ಜಯನಗರ ಕ್ಷೇತ್ರದಲ್ಲಿ ಪ್ರಚಾರ ಭರಾಟೆ


Team Udayavani, Jun 7, 2018, 11:47 AM IST

blore-4.jpg

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದೊಂದಿಗೆ, ರ್ಯಾಲಿ, ಪಾದಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ಎನ್‌.ಪ್ರಹ್ಲಾದ್‌ ಬಾಬು ಪರವಾಗಿ ಬುಧವಾರ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಸಂಸದ ಪಿ.ಸಿ.ಮೋಹನ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿ ಹಲವು ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.

ಈ ವೇಳೆ ಸಿ.ಟಿ.ರವಿ ಮಾತನಾಡಿ, ರಾಜ್ಯದ ಅಪವಿತ್ರ ಮೈತ್ರಿ ಸರ್ಕಾರ ವಿರೋಧಿಸಿ ಪ್ರಹ್ಲಾದ್‌ ಬಾಬು ಅವರನ್ನು ಜನ ಭಾರಿ ಮತಗಳ ಅಂತರದಿಂದ ಆಯ್ಕೆ ಮಾಡಬೇಕು. ಬಿ.ಎನ್‌.ವಿಜಯಕುಮಾರ್‌ ಅವರು ಆರಂಭಿಸಿದ್ದ ಜನಪರ, ಸಮಾಜಮುಖೀ ಕೆಲಸ ಮುಂದುವರಿಸಿಕೊಂಡು ಹೋಗಲು ಪ್ರಹ್ಲಾದ್‌ ಬಾಬು ಅವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಪಾಲಿಕೆ ಸದಸ್ಯರಾದ ಆರ್‌.ಗೋವಿಂದ ನಾಯ್ಡು, ಸಂಗಾತಿ ವೆಂಕಟೇಶ್‌ ಕಾರ್ಯಕರ್ತರೊಂದಿಗೆ ಎನ್‌ಎಎಲ್‌ ಬಡಾವಣೆ, ಜಯನಗರ 9ನೇ ಬ್ಲಾಕ್‌ನ ಹಲವೆಡೆ ಪಾದಯಾತ್ರೆ ನಡೆಸಿ ಮತ ಯಾಚನೆ ಮಾಡಿದರು.

ಇನ್ನೊಂದೆಡೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಪುತ್ರಿ, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರೊಂದಿಗೆ ಪ್ರಚಾರ ನಡೆಸಿದರು. ಕ್ಷೇತ್ರದ ನಾನಾ ಪ್ರದೇಶಗಳಲ್ಲಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಸೌಮ್ಯಾ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷವು ಕಾಂಗ್ರೆಸ್‌ ಬೆಂಬಲಿಸಿರುವುದ ರಿಂದ ಜೆಡಿಎಸ್‌ ಅಭ್ಯರ್ಥಿಯ ಪ್ರಚಾರ ಇರಲಿಲ್ಲ.

ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು ಇಡೀ ದಿನ ಭರ್ಜರಿ ಪ್ರಚಾರ ನಡೆಸಿದರು. ಬೆಳಗ್ಗೆ ಜೆ.ಪಿ.ನಗರದ ನಟರಾಜ ಉದ್ಯಾನ, ಧನ್ವಂತರಿ ಉದ್ಯಾನ, ಮಿನಿ ಫಾರೆಸ್ಟ್‌ ಉದ್ಯಾನದಲ್ಲಿ ನಡಿಗೆದಾರರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ರೂಪಿಸಿರುವ ಪ್ರಣಾಳಿಕೆ ವಿತರಿಸಿ ಬೆಂಬಲಿಸುವಂತೆ ಮನವಿ ಮಾಡಿದರು. ಮಾರೇನಹಳ್ಳಿ, ಅರಸು ಕಾಲೋನಿ, ತಿಲಕ್‌ನಗರ, ಜಯನಗರ 5ನೇ ಬ್ಲಾಕ್‌ನಲ್ಲಿ ರೋಡ್‌ ಶೋ ಮೂಲಕ ಮತ ಯಾಚಿಸಿದರು.

ಕ್ಷೇತ್ರದಲ್ಲಿ ಪೊಲೀಸರು ನಿಷ್ಕ್ರಿಯರಾಗಿದ್ದು, ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜಯನಗರ ಠಾಣೆಯ ಎದುರು ಮಧ್ಯಾಹ್ನ 1 ಗಂಟೆ ಹೊತ್ತಿಗೆ ರವಿಕೃಷ್ಣಾರೆಡ್ಡಿ ಪ್ರತಿಭಟನೆ ನಡೆಸಲು ಮುಂದಾದರು. ಇದಕ್ಕೆ ಪೊಲೀಸರು ಅವಕಾಶ ನೀಡದ ಕಾರಣ ರಸ್ತೆಯಲ್ಲೇ ಭಾಷಣ ಮಾಡಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಟ್ಟಾರೆ ಜಯನಗರ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದ್ದು, ಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.