ಸೆಮೀಸ್‌ ಬಹಿರಂಗ ಪ್ರಚಾರಕ್ಕಿಂದು ತೆರೆ


Team Udayavani, Nov 1, 2018, 6:00 AM IST

b-23.jpg

ಬೆಂಗಳೂರು: ರಾಜ್ಯದಲ್ಲಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಗಾಗಿ ಮೂರು ಪಕ್ಷಗಳ ನಾಯಕರು ಗುರುವಾರ ಸಂಜೆವರೆಗೆ ಬಿರುಸಿನ ಪ್ರಚಾರ ನಡೆಸಲು ಸಜ್ಜಾಗಿದ್ದಾರೆ. ಗುರುವಾರ ಸಂಜೆ 5 ಗಂಟೆ ಹೊತ್ತಿಗೆ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ಹೊರ ಹೋಗಲಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಜೆ.ಶಾಂತಾ, ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ವಿ.ಎಸ್‌. ಉಗ್ರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಹಾಗೂ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಜೆಡಿಎಸ್‌ನ ಮಧು ಬಂಗಾರಪ್ಪ, ಜೆಡಿಯುನಿಂದ ಮಹಿಮಾ ಪಟೇಲ್‌ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಜೆಡಿಎಸ್‌ನ ಎಲ್‌.ಆರ್‌.ಶಿವರಾಮೇಗೌಡ, ಬಿಜೆಪಿಯಿಂದ ಸಿದ್ದರಾಮಯ್ಯ ಕಣದಲ್ಲಿದ್ದಾರೆ.

ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ, ಬಿಜೆಪಿಯಿಂದ ಚಂದ್ರಶೇಖರ್‌ ಸ್ಪರ್ಧಿಸಿದ್ದಾರೆ. ಜಮಖಂಡಿ ಕ್ಷೇತ್ರದಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಅನಂದ್‌ ನ್ಯಾಮಗೌಡ, ಬಿಜೆಪಿಯಿಂದ ಶ್ರೀಕಾಂತ್‌ ಕುಲಕರ್ಣಿ ಕಣದಲ್ಲಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ  ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಉಪ ಚುನಾವಣೆಗೆ ಶನಿವಾರ ಮತದಾನ ನಡೆಯಲಿರುವ
ಹಿನ್ನೆಲೆಯಲ್ಲಿ 1,502 ಸೂಕ್ಷ್ಮ ಮತ್ತು 57 ಸಖೀ (ಪಿಂಕ್‌) ಮತಗಟ್ಟೆ ಸಹಿತವಾಗಿ ಐದು ಕ್ಷೇತ್ರದಲ್ಲಿ 6,453 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಭದ್ರತೆಗಾಗಿ ಸ್ಥಳೀಯ ಪೊಲೀಸರು ಹಾಗೂ 39 ಕೇಂದ್ರ ಮೀಸಲು ಪಡೆ ನಿಯೋಜಿಸಲಾಗಿದೆ. 9,822 ಬ್ಯಾಲೆಟ್‌ ಯೂನಿಟ್‌, 8,438 ಕಂಟ್ರೋಲ್‌ ಯೂನಿಟ್‌ ಹಾಗೂ 8,922 ವಿವಿ ಪ್ಯಾಟ್‌ಗಳನ್ನು ಬಳಕೆ ಮಾಡಲಾಗುತ್ತಿದೆ. 26 ಮತಗಟ್ಟೆಗಳನ್ನು ವಿಕಲಚೇತನರ ಸಿಬ್ಬಂದಿಯೇ ನಿರ್ವಹಣೆ ಮಾಡಲಿದ್ದಾರೆ. 130 ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಮಾಡಲಾಗುವುದು. 1,312 ಮೈಕ್ರೋ
ವೀಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಐದು ಕ್ಷೇತ್ರದಲ್ಲಿ 54,54,275 ಮತದಾರರಿದ್ದು, 27,21,085 ಪುರುಷ ಹಾಗೂ 27,30,949 ಮಹಿಳಾ ಮತದಾರರು, 462 ಇತರರು ಮತ್ತು 1879 ಸೇವಾ ಮತದಾರರಿದ್ದಾರೆ. ಸೇವಾ ಮತದಾರರಿಗೆ ಇಟಿಪಿಬಿಎಸ್‌ ಸೌಲಭ್ಯ ಮೂಲಕ ಮತದಾನ ಮಾಡಲು ಅ.21ರಂದು ತಂತ್ರಾಂಶದ ಮೂಲಕ ಕಳುಹಿಸಲಾಗಿದೆ. 51,131 ದಿವ್ಯಾಂಗ ಮತದಾರರನ್ನು ಗುರುತಿಸಿದ್ದು, ಅವರನ್ನು
ಮನೆಯಿಂದ ಮತಗಟ್ಟೆಗೆ ಕರೆದೊಯ್ಯುವ ಹಾಗೂ ವಾಪಸ್‌ ಮನೆಗೆ ಬಿಡಲು ಇದೇ ಮೊದಲ ಬಾರಿಗೆ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಆರಕ್ಕೆ ಎಣಿಕೆ
ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ರಾವ್‌ ಬಹದ್ದೂರ್‌ ವೈ. ಮಹಾಬಲೇಶ್ವರಪ್ಪ ಇಂಜಿನಿ ಯರ್‌ ಕಾಲೇಜು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸಹ್ಯಾದ್ರಿ ಕಲಾ ಕಾಲೇಜು, ಮಂಡ್ಯ ಲೋಕಸ ಭಾ ಕ್ಷೇತ್ರದ ಮತ ಎಣಿಕೆ ಸರ್ಕಾರಿ ಕಾಲೇಜು,
ಜಮಖಂಡಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಿನಿ ವಿಧಾನಸೌಧ, ರಾಮನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ. 6ರಂದು ನಡೆಯಲಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ 60,508 ಲೀಟರ್‌ ಮದ್ಯ, 54.80 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಮತದಾನದ ದಿನ 24 ಗಂಟೆ ಹಾಗೂ ಮತ ಎಣಿಕೆ (ನ.6)ದಿನ ಮದ್ಯ ಮಾರಾಟಕ್ಕೆ ನಿಷೇಧ.
ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.