ಪೂರ್ಣ ಸಂಪುಟಕ್ಕೆ ಅಸ್ತು: ಒಟ್ಟು 24 ಸಚಿವರ ಪಟ್ಟಿ ಅಂತಿಮ… ನಾಳೆ ಅಥವಾ ಸೋಮವಾರ ಪ್ರಮಾಣ


Team Udayavani, May 26, 2023, 7:00 AM IST

ಪೂರ್ಣ ಸಂಪುಟಕ್ಕೆ ಅಸ್ತು: ಒಟ್ಟು 24 ಸಚಿವರ ಪಟ್ಟಿ ಅಂತಿಮ… ನಾಳೆ ಅಥವಾ ಸೋಮವಾರ ಪ್ರಮಾಣ

ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸು ವುದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದೆ. ಶನಿವಾರ ಅಥವಾ ಸೋಮವಾರ 24 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಸಂಪುಟ ವಿಸ್ತರಣೆ ವಿಚಾರವನ್ನು ಒಂದೇ ಕಂತಿನಲ್ಲಿ ಬಗೆಹರಿಸುವ ನಿರ್ಧಾರವನ್ನು ಕಾಂಗ್ರೆಸ್‌ ವರಿಷ್ಠರು ನಡೆಸಿದ್ದಾರೆ.

ಎರಡು ದಿನಗಳಿಂದ ಹೊಸ ದಿಲ್ಲಿಯಲ್ಲಿಯೇ ಬೀಡುಬಿಟ್ಟಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ವರಿಷ್ಠರ ಜತೆಗೆ ನಡೆಸಿದ ಸರಣಿ ಸಭೆಗಳ ಬಳಿಕ ಪಟ್ಟಿ ಅಂತಿಮಗೊಂಡಿದೆ. ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ. ಹೊಸಮುಖ- ಹಳೆಮುಖಗಳ ಸಮತೋಲನದ ವಿಚಾರದಲ್ಲಿ ಉಭಯ ನಾಯ ಕರ ಮಧ್ಯೆ ಹೊಂದಾಣಿಕೆ ಸುಸೂತ್ರವಾಗದೆ ಇದ್ದುದರಿಂದ ತತ್‌ಕ್ಷಣದ ನಿರ್ಧಾರಕ್ಕೆ ಹೈಕ ಮಾಂಡ್‌ ಹಿಂದೇಟು ಹಾಕಿತು ಎನ್ನಲಾಗಿದೆ.

ಅದಾಗಿಯೂ ಜಾತಿ ಹಾಗೂ ಪ್ರದೇಶದ ಆಧಾರದ ಮೇಲೆ ಸಮತೂಕದ ಸಂಪುಟ ರಚನೆ ಮಾಡಲಾಗಿದೆ. ಶನಿವಾರದ ಕಾರ್ಯಕ್ರಮದ ಬಗ್ಗೆ ರಾಜ ಭವನದಿಂದಲೂ ಹಸುರು ನಿಶಾನೆ ಲಭಿಸಿದೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರಿಗಿಂತ ಮುಂಚಿತವಾಗಿ ಹೊಸದಿಲ್ಲಿಗೆ ತೆರಳಿದ್ದ ಉಪ ಮುಖ್ಯಮಂತ್ರಿ ಶಿವಕುಮಾರ್‌ ಬುಧವಾರ ರಾತ್ರಿಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಅರ್ಧ ತಾಸು ಪ್ರತ್ಯೇಕ ಸಭೆ ನಡೆಸಿದರು. ಗುರುವಾರ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಜತೆಗೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಸಾಯಂಕಾಲದ ವರೆಗೂ ಎರಡು ಸುತ್ತು ಸಭೆ ನಡೆಸಿದ ಬಳಿಕ ಪಟ್ಟಿ ಅಂತಿಮಗೊಂಡಿದೆ. ಇದರ ಜತೆಗೆ ಖಾತೆ ಹಂಚಿಕೆ ಬಹುಪಾಲು ಅಂತಿಮಗೊಂಡಿದ್ದು, ಯಾರಿಗೆ ಯಾವ ಖಾತೆ ಎಂಬ ಗುಟ್ಟು ಬಿಟ್ಟುಕೊಡಲು ಕಾಂಗ್ರೆಸ್‌ ಮೂಲಗಳು ನಿರಾಕರಿಸಿವೆ.

ಶನಿವಾರ ಬೆಳಗ್ಗೆ 11.45ಕ್ಕೆ ಸಚಿವರ ಪ್ರಮಾಣವಚನ ನಡೆಯಲಿದೆ ಎಂಬ ಮಾಹಿತಿ ಕಾಂಗ್ರೆಸ್‌ ಪಾಳಯದಲ್ಲಿ ಹಬ್ಬಿತ್ತು. ಆದರೆ ಪಟ್ಟಿಯನ್ನು ರಾಹುಲ್‌ ಗಾಂಧಿಯವರ ಪರಿಶೀಲನೆಗೆ ರವಾನೆ ಮಾಡಿರುವುದರಿಂದ ಸೋಮವಾರಕ್ಕೆ ಮುಂದೂಡಿಕೆ ಯಾದರೂ ಆಗಬಹುದು. ಸಿದ್ದ ರಾಮಯ್ಯ ಅವರು ಶುಕ್ರವಾರ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಸಾಗುವರು.

ಸಂಭಾವ್ಯ ಸಚಿವರ ಪಟ್ಟಿ
– ಲಕ್ಷ್ಮೀ ಹೆಬ್ಟಾಳ್ಕರ್‌ – ಬೆಳಗಾವಿ
– ಶಿವಾನಂದ ಪಾಟೀಲ್‌- ವಿಜಯಪುರ
– ವಿಜಯಾನಂದ ಕಾಶಪ್ಪನವರ್‌ – ಬಾಗಲಕೋಟೆ
– ಡಾ| ಅಜಯ್‌ಸಿಂಗ್‌, ಶರಣ ಪ್ರಕಾಶ್‌ ಪಾಟೀಲ್‌- ಕಲಬುರಗಿ
– ಶರಣಬಸಪ್ಪ ದರ್ಶನಾಪುರ್‌, ರಾಜಾ ವೆಂಕಟಪ್ಪ ನಾಯಕ: ಯಾದಗಿರಿ
– ಈಶ್ವರ ಖಂಡ್ರೆ/ ರಹೀಂ ಖಾನ್‌ : ಬೀದರ್‌
– ಶಿವರಾಜ್‌ ತಂಗಡಗಿ/ ಬಸವರಾಜ್‌ ರಾಯರೆಡ್ಡಿ : ಕೊಪ್ಪಳ
– ಎಚ್‌.ಕೆ. ಪಾಟೀಲ್‌ / ಜಿ.ಎಸ್‌. ಪಾಟೀಲ್‌ : ಗದಗ
– ಸಂತೋಷ್‌ ಲಾಡ್‌ : ಧಾರವಾಡ
– ಆರ್‌.ವಿ. ದೇಶಪಾಂಡೆ : ಉತ್ತರ ಕನ್ನಡ
– ನಾಗೇಂದ್ರ/ ಇ. ತುಕಾರಾಂ : ಬಳ್ಳಾರಿ
– ಸುಧಾಕರ್‌/ ರಘುಮೂರ್ತಿ : ಚಿತ್ರದುರ್ಗ
– ಮಧು ಬಂಗಾರಪ್ಪ/ ಸಂಗಮೇಶ್‌ : ಶಿವಮೊಗ್ಗ
– ಪುಟ್ಟರಂಗಶೆಟ್ಟಿ : ಚಾಮರಾಜನಗರ
– ಕೃಷ್ಣ ಭೈರೇಗೌಡ : ಬೆಂಗಳೂರು
– ನರೇಂದ್ರಸ್ವಾಮಿ/ಚಲುವರಾಯಸ್ವಾಮಿ : ಮಂಡ್ಯ
– ಎಸ್‌.ಎಸ್‌. ಮಲ್ಲಿಕಾರ್ಜುನ : ದಾವಣಗೆರೆ
– ಪಿರಿಯಾಪಟ್ಟಣ ವೆಂಕಟೇಶ್‌ : ಮೈಸೂರು
– ಶಿವಲಿಂಗೇಗೌಡ/ ರಾಜೇಗೌಡ : ಹಾಸನ/ಚಿಕ್ಕಮಗಳೂರು
– ಜಯಚಂದ್ರ/ ಕೆ.ಎನ್‌.ರಾಜಣ್ಣ : ತುಮಕೂರು
– ಎಂ.ಸಿ. ಸುಧಾಕರ್‌ : ಚಿಕ್ಕಬಳ್ಳಾಪುರ
– ಡಾ| ಎಚ್‌.ಸಿ. ಮಹದೇವಪ್ಪ ಮೈಸೂರು

ಬೆಳಗಾವಿಗೆ ಲಕ್ಷ್ಮೀ ಮಾತ್ರ ಲಕ್ಷ್ಮಣ ಸವದಿಗೆ ನಿರಾಸೆ
ಕಾಂಗ್ರೆಸ್‌ ಮೂಲಗಳ ಪ್ರಕಾರ ಲಕ್ಷ್ಮೀ ಹೆಬ್ಟಾಳ್ಕರ್‌ ಮಾತ್ರ ಬೆಳಗಾವಿ ಹಾಗೂ ಮಹಿಳಾ ಕೋಟಾದಲ್ಲಿ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ. ಹೀಗಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ನಿರಾಸೆ ನಿಶ್ಚಿತ ಎಂದು ತಿಳಿದು ಬಂದಿದೆ. ಜತೆಗೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಐದಾರು ಮಂದಿ ಹಿರಿಯ ತಲೆಗಳಿಗೂ ಅವಕಾಶ ಕೈತಪ್ಪಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.