ಉದ್ಯಮಿಗೆ ಕರೆ ಮಾಡಿ ಪ್ರಾಣ ಬೆದರಿಕೆ: 2 ಕೋಟಿಗೆ ಬೇಡಿಕೆ


Team Udayavani, Sep 25, 2017, 12:52 PM IST

prana-bedarike.jpg

ಬೆಂಗಳೂರು: ದೇವಸ್ಥಾನ ಹಾಗೂ ಮದುವೆ ಸಮಾರಂಭಗಳಿಗೆ ಹೂವಿನ ಅಲಂಕಾರ ಮಾಡುವ ಗುತ್ತಿಗೆ ವ್ಯವಹಾರ ಮಾಡುತ್ತಿದ್ದ ಉದ್ಯಮಿಯೊಬ್ಬರಿಗೆ ಕರೆ ಮಾಡಿರುವ ದುಷ್ಕರ್ಮಿಗಳು ಎರಡು ಕೋಟಿ ರೂ. ನೀಡುವಂತೆ ಪ್ರಾಣ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಸಂಬಂಧ ಉದ್ಯಮಿ ಸತ್ಯಪ್ರಕಾಶ್‌ ಎಂಬುವರು ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ನಂದಿನಿಲೇಔಟ್‌ನ ಸರಸ್ವತಿಪುರಂನ ನಿವಾಸಿ ಉದ್ಯಮಿ ಸತ್ಯಪ್ರಕಾಶ್‌ಗೆ ಇತ್ತೀಚೆಗೆ ಎರಡು ಬಾರಿ ಇಂಟರ್‌ನೆಟ್‌ ಕರೆ ಮಾಡಿರುವ ದುಷ್ಕರ್ಮಿಗಳು ಕೂಡಲೇ ಹಣ ನೀಡಬೇಕು. ಇಲ್ಲವಾದರೆ ಹತ್ಯೆಗೈಯುವುದಾಗಿ ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳು ಹಿಂದಿ ಭಾಷೆಯಲ್ಲಿ ಮಾತನಾಡಿದ್ದು, ಎರಡು ಕೋಟಿ ರೂಗೆ ಬೇಡಿಕೆ ಇಟ್ಟಿದ್ದರು ಎಂದು ಸತ್ಯಪ್ರಕಾಶ್‌ ದೂರು ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಸೆ.19ರಂದು ಸಂಜೆ ಅಮೃತಹಳ್ಳಿಯ ದೇವಾಲಯದಲ್ಲಿರುವ ವೇಳೆ ಮೊದಲ ಕರೆ ಬಂದಿದ್ದು, ದುಷ್ಕರ್ಮಿ ಹಿಂದಿಯಲ್ಲಿ ಮಾತನಾಡುತ್ತಿದ್ದ. ಆ ಕಡೆ ಮಾತನಾಡುತ್ತಿದ್ದ ಅಪರಿಚಿತ ವ್ಯಕ್ತಿ, “ನಿನ್ನ ಸಂಪೂರ್ಣ ವ್ಯವಹಾರದ ಬಗ್ಗೆ ನಮ್ಮ ಬಾಸ್‌ಗೆ ಮಾಹಿತಿಯಿದೆ. ನಮ್ಮ ಬಾಸ್‌ 2 ಕೋಟಿ ರೂ. ಹಣ ಪಡೆಯಲು ಸೂಚಿಸಿದ್ದಾರೆ. ನಮ್ಮ ಯುವಕರು ನಿನ್ನನ್ನು ಹಿಂಬಾಲಿಸುತ್ತಿದ್ದಾರೆ. ಒಂದು ವೇಳೆ ಪೊಲೀಸರಿಗೆ ಮಾಹಿತಿ ನೀಡಿದರೆ, ಸ್ಥಳದಲ್ಲೇ ಕೊಂದು ಹಾಕುತ್ತೇವೆ.

ಕೂಡಲೇ ಹಣದ ವ್ಯವಸ್ಥೆ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಸತ್ಯಪ್ರಕಾಶ್‌ ಏರು ಧ್ವನಿಯಲ್ಲಿ ನಿಂದಿಸಿ, ಕರೆ ಸ್ಥಗಿತಗೊಳಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಿಇಎಲ್‌ ರಸ್ತೆಯಲ್ಲಿರುವ ಆಧ್ಯಾತ್ಮಿಕ ವಾಹಿನಿಯೊಂದರಲ್ಲಿರುವ ಸಂದರ್ಭದಲ್ಲಿ ಮತ್ತೂಂದು ಕರೆ ಬಂದಿದ್ದು, ಆಗ ಸತ್ಯಪ್ರಕಾಶ್‌, ಕರೆ ಸ್ವೀಕರಿಸುವಂತೆ ತಮ್ಮ ಸ್ನೇಹಿತರೊಬ್ಬರಿಗೆ ಮೊಬೈಲ್‌ ಕೊಟ್ಟಿದ್ದಾರೆ.

ಇತ್ತ ಕರೆ ಸ್ವೀಕರಿಸುತ್ತಿದ್ದಂತೆ ಆ ಕಡೆ ಏರು ಧ್ವನಿಯಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ ಕೂಡಲೇ ಸತ್ಯಪ್ರಕಾಶ್‌ಗೆ ಮೊಬೈಲ್‌ ಕೊಡುವಂತೆ ತಾಕೀತು ಮಾಡಿದ್ದಾನೆ. ಆದರೆ, ಸತ್ಯಪ್ರಕಾಶ್‌ ಸ್ನೇಹಿತ ಕರೆ ಸ್ಥಗಿತಗೊಳಿಸಿದ್ದಾರೆ ನಂತರ  ಗಾಬರಿಗೊಂಡ ಸತ್ಯಪ್ರಕಾಶ್‌ ಕೂಡಲೇ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವ್ಯಕ್ತಿಯ ಮೇಲೆ ಶಂಕೆ: ಈ ಹಿಂದೆ ಸತ್ಯಪ್ರಕಾಶ್‌ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನನ್ನ ಬಳಿ ಲಕ್ಷಾಂತರ ರೂಪಾಯಿ ಮೌಲ್ಯ ಚಿನ್ನಾಭರಣಗಳಿದ್ದು, ಕಡಿಮೆ ದರಕ್ಕೆ ಮಾರಾಟ ಮಾಡುತ್ತೇನೆ. ಖರೀದಿ ಮಾಡಬಹುದು ಎಂದಿದ್ದ. ಆದರೆ, ಸತ್ಯಪ್ರಕಾಶ್‌ ಇದಕ್ಕೆ ನಿರಾಕರಿಸಿದ್ದರು. ಈ ವ್ಯಕ್ತಿಯೇ ಈ ರೀತಿ ಇಂಟರ್‌ನೆಟ್‌ ಕರೆ ಮಾಡುತ್ತಿರುವ ಸಾಧ್ಯತೆಯಿದ್ದು, ತನಿಖೆ ನಡೆಯುತ್ತಿದೆ ಎಂದು ಸದಾಶಿವನಗರಠಾಣೆಯ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.