ಉಪ ಚುನಾವಣೆ ಎಫೆಕ್ಟ್: ಶಕ್ತಿ ಕೇಂದ್ರ ಖಾಲಿ ಖಾಲಿ
Team Udayavani, Oct 27, 2018, 6:00 AM IST
ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಕ್ತಿಕೇಂದ್ರ ವಿಧಾನಸೌಧ- ವಿಕಾಸಸೌಧ ಭಣಗುಡುತ್ತಿದೆ. ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಸಚಿವರಿಗೆ ಬಳ್ಳಾರಿ, ಶಿವಮೊಗ್ಗ ಕ್ಷೇತ್ರಗಳಲ್ಲಿ ಉಸ್ತುವಾರಿ ವಹಿಸಿರುವುದರಿಂದ ಯಾವೊಬ್ಬ ಸಚಿವರೂ ವಿಧಾನಸೌಧದತ್ತ ತಲೆ ಹಾಕುತ್ತಿಲ್ಲ.
ವಿಧಾನಸೌಧ-ವಿಕಾಸಸೌಧಕ್ಕೆ ಸಚಿವರನ್ನು ಹುಡುಕಿಕೊಂಡು ಬರುವ ಸಾರ್ವಜನಿಕರಿಗೆ “ಸಾಹೇಬರು’ ಇಲ್ಲ. ಎಲೆಕ್ಷನ್ ಆದ ಮೇಲೆ ಸಿಕ್ತಾರೆ ಎಂಬ ಉತ್ತರ ಸಿಗುತ್ತಿದೆ. ಸಚಿವರು ಉಪ ಚುನಾವಣಾ ಪ್ರಚಾರಕ್ಕೆ ಹೋಗಿರುವುದರಿಂದ ಇಲಾಖಾ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕಚೇರಿಗಳತ್ತ ಬರುವುದು ಕಡಿಮೆ. ಹೀಗಾಗಿ, ಉಪ ಚುನಾವಣೆಯಿಂದಾಗಿ ಕೆಲಸ ಕಾರ್ಯಗಳು ಸ್ಥಗಿತಗೊಂಡಂತಾಗಿದೆ.
ಸಂಪುಟದ ಎಲ್ಲ ಸಚಿವರಿಗೂ ಉಪ ಚುನಾವಣಾ ಉಸ್ತುವಾರಿ ನೀಡಿಲ್ಲ. ಆದರೂ ಕೆಲವು ಸಚಿವರು ಉಪ ಚುನಾವಣೆ ನೆಪದಲ್ಲಿ ವಿಧಾನಸೌಧಕ್ಕೆ ಬರುತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಗೂ ಹಲವು ಸಚಿವರು ಗೈರು ಹಾಜರಾಗಿದ್ದರು. ಇತ್ತೀಚೆಗಷ್ಟೇ ಯಡಿಯೂರಪ್ಪ ಅವರು ಸಚಿವರ್ಯಾರೂ ವಿಧಾನಸೌಧಕ್ಕೆ ಹೋಗುತ್ತಿಲ್ಲ. ಹೀಗಾಗಿ, ಉಪ ಚುನಾವಣೆ ಮುಗಿಯುವವರೆಗೆ ವಿಧಾನಸೌಧ ಮುಚ್ಚುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?