ಮದ್ಯದ ಅಮಲಲ್ಲಿ ಸ್ನೇಹಿತನ ಕೊಂದವನ ಸೆರೆ


Team Udayavani, Feb 15, 2019, 6:37 AM IST

arrest3.jpg

ಬೆಂಗಳೂರು: ಮದ್ಯದ ಅಮಲಿನಲ್ಲಿ ಮೊಬೈಲ್‌ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಅಮೃತಹಳ್ಳಿಯ ಜಕ್ಕೂರು ಲೇಔಟ್‌ನಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಈ ಸಂಬಂಧ ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ.

ಜಕ್ಕೂರು ಲೇಔಟ್‌ನ ಜಯರಾಮ್‌ (32) ಕೊಲೆಯಾದವ. ಕೃತ್ಯವೆಸಗಿದ ಶಕೀಬ್‌ (21) ಎಂಬಾತನನ್ನು ಬಂಧಿಸಲಾಗಿದೆ. ತುಮಕೂರು ಮೂಲದ ಜಯರಾಮ್‌ಗೆ ವಿವಾಹವಾಗಿದ್ದು, ಜಕ್ಕೂರು ಲೇಔಟ್‌ನ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆರೋಪಿ ಶಕೀಬ್‌ನ ಚಿಕ್ಕಪ್ಪ ಪಾತ್ರೆ ವ್ಯಾಪಾರಿಯಾಗಿದ್ದು, ನಾಲ್ಕೈದು ತಳ್ಳುವ ಗಾಡಿಗಳನ್ನು ಹೊಂದಿದ್ದಾರೆ.

ಈ ಪೈಕಿ ಒಂದು ತಳ್ಳುವ ಗಾಡಿಯನ್ನು ಶಕೀಬ್‌ ನೋಡಿಕೊಳ್ಳುತ್ತಿದ್ದ. 15 ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ಜಯರಾಮ್‌, ಶಕೀಬ್‌ ಜತೆ ಪಾತ್ರೆ ವ್ಯಾಪಾರಕ್ಕೆ ಹೋಗುತ್ತಿದ್ದ. ಶಕೀಬ್‌ನ ಚಿಕ್ಕಪ್ಪ, ಜಯರಾಮ್‌ಗೆ ಪ್ರತಿನಿತ್ಯ 200 ರೂ. ಕೂಲಿ ಕೊಡುತ್ತಿದ್ದರು. ಈ ಹಣದಲ್ಲಿ ಇಬ್ಬರೂ ಪಾರ್ಟಿ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಮೊಬೈಲ್‌ ವಿಚಾರಕ್ಕೆ ಕೊಲೆ: ಆರೋಪಿ ಶಕೀಬ್‌ ನಾಲ್ಕೈದು ದಿನಗಳ ಹಿಂದಷ್ಟೇ ಜಯರಾಮ್‌ಗೆ ತನ್ನ ಮೊಬೈಲ್‌ ಕೊಟ್ಟಿದ್ದ. ನಂತರ ಮೊಬೈಲ್‌ ಹಿಂದಿರುಗಿಸುವಂತೆ ಸಾಕಷ್ಟು ಬಾರಿ ಕೇಳಿದರೂ ಜಯರಾಮ್‌ ವಾಪಸ್‌ ಕೊಟ್ಟಿರಲಿಲ್ಲ. ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆಯುತ್ತಿತ್ತು. ಬುಧವಾರ ಬೆಳಗ್ಗೆ ಕೂಡ ಇಬ್ಬರ ನಡುವೆ ಗಲಾಟೆಯಾಗಿತ್ತು.

ಆದರೂ ರಾತ್ರಿ 9 ಗಂಟೆ ಸುಮಾರಿಗೆ ಜಯರಾಮ್‌ ಪಾರ್ಟಿ ಮಾಡಲು ಸ್ನೇಹಿತ ಶಕೀಬ್‌ನನ್ನು ಮನೆಗೆ ಕರೆಸಿಕೊಂಡಿದ್ದಾನೆ. ಬಳಿಕ ಇಬ್ಬರೂ ತಡರಾತ್ರಿ 1 ಗಂಟೆವರೆಗೂ ಮದ್ಯ ಸೇವಿಸಿದ್ದಾರೆ. ಈ ವೇಳೆ ಜಯರಾಮ್‌ ಮೊಬೈಲ್‌ ವಿಚಾರಕ್ಕೆ ಗಲಾಟೆ ಮಾಡಿದ್ದು, ಮದ್ಯದ ಅಮಲಿನಲ್ಲಿಯೇ ಮನೆಯಿಂದ ಹೊರಬಂದು ಜೋರಾಗಿ ಕೂಗಾಡಿದ್ದಾನೆ. ಆತನ ಕೂಗಾಟ ಕೇಳಿ ಎಚ್ಚರಗೊಂಡ ಅಕ್ಕ-ಪಕ್ಕದವರು ತೊಂದರೆ ಕೊಡದಂತೆ ಬೈದಿದ್ದರು.

ಇದರಿಂದ ಬೇಸರಗೊಂಡ ಶಕೀಬ್‌, ಜಯರಾಮ್‌ಗೆ ಹೊಡೆದು ಒಳಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಈ ವೇಳೆ ಮತ್ತೆ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಆಗ ಕೋಪಗೊಂಡ ಶಕೀಬ್‌ ಅಲ್ಲೇ ಇದ್ದ ಡಂಬಲ್ಸ್‌ನಿಂದ ಜಯರಾಮ್‌ ತಲೆಗೆ ಹೊಡೆದಿದ್ದು, ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

ಹೊಸಕೋಟೆಗೆ ಹೋಗುವಾಗ ಬಂಧನ: ಕೃತ್ಯ ಎಸಗಿದ ಬಳಿಕ ಗಾಬರಿಗೊಂಡ ಆರೋಪಿ ಶಕೀಬ್‌ ಜಯರಾಮ್‌ನ ಮೃತ ದೇಹವನ್ನು ಮನೆಯೊಳಗೆ ಇಟ್ಟು ಪರಾರಿಯಾಗಿದ್ದ. ಗುರುವಾರ ಬೆಳಗ್ಗೆ ಸುಹೇಲ್‌ ಎಂಬಾತ ಕೆಲಸಕ್ಕೆ ಕರೆದೊಯ್ಯಲು ಜಯರಾಮ್‌ ಮನೆ ಬಳಿ ಬಂದಿದ್ದಾನೆ. ಮನೆ ಬಾಗಿಲ ಬಳಿ ಬಿದ್ದಿದ್ದ ರಕ್ತದ ಕಲೆಗಳನ್ನು ಕಂಡು ಗಾಬರಿಗೊಂಡು ಸ್ಥಳೀಯರನ್ನು ಪ್ರಶ್ನಿಸಿದ್ದಾನೆ.

ಅನುಮಾನಗೊಂಡ ಅಕ್ಕ-ಪಕ್ಕದ ನಿವಾಸಿಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಬಾಗಿಲು ಒಡೆದು ನೋಡಿದಾಗ ಜಯರಾಮ್‌ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಜಯರಾಮ್‌, ಶಕೀಬ್‌ ಜತೆ ಪಾರ್ಟಿ ಮಾಡಿದ ವಿಚಾರ ಗೊತ್ತಾಗಿದೆ. ಆ ವೇಳೆಗಾಗಲೇ ಆರೋಪಿ ಸ್ವಂತ ಊರಾದ ಹೊಸಕೋಟೆಗೆ ಪರಾರಿಯಾಗಲು ಯತ್ನಿಸಿದ್ದ.

ಈ ಮಾಹಿತಿ ಸಂಗ್ರಹಿಸಿದ ಪೊಲೀಸರು, ಆರೋಪಿಯನ್ನು ಮಾರ್ಗಮಧ್ಯೆ ಬಂಧಿಸಿದ್ದಾರೆ. ಜಯರಾಮ್‌, ಕುಡಿದ ಅಮಲಿನಲ್ಲಿ ಮನೆ ಬಳಿಯ ಅಂಗಡಿಯವರು ಹಾಗೂ ಇತರರಿಗೆ ತೊಂದರೆ ಕೊಡುತ್ತಿದ್ದ. ಈ ಕುರಿತು ಆತನ ವಿರುದ್ಧ ನಾಲ್ಕೈದು ದೂರುಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು. ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.