ಸಿಎಸ್ ಹುದ್ದೆಗೆ ಶುರುವಾಗಿದೆ ಲೆಕ್ಕಾಚಾರ
Team Udayavani, May 27, 2018, 6:50 AM IST
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವಂತೆ ನೂತನ ಮುಖ್ಯ ಕಾರ್ಯದರ್ಶಿ ಯಾರಾಗುತ್ತಾರೆ ಎಂಬ ಲೆಕ್ಕಾಚಾರ ಆರಂಭಗೊಂಡಿದೆ.
ಹಾಲಿ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದ್ದು,ಮುಂದಿನ ಮುಖ್ಯಕಾರ್ಯದರ್ಶಿ ಹುದ್ದೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾಗಿರುವ ಟಿ.ಎಂ. ವಿಜಯಭಾಸ್ಕರ್ ಮತ್ತು ಡಿ.ವಿ. ಪ್ರಸಾದ್ ಅವರ ಹೆಸರು ಮುಂಚೂಣಿಯಲ್ಲಿದೆ.
ಆದರೆ, ಸದ್ಯ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕಾರ್ಯದ ರ್ಶಿಯಾಗಿರುವ 1982ರ ಬ್ಯಾಚ್ನ ಹಿರಿಯ ಐಎಎಸ್ ಅಧಿಕಾರಿ ಲತಾ ಕೃಷ್ಣರಾವ್ ಸೇವಾ ಹಿರಿತನ ಹೊಂದಿದ್ದಾರೆ. ಆದರೆ, ಅವರು ಸೆಪ್ಟೆಂಬರ್ಗೆ ನಿವೃತ್ತಿಯಾಗಲಿದ್ದಾರೆ. ಅವರ ಸೇವಾ ಅವಧಿ ಕೇವಲ 3 ತಿಂಗಳು ಇರಲಿದೆ. ಅದೇ ಬ್ಯಾಚ್ನ ಮತ್ತೂಬ್ಬ ಹಿರಿಯ ಐಎಎಸ್ ಅಧಿಕಾರಿ ಕೇಂದ್ರ ಕೃಷಿ ಇಲಾಖೆ ಕಾರ್ಯದರ್ಶಿಯಾಗಿರುವ ಕರ್ನಾಟಕ ಕೇಡರ್ನ ಎಸ್.ಕೆ. ಪಟ್ಟನಾಯಕ್ ಅವರೂ ಸೇವಾ ಹಿರಿತನ ಹೊಂದಿದ್ದು, ಅವರ ಸೇವಾವಧಿಯೂ ಸೆಪ್ಟೆಂಬರ್ಗೆ ಅಂತ್ಯವಾಗಲಿದೆ.
ಅವರ ನಂತರದ ಸ್ಥಾನದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ 1983 ಬ್ಯಾಚ್ನ ಟಿ.ಎಂ. ವಿಜಯಭಾಸ್ಕರ್ ಇದ್ದು ಅವರ ಸೇವಾವಧಿ ಇನ್ನೂ ಎರಡು ವರ್ಷ ಇರುವುದರಿಂದ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.
ಅವರೊಂದಿಗೆ 1984ರ ಬ್ಯಾಚ್ನ ಹಿರಿಯ ಅಧಿಕಾರಿ ಅಭಿವೃದ್ಧಿ ಆಯುಕ್ತರಾಗಿರುವ ಡಿ.ವಿ. ಪ್ರಸಾದ್ ಅವರ ಹೆಸರೂ ಮುಖ್ಯಕಾರ್ಯದರ್ಶಿ ಹುದ್ದೆಗೆ ಕೇಳಿ ಬರುತ್ತಿದ್ದು, ರಾಜ್ಯ ಸರ್ಕಾರ ರತ್ನಪ್ರಭಾ ಅವರನ್ನೇ ಮತ್ತೂಂದು ಮೂರು ತಿಂಗಳು ಮುಂದುವರಿಸುತ್ತಾ ಅಥವಾ ಬೇರೆಯವರನ್ನು ನೇಮಕ ಮಾಡುತ್ತಾ ಎಂಬುದನ್ನು ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ