ರಾಜಧಾನಿ ಬಂಪರ್ ಕೊಡುಗೆ
Team Udayavani, Feb 9, 2019, 5:49 AM IST
ಬೆಂಗಳೂರು: ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಹಣದಹೊಳೆ ಹರಿದಿದೆ. ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಒಟ್ಟಾರೆ ಈ ಬಾರಿಯ ಆಯವ್ಯಯದಲ್ಲಿ ಅಂದಾಜು 9,500 ಸಾವಿರ ಕೋಟಿ ರೂ. ದೊರೆತಿದೆ.
ಬೆಂಗಳೂರಿಗೆ ಮತ್ತೂಂದು “ಕಾವೇರಿ’ ಹೊರತುಪಡಿಸಿದರೆ ಹೊಸದಾಗಿ ಯಾವುದೇ ಪ್ರಮುಖ ಯೋಜನೆಗಳು ಘೋಷಣೆ ಆಗಿಲ್ಲ. ಆದರೆ, ಈಗಾಗಲೇ ವಿವಿಧ ಹಂತದಲ್ಲಿರುವ ಯೋಜನೆಗಳಾದ “ನಮ್ಮ ಮೆಟ್ರೋ’, ಎತ್ತರಿಸಿದ ಸೇತುವೆ, ಪೆರಿಫೆರಲ್ ಹೊರವರ್ತುಲ ರಸ್ತೆ, ಮೇಲ್ಸೇತುವೆಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ.
ಬಜೆಟ್ನಲ್ಲಿ ಬೆಂಗಳೂರಿಗೆ ಒದಗಿಸಿರುವ ಅನುದಾನದಲ್ಲಿ ಬಿಬಿಎಂಪಿ ಹಾಗೂ ಬಿಎಂಆರ್ಸಿಗೆ ಸಿಂಹಪಾಲು ದೊರಕಿದ್ದು, ನವ ಬೆಂಗಳೂರು ಯೋಜನೆ, ಮೇಲ್ಸೇತುವೆ-ಕೆಳಸೇತುವೆ ಸೇರಿ ಹಲವು ಯೋಜನೆಗಳಿಗೆ ಒಟ್ಟಾರೆಯಾಗಿ 2,495 ಕೋಟಿ ರೂ. ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಉಪನಗರ ರೈಲು ಸೇವೆ, ಮೆಟ್ರೋ 2ನೇ ಹಂತ, ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳ ನಿರ್ಮಾಣ, 110 ಹಳ್ಳಿಗಳ ಅಭಿವೃದ್ಧಿಗೆ ಯೋಜನೆ ರೂಪಿಸಿರುವುದಾಗಿ ಬಜೆಟ್ನಲ್ಲಿ ಉಲ್ಲೇಖೀಸಿದ್ದರೂ, ಸ್ಪಷ್ಟತೆಯಿಲ್ಲ.
ಅಭಿವೃದ್ಧಿ ಪ್ರಾಧಿಕಾರ: ನಗರದಲ್ಲಿನ ವಾಹನ ದಟ್ಟಣೆ ನಿವಾರಣೆಗೆ ಸರ್ಕಾರದಿಂದ ಜಾರಿಗೊಳಿಸಲು ಮುಂದಾಗಿರುವ ಫೆರಿಫೆರಲ್ ಹೊರ ವರ್ತುಲ ರಸ್ತೆಯನ್ನು ನಿರ್ವಹಣಾ ವೆಚ್ಚ ಒಳಗೊಂಡಂತೆ 17,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ. ಅದರಂತೆ ಯೋಜನೆ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 1,000 ಕೋಟಿ ರೂ. ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ