ಕೈ ಕಚ್ಚಿದ ಮಹಿಳೆಯ ಕೊಂದ ಚಾಲಕ ಸೆರೆ


Team Udayavani, May 12, 2019, 3:04 AM IST

kai-kacchi

ಬೆಂಗಳೂರು: ಮದ್ಯದ ಅಮಲಿನಲ್ಲಿ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಕ್ಯಾಬ್‌ ಚಾಲಕ ಸುಬ್ರಹ್ಮಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಭರತ್‌ ಅಲಿಯಾಸ್‌ ಗುಂಡ (26) ಬಂಧಿತ ಕ್ಯಾಬ್‌ ಚಾಲಕ. ಆರೋಪಿ, ಮೇ 6ರಂದು ಇಸ್ರೋ ಲೇಔಟ್‌ನ ವಲ್ಲಭನಗರದ ಭಾಗ್ಯಮ್ಮ (45) ಎಂಬಾಕೆಯ ಕತ್ತುಕೊಯ್ದು ಬರ್ಬರವಾಗಿ ಕೊಂದಿದ್ದ.

ಹಲವು ವರ್ಷಗಳಿಂದ ಕುಮಾರಸ್ವಾಮಿ ಲೇಔಟ್‌ನಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ ಮಂಡ್ಯ ಮೂಲದ ಭಾಗ್ಯಮ್ಮ, ಅವರ ಪತಿ 20 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಕೆಲ ವರ್ಷಗಳ ಹಿಂದೆ ಇದ್ದ ಒಬ್ಬ ಮಗನೂ ಮೃತಪಟ್ಟಿದ್ದ.

ಹೀಗಾಗಿ ಭಾಗ್ಯಮ್ಮ ವಲ್ಲಭನಗರದಲ್ಲಿ ಸಣ್ಣದೊಂದು ಕಟ್ಟಡದ ಮಹಡಿ ಮೇಲೆ ಶೀಟ್‌ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರು. ಅದೇ ಕಟ್ಟಡದ ನೆಲ ಮಹಡಿಯ ಬಾಡಿಗೆ ಮನೆಯಲ್ಲಿ ಆರು ತಿಂಗಳಿಂದ ಸ್ನೇಹಿತನ ಜತೆ ಆರೋಪಿ ಭರತ್‌ ವಾಸವಾಗಿದ್ದ.

ಕ್ಯಾಬ್‌ ಚಾಲಕನಾಗಿರುವ ಆರೋಪಿ, ಪ್ರತಿನಿತ್ಯ ಸ್ನೇಹಿತರನ್ನು ಮನೆಗೆ ಕರೆತಂದು ಪಾರ್ಟಿ ಮಾಡುತ್ತಿದ್ದ. ಮೇ 6ರಂದು ರಾತ್ರಿ ಕೂಡ ಮದ್ಯದ ಅಮಲಿನಲ್ಲಿ ಸ್ನೇಹಿತರೆಲ್ಲರೂ ಜೋರಾಗಿ ಮಾತನಾಡುತ್ತಿದ್ದರು. ಇದು ಭಾಗ್ಯಮ್ಮನಿಗೆ ಕಿರಿಕಿರಿ ಉಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೈ ಕಚ್ಚಿದ ಭಾಗ್ಯಮ್ಮ: ಕೂಡಲೇ ಆರೋಪಿ ಮನೆ ಬಳಿ ಹೋದ ಭಾಗ್ಯಮ್ಮ, ಆತನನ್ನು ನಿಂದಿಸಿ ಪೊರಕೆಯಿಂದ ಹೊಡೆದಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೋಪದಲ್ಲಿ ಭಾಗ್ಯಮ್ಮ, ಭರತ್‌ನ ಕೈ ಕಚ್ಚಿ ಅಲ್ಲಿಂದ ಮನೆಗೆ ಹೋಗಿದ್ದರು.

ಅದರಿಂದ ಆಕ್ರೋಶಗೊಂಡ ಆರೋಪಿ, ಮದ್ಯದ ಅಮಲಿನಲ್ಲಿ, ಚಾಕು ತೆಗೆದುಕೊಂಡು ಭಾಗ್ಯಮ್ಮ ಅವರ ಮನೆಗೆ ಹೋಗಿ ಆಕೆಯ ಕತ್ತುಕೊಯ್ದು, ನಾಲೆª„ದು ಬಾರಿ ಹೊಟ್ಟೆಗೆ ಇರಿದು ಕೊಂದು, ಮನೆ ಬಾಗಿಲು ಹಾಕಿಕೊಂಡು ಕನಕಪುರದ ಕಡೆ ಹೋಗಿದ್ದ ಎಂದು ಪೊಲೀಸರು ಹೇಳಿದರು.

ಸ್ಥಳೀಯರು ನೀಡಿದ ಮಾಹಿತಿ: ಭಾಗ್ಯಮ್ಮ ಮೂರು ದಿನಗಳಿಂದ ಹೂವಿನ ವ್ಯಾಪಾರಕ್ಕೆ ಬಾರದಿದ್ದ ಕಾರಣ ಆಕೆಯಿಂದ ಪಿಗ್ಮಿ ಹಣ ಕಟ್ಟಿಸಿಕೊಳ್ಳುವರು ಹಾಗೂ ಸ್ಥಳೀಯರು ಮಂಡ್ಯದಲ್ಲಿರುವ ಅವರ ಸಹೋದರನಿಗೆ ಪೋನ್‌ ಮಾಡಿ ಕೇಳಿದ್ದು, ಅವರು, ಇಲ್ಲಿಗೆ ಬಂದಿಲ್ಲ ಎಂದಿದ್ದರು. ಅನುಮಾನದ ಮೇರೆಗೆ ಅವರ ಮನೆ ಬಳಿ ಹೋದಾಗ ದುರ್ವಾಸನೆ ಬಂದಿದ್ದು, ಕೂಡಲೇ ಸುಬ್ರಹ್ಮಣ್ಯಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಸ್ಥಳೀಯರನ್ನು ವಿಚಾರಿಸಿದಾಗ ಕೆಲ ದಿನಗಳ ಹಿಂದೆ ಭರತ್‌ ಜತೆ ಜಗಳ ಮಾಡಿದ್ದ ವಿಚಾರ ತಿಳಿಸಿದ್ದರು. ಈ ಮಾಹಿತಿ ಆಧರಿಸಿ, ಕನಕಪುರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.