ಇ-ತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೆ ಅಭಿಯಾನ


Team Udayavani, Jul 15, 2019, 3:09 AM IST

e-tyjya

ಬೆಂಗಳೂರು: ದೇಶದ ಇ-ತ್ಯಾಜ್ಯ ಉತ್ಪಾದನೆಯಲ್ಲಿ ಬೆಂಗಳೂರು 3ನೇ ಸ್ಥಾನದಲ್ಲಿದೆ. ಸಾರ್ವಜನಿಕ ವಲಯದಿಂದಲೇ ಪ್ರತಿ ವರ್ಷ ಅಂದಾಜು 92 ಸಾವಿರ ಟನ್‌ ಇ-ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದರ ನಿರ್ವಹಣೆ ಸರ್ಮಪಕವಾಗಿ ಆಗುತ್ತಿಲ್ಲ. ಹೀಗಾಗಿ, ಇ-ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಯನ್ನು ಬಿಬಿಎಂಪಿ ಸಿಬ್ಬಂದಿಯಿಂದಲೇ ಪ್ರಾರಂಭಿಸಲು ಇ-ತ್ಯಾಜ್ಯ ಸಂಗ್ರಹ ಆಂದೋಲನವನ್ನು ಪಾಲಿಕೆ ಪ್ರಾರಂಭಿಸಿದೆ.

ಇದರ ಭಾಗವಾಗಿ ಇಂದಿನಿಂದ (ಜುಲೈ 15) ಆ.15ರವರೆಗೆ ಪಾಲಿಕೆಯ ಎಲ್ಲ 8 ವಲಯ ಕಚೇರಿಗಳಲ್ಲಿ “ಇ- ತ್ಯಾಜ್ಯ’ ಡಬ್ಬಿಗಳನ್ನು ಇಡಲಾಗುತ್ತಿದೆ. ಸಹಾಸ್‌ ಸಂಸ್ಥೆ “ಬಿ-ರೆಸ್ಪಾನ್ಸಿಬಲ್‌’ ಆಂದೋಲನ ಪ್ರಾರಂಭಿಸಿದೆ. ಬಿಬಿಎಂಪಿಯಲ್ಲಿ 9 ಸಾವಿರ ಸಿಬ್ಬಂದಿಯಿದ್ದು, ಅವರ ಮನೆಯ ಇ-ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಡಬ್ಬಿಗಳನ್ನು ಪರಿಚಯಿಸಲಾಗುತ್ತಿದೆ. ಇದರಲ್ಲಿ ಸಾರ್ವಜನಿಕರೂ ಇ-ತ್ಯಾಜ್ಯ ಹಾಕಬಹುದು ಎಂದು ಬಿಬಿಎಂಪಿ ತಿಳಿಸಿದೆ.

“ನಗರದಲ್ಲಿ ಉತ್ಪತ್ತಿಯಾಗುವ ಇ-ತ್ಯಾಜ್ಯದಲ್ಲಿ ಶೇ.30ರಷ್ಟು ಮಾತ್ರ ಮರುಸಂಸ್ಕರವಾಗುತ್ತಿದೆ. ಇದರಲ್ಲೂ ಶೇ.10ರಷ್ಟು ಮಾತ್ರ ಸೂಕ್ತ ರೀತಿಯಲ್ಲಿ ಸಂಸ್ಕರಣೆಯಾಗುತ್ತಿದೆ’ ಎನ್ನುತ್ತಾರೆ ಸಾಹಸ್‌ ಸಂಸ್ಥೆಯ ಇ-ತ್ಯಾಜ್ಯ ಯೋಜನಾಧಿಕಾರಿ ರಾಜಲಕ್ಷ್ಮೀ.

“ಕೆಲವರು ಇ-ತ್ಯಾಜ್ಯವನ್ನು ಗುಜರಿಗೆ ಹಾಕುತ್ತಿದ್ದಾರೆ. ಅಲ್ಲಿ ಇ-ತ್ಯಾಜ್ಯದಲ್ಲಿನ ಬೆಲೆ ಬಾಳುವ ಅಂಶಗಳನ್ನು ಮಾತ್ರ ಕರಗಿಸಿಕೊಂಡು ಉಳಿದವನ್ನು ಬಿಸಾಡಲಾಗುತ್ತಿದೆ. ತ್ಯಾಜ್ಯ ಕರಗಿಸಲು ಆ್ಯಸಿಡ್‌ನಿಂದ ಸುಡುವುದು ಮತ್ತು ಬೆಂಕಿ ಹಚ್ಚುವ ಪಾಯಕಾರಿ ವಿಧಾನ ಬಳಸಲಾಗುತ್ತದೆ. ಆ್ಯಸಿಡ್‌ನ‌ಲ್ಲಿ ಕಲೆತ ಇ-ತ್ಯಾಜ್ಯದ ಅಂಶ ನೀರಿಗೆ ಸೇರುವುದರಿಂದ ಅಂರ್ತಜಲ ಕಲುಷಿತಗೊಳ್ಳುತ್ತದೆ. ಸುಡುವುದರಿಂದ ವಾಯುಮಾಲಿನ್ಯವಾಗುತ್ತದೆ,’ ಎಂದರು.

“ಇತ್ತೀಚಿನ ದಿನಗಳಲ್ಲಿ ಮರುಬಳಕೆಯ ಸಂಸ್ಕೃತಿ ಮಾಯವಾಗಿದ್ದು, ಇ-ತ್ಯಾಜ್ಯ ಉತ್ಪಾದನೆ ಹೆಚ್ಚಾಗಿದೆ. ಇದರ ಸರ್ಮಪಕ ನಿರ್ವಹಣೆಗೆ “ಸಾಹಸ್‌’ ಯೋಜನೆ ರೂಪಿಸುತ್ತಿದ್ದು, ಪ್ರಯೋಗಿಕವಾಗಿ ಕೋರಮಂಗಲದಲ್ಲಿ ಇ-ತ್ಯಾಜ್ಯ ಕೇಂದ್ರ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮನೆಗಳಿಂದ ತ್ಯಾಜ್ಯ ಸಂಗ್ರಹಿಸಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾನ್ಯತೆ ಪಡೆದ ಇ-ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ನೀಡಲಾಗುವುದು’ ಎಂದು ರಾಜಲಕ್ಷ್ಮೀ ವಿವರಿಸಿದರು.

ಅಂಚೆ ಕಚೇರಿಯಲ್ಲಿ 750 ಕೆ.ಜಿ ಇ-ತ್ಯಾಜ್ಯ: ಸಾಹಸ್‌ ಸಂಸ್ಥೆ ಇ-ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಶ್ರಮಿಸುತ್ತಿದ್ದು, 2016ರಿಂದ ಇಲ್ಲಿಯವರೆಗೆ ಅಂದಾಜು 45 ಟನ್‌ ಇ-ತ್ಯಾಜ್ಯ ಸಂಗ್ರಹಿಸಿದೆ. ಕಳೆದ ತಿಂಗಳು ಬೆಂಗಳೂರಿನ ಆಯ್ದ 100 ಅಂಚೆ ಕಚೇರಿಗಳಲ್ಲಿ ಇ-ತ್ಯಾಜ್ಯ ಸಂಗ್ರಹ ಆಂದೋಲನವನ್ನು ಸಂಸ್ಥೆ ಪ್ರಾರಂಭಿಸಿತ್ತು. ಈ ವೇಳೆ 750 ಕೆ.ಜಿ ಇ-ತ್ಯಾಜ್ಯ ಸಂಗ್ರಹವಾಗಿದೆ. ಇ-ತ್ಯಾಜ್ಯ ಸಂಗ್ರಹಕ್ಕೆ ಮೊ: 73497 37586 ಸಹಾಯವಾಣಿಗೆ ಕರೆ ಮಾಡಬಹುದು.

ಯಾವುದೆಲ್ಲಾ ಇ-ತ್ಯಾಜ್ಯ?: ಬಳಸಿ ಬಿಸಾಡಿದ ಕಂಪ್ಯೂಟರ್‌, ಟವಿ, ಮೊಬೈಲ್‌, ಸ್ಮಾರ್ಟ್‌ಫೋನ್‌ , ಫ್ರೀಡ್ಜ್, ವಾಷಿಂಗ್‌ ಮಷೀನ್‌, ಓವನ್‌, ಪ್ರಿಂಟರ್‌, ಕೀ ಬೋರ್ಡ್‌, ಏರ್‌ ಕಂಡೀಷನರ್‌, ಜೆರಾಕ್ಸ್‌ ಸೇರಿ 23 ರೀತಿಯ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಇ-ತ್ಯಾಜ್ಯ ಎಂದು ಪರಿಗಣಿಸಲಾಗುತ್ತದೆ.

ಈ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡದಿದ್ದರೆ ಅದು ಭೂಮಿಯ ಫ‌ಲವತ್ತತೆಯ ಮೇಲೆ ಪರಿಣಾಮ ಬೀರುತ್ತಿದೆ. ತ್ಯಾಜ್ಯದಲ್ಲಿನ ಆರ್ಸೆನಿಕ್‌, ಸೀಸ, ಪಾದರಸ, ಲೆಡ್‌, ನಿಕ್ಕಲ್‌ ಕ್ಯಾಡ್ಮಿಯಂ ಆಕ್ಸೆ„ಡ್‌, ಸೆಲೇನಿಯಂ ಮುಂತಾದ ವಿಷಯುಕ್ತ ಅನಿಲಗಳಿಂದ ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ.

ಇ-ತ್ಯಾಜ್ಯವನ್ನು ಯಾರಿಗೆ ನೀಡಬೇಕು ಎಂಬ ಬಗ್ಗೆ ಜನರಲ್ಲಿರುವ ಗೊಂದಲ ನಿವಾರಿಸಲು ಆಂದೋಲನ ಹಮ್ಮಿಕೊಳ್ಳಲಾಗಿದೆ. ಆಂದೋಲನದ ಬಳಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೊಂದಿಗೆ ಚರ್ಚಿಸಿ ಸಾರ್ವಜನಿಕ ವಲಯದಿಂದ ಹೇಗೆ ಇ-ತ್ಯಾಜ್ಯ ಸಂಗ್ರಹಿಸಬಹುದು ಎಂದು ಚಿಂತಿಸಲಾಗುವುದು.
-ರಂದೀಪ್‌ , ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ವಿಭಾಗ)

* ಹಿತೇಶ್‌ ವೈ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.