ಆರಂಭದಲ್ಲೇ ಕ್ಯಾನ್ಸರ್‌ ಪತ್ತೆ ಒಳಿತು


Team Udayavani, Oct 13, 2019, 3:05 AM IST

arnbhadalle

ಬೆಂಗಳೂರು: ದೇಶದಲ್ಲಿ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರಂಭಿಕ ಹಂತದಲ್ಲೇ ಕ್ಯಾನ್ಸರ್‌ ಕುರಿತು ಅರಿವು ಅಗತ್ಯವಿದೆ ಎಂದು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ.ಎಸ್‌. ಸಚ್ಚಿದಾನಂದ ಹೇಳಿದರು. ಭಾರತೀಯ ಪ್ರಸೂತಿ ಹಾಗೂ ಕ್ಯಾನ್ಸರ್‌ ತಜ್ಞರ ಸಂಘದ ಕರ್ನಾಟಕ ಶಾಖೆಯಿಂದ ಶನಿವಾರ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಲ್ಲಿ ಆಯೋಜಿಸಿದ್ದ 8ನೇ ವಾರ್ಷಿಕ ಸಮ್ಮೇಳನ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರತಿ ಏಳು ನಿಮಿಷಕ್ಕೆ ಒಬ್ಬ ಕ್ಯಾನ್ಸರ್‌ ಪೀಡಿತ ವ್ಯಕ್ತಿ ಮೃತಪಡುತ್ತಿದ್ದಾರೆ. ದೇಶದಲ್ಲಿ ಕ್ಯಾನ್ಸರ್‌ ಪ್ರಮುಖ ಸಮಸ್ಯೆಯಾಗಿದೆ. ಮಹಿಳೆಯರು ಸ್ತನ, ಬಾಯಿ, ಯೋನಿ ಮೊದಲಾದ ಕ್ಯಾನ್ಸರ್‌ಗೆ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಯಾವುದೇ ಬಗೆಯ ಕ್ಯಾನ್ಸರ್‌, ಆದರೂ ಆರಂಭಿಕ ಹಂತದಲ್ಲಿ ಪತ್ತೆಯಾದರೆ, ಅಗತ್ಯ ಚಿಕಿತ್ಸೆ ಮಾಡಿ ಗುಣಪಡಿಸಲು ಸಾಧ್ಯವಿದೆ ಎಂದರು.

ದೇಶದಲ್ಲಿ ಕ್ಯಾನ್ಸರ್‌ ಪತ್ತೆಗೆ ಅತ್ಯಾಧುನಿಕ ಪರೀಕ್ಷೆ ಉಪಕರಣಗಳು ಬಂದಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳನ್ನು ನೀಡುತ್ತಿವೆ. ಇವುಗಳನ್ನು ಬಳಸಿಕೊಂಡು ಬೇರು ಮಟ್ಟದಲ್ಲೇ ಕ್ಯಾನ್ಸರ್‌ ನಿರ್ಮೂಲನೆಗೆ ಪಣ ತೊಡುವ ಅಗತ್ಯವಿದೆ ಎಂದು ಸಲಹೆ ನೀಡಿದರು. ಗ್ರಾಮೀಣ ಭಾಗದ ಜನರಿಗೆ ಕ್ಯಾನ್ಸರ್‌ ಹಾಗೂ ಕ್ಯಾನ್ಸರ್‌ ಪತ್ತೆಯ ಬಗ್ಗೆ ಅರಿವು ಮೂಡಿಸಬೇಕು.

ಈ ನಿಟ್ಟಿನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿವಿಯು ಎನ್‌ಜಿಒಗಳ ಸಹಕಾರದೊಂದಿಗೆ ಚಿಕ್ಕಬಳ್ಳಾಪುರದ ಜಿಲ್ಲೆಯಲ್ಲಿ ಕ್ಯಾನ್ಸರ್‌ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು. ಸಂಘದ ರಾಷ್ಟ್ರೀಯ ಅಧ್ಯಕ್ಷೆ ಡಾ.ಶಾಲಿನಿ ರಾಜಾರಾಂ ಮಾತನಾಡಿ, ಆರಂಭಿಕ ಹಂತದಲ್ಲೇ ಕ್ಯಾನ್ಸರ್‌ ಪತ್ತೆ ಹಚ್ಚಿ ಚಿಕಿತ್ಸೆ ನೀಡದಿದ್ದರೆ ಮುಂದಿನ ಹತ್ತು ವರ್ಷಗಳಲ್ಲಿ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಹೀಗಾಗಿ ಎಲ್ಲ ರೀತಿಯ ಕ್ಯಾನ್ಸರ್‌ ಬಗ್ಗೆಯೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ತುರ್ತಾಗಿ ಆಗಬೇಕು ಎಂದರು. ರಾಜೀವ್‌ ಗಾಂಧಿ ಆರೋಗ್ಯ ವಿವಿಯ ಕುಲಸಚಿವ ಶಿವಾನಂದ ಕಾಪಸಿ, ಅಸೋಸಿಯೇಷನ್‌ನ ಕರ್ನಾಟಕ ಶಾಖೆಯ ಅಧ್ಯಕ್ಷೆ ಡಾ.ಎಸ್‌. ಇಂದುಕಲಾ, ಗೌರವ ಕಾರ್ಯದರ್ಶಿ ಡಾ.ಟಿ.ಎಸ್‌.ಪ್ರೇಮಲತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.