗಳನ್ನು ಕಾಗದ ರಹಿತವಾಗಿಸಿ ಆಡಳಿತದಲ್ಲಿ ಪೂರ್ಣ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳುವ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಗಾಂಧೀಜಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಡಿದ್ದರು, ನಾವಿಂದು ಸಂಕಲ್ಪ$ ಸಿದ್ಧಿಯಡಿ ಭ್ರಷ್ಟಾಚಾರ, ಭಯೋತ್ಪಾದನೆ, ಜಾತಿವಾದ, ಕೋಮುವಾದ ತೊಲಗಿಸಿ ಎಂಬ ಘೋಷಣೆಯೊಡನೆ ಮುನ್ನುಗ್ಗಬೇಕಿದೆ ಎಂದು ಹೇಳಿದರು. ದೇಶಾದ್ಯಂತ 5 ಕೋಟಿ ಸದಸ್ಯರನ್ನು ಹೊಂದುವ ಮೂಲಕ ಭವಿಷ್ಯ ನಿಧಿ ವಿಶ್ವದ ಅತೀ ದೊಡ್ಡ ಸಾಮಾಜಿಕ ಭದ್ರತೆಯ ಸಂಘಟನೆ ಎಂಬ ಹೆಗ್ಗಳಿಕೆ ಗಳಿಸಿದೆ, ನಮ್ಮ ಆವೃತ್ತ ನಿಧಿ 1050 ಲಕ್ಷ ಕೋಟಿ ರೂ. ಗಳಾಗಿವೆ ಎಂದರು.

ಕೇಂದ್ರ ಸರ್ಕಾರ ಕಾರ್ಮಿಕರ ಪರವಾಗಿದ್ದು ಭವಿಷ್ಯ ನಿಧಿಯ ಬೋನಸ್‌ನ್ನು ಹೆಚ್ಚಿಸಿದ್ದೇವೆ, ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಿದೆ, ಸಾಮಾಜಿಕ ಭದ್ರತೆಯ ಅತಿ ಪ್ರಮುಖ ವ್ಯವಸ್ಥೆಯಿಂದ ಭವಿಷ್ಯ ನಿಧಿಯಾಗಿದೆ ಎಂದು ಹೇಳಿದರು.

ನಮ್ಮ ಇಲಾಖೆಯ ಪ್ರಮುಖ ಅಜೆಂಡಾ ಉದ್ಯೋಗ ಸೃಷ್ಟೀಕರಣ, ಕೈಗಾರಿಕಾ ಸಂಸ್ಥೆಗಳು ಮತ್ತು ಕಾರ್ಮಿಕರ ನಡುವೆ ಉತ್ತಮ ಸಂಬಂಧವನ್ನಿರಿಸುವುದು, ಕಾರ್ಮಿಕರ ಹಿತದೃಷ್ಟಿಯಿಂದ ಸುಧಾರಣೆಗಳನ್ನು ನಿರಂತರವಾಗಿ ಮಾಡಲಾಗುತ್ತಿದೆ. ಕಾರ್ಮಿಕರ ಸಂಬಳ ಮತ್ತು ಕೈಗಾರಿಕಗೆಳೊಂದಿಗೆ ಇರಬೇಕಾದ ನಂಟನ್ನು ಮುಂದಿನ ಲೋಕ ಮತ್ತು ರಾಜ್ಯಸಭೆಯ ಚರ್ಚೆಗಳಲ್ಲಿ ನಡೆಯಲಿದ್ದು ಹಲವು ಸುಧಾರಣೆಗಳು ನಡೆಯಲಿವೆ ಎಂದರು.

ದೇಶದಲ್ಲಿರುವ 42 ಕೋಟಿ ಅಸಂಘಟಿತ ಕಾರ್ಮಿಕರನ್ನು ದೃಷ್ಟಿಯಲ್ಲಿರಿಸಿರುವ ಕೇಂದ್ರ ಬಹುಸಂಖ್ಯೆಯಲ್ಲಿರುವ ಅವರ ಕ್ಷೇಮಾಭಿವೃದ್ಧಿಗೆ ಹಲವು ಯೋಜನೆಗಳ ಫ‌ಲ ನೀಡಲಿದ್ದು ಯುವಿಲ್‌ ಎಂಬ ಗುರಿತಿನ ಚೀಟಿ ನೀಡುವ ಸಾಮಾಜಿಕ ಭದ್ರತೆಗೆ ಅಗತ್ಯವಿರುವ ಆರೋಗ್ಯ, ವಿಮೆ ಸೇರಿ ಹಲವು ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಜಾತಿ, ಧರ್ಮ, ಅಧಿಕಾರಗಳ ನಡುವೆ ವಿಭಜನೆಯಾಗಿರುವ ಪ್ರಜೆಗಳು ನಾವು ಭಾರತೀತಯರೆಂದು ಹೇಳಿಕೊಳ್ಳುವ ಏಕತೆ ಮೂಡಬೇಕಿದೆ ಎಂದರು. ಕೇಂದ್ರ ಭವಿಷ್ಯನಿಧಿ ಆಯುಕ್ತ ಡಾ.ವಿ.ಪಿ ಜಾಯ್‌  ಮಾತನಾಡಿ, ದೇಶದಲ್ಲಿ ಇದುವರೆಗೂ 1 ಕೋಟಿ ಸದಸ್ಯರನ್ನು ಭವಿಷ್ಯ ನಿಧಿಗೆ ನೋಂದಣಿ ಮಾಡಿದ್ದು, ಕರ್ನಾಟಕದಲ್ಲಿ 13 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿದೆ.

ರಾಜ್ಯದಲ್ಲಿ 17 ಪ್ರಾದೇಶಿಕ ಕಚೇರಿಗಳನ್ನು ಹೊಂದಿದೆ, ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಆಡಳಿತ ಕಚೇರಿಗಳನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಿದ್ದೇವೆ. ಕೆಆರ್‌ಪುರದಲ್ಲಿ ಪ್ರಾದೇಶಿಕ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದು, ಚಿಕ್ಕಮಗಳೂರಿನ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಐಟಿಐ ಕ್ರೀಡಾಂಗಣದಿಂದ ಅಂಚೆ ಕಚೇರಿಯವರಗೆ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ವಿದ್ಯಾಮಂದಿರ, ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಥಮ ದರ್ಜೆ ಕಾಲೇಜು. ಎಸ್‌ಇಎ ಶಾಲೆ ಸೇರಿದಂತೆ ಕೆಆರ್‌ಪುರ ಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು.

ಶಾಸಕ ಬಿ.ಎ ಬಸವರಾಜ್‌, ಸಂಸದ ಪಿ.ಸಿ ಮೋಹನ್‌, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಕಾರ್ಯದರ್ಶಿ ಸತ್ಯವತಿ, ಕೇಂದ್ರ ಭವಿಷ್ಯ ನಿಧಿ ಅಪರ ಆಯುಕ್ತ  ವಿಜಯ್ ಕುಮಾರ್‌, ಪಾಲಿಕೆ ಸದಸ್ಯ ಪೂರ್ಣಿಮಾ ಶ್ರೀನಿವಾಸ್‌, ಬಂಡೆ ರಾಜು ಇತರರು ಇದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.