ಎಟಿಎಂಗೆ ಸ್ಕಿಮ್ಮರ್‌ ಅಳವಡಿಸಿದ್ದ ವಿದೇಶಿಯರ ಸೆರೆ


Team Udayavani, Jul 7, 2019, 3:03 AM IST

atm

ಬೆಂಗಳೂರು: ಎಟಿಎಂ ಯಂತ್ರಗಳಿಗೆ ಸ್ಕಿಮ್ಮರ್‌ಗಳನ್ನು ಅಳವಡಿಸಿ ಗ್ರಾಹಕರ ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ಗಳ ಮಾಹಿತಿ ಕಳವು ಮಾಡಲು ಸಂಚು ರೂಪಿಸಿದ್ದ ಇಬ್ಬರು ವಿದೇಶಿಗರನ್ನು ತಿಲಕನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ದಕ್ಷಿಣ ಅಮೆರಿಕದ ಚಿಲಿಯಾ ಮೂಲದ ಇಬ್ಬರು ಆರೋಪಿಗಳನ್ನು (ಹೆಸರು ತಿಳಿದುಬಂದಿಲ್ಲ) ಬಂಧಿಸಲಾಗಿದ್ದು, ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಪ್ರವಾಸಿ ಮತ್ತು ವಾಣಿಜ್ಯ ವೀಸಾದಡಿ ಭಾರತಕ್ಕೆ ಬಂದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದು, ಹುಳಿಮಾವು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಆರೋಪಿಗಳು ಗ್ರಾಹಕರ ಬ್ಯಾಂಕ್‌ ಡೇಟಾ ಕಳವು ಮಾಡಲು ಎಟಿಎಂ ಯಂತ್ರಗಳಿಗೆ ಸ್ಕಿಮ್ಮರ್‌ ಅಳವಡಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಕೆನರಾ ಬ್ಯಾಂಕ್‌ ಎಟಿಎಂ ಯಂತ್ರಗಳಿಗೆ ಹಣ ತುಂಬಲು ಹೊರ ಗುತ್ತಿಗೆ ಪಡೆದಿದ್ದ ಎಪಿಎಸ್‌ ಪ್ರೈ.ವಿ.ನಲ್ಲಿ ಉಸ್ತುವಾರಿ ಅಧಿಕಾರಿಯಾಗಿರುವ ಹುಸೇನ್‌, ಜು.2ರಂದು ಸಂಜೆ 4.30ರ ಸುಮಾರಿಗೆ ಜಯನಗರದ 9ನೇ ಬ್ಲಾಕ್‌ 37ನೇ ಅಡ್ಡ ರಸ್ತೆಯಲ್ಲಿರುವ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಬಂದಿದ್ದು, ಹಣ ತುಂಬಿಸಿದ ನಂತರ ಯಂತ್ರಕ್ಕೆ ಎಟಿಎಂ ಕಾರ್ಡ್‌ ಹಾಕಿ ಪರಿಶೀಲಿಸಿದ್ದಾರೆ.

ಈ ವೇಳೆ ಕಾರ್ಡ್‌ ರೀಡರ್‌ ಸ್ಥಳದಲ್ಲಿ ಯಾರೋ ಸ್ಕಿಮ್ಮರ್‌ ಅಳವಡಿಸಿರುವುದು ಕಂಡು ಬಂದಿದೆ. ಕೂಡಲೇ ಹುಸೇನ್‌ ಅವರು ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಬ್ಯಾಂಕ್‌ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಅನಂತರ ಸ್ಥಳಕ್ಕೆ ಬಂದ ಬ್ಯಾಂಕ್‌ನ ತಾಂತ್ರಿಕ ತಂಡ ಪರಿಶೀಲಿಸಿದಾಗ ಸ್ಕಿಮ್ಮರ್‌ ಅಳವಡಿಸಿ, ಎಟಿಎಂ ಯಂತ್ರದ ಮೂಲಕ ಗ್ರಾಹಕರ ಡೇಟಾ ಕದ್ದು ಕ್ಲೋನಿಂಗ್‌ ಕಾರ್ಡ್‌ಗಳನ್ನು ತಯಾರಿಸಿ ಗ್ರಾಹಕರ ಖಾತೆಗಳಿಂದ ಹಣ ಕಳವು ಮಾಡಲು ಸಂಚು ರೂಪಿಸಿರುವುದು ಗೊತ್ತಾಗಿದೆ.

ಈ ಸಂಬಂಧ ಬ್ಯಾಂಕ್‌ನ ಹಿರಿಯ ಅಧಿಕಾರಿ ಗಿರೀಶ್‌ ವಿ.ಗೋಕರ್ಣ ಎಂಬವರು ಜು.2ರಂದು ತಿಲಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಎಟಿಎಂ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲಿಸಿದಾಗ ಆರೋಪಿಗಳು ಭದ್ರತಾ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಸ್ಕಿಮ್ಮರ್‌ ಅಳವಡಿಸಿರುವುದು ಮತ್ತು ಆರೋಪಿಗಳ ಚಹರೆ ಪತ್ತೆಯಾಗಿತ್ತು.

ಈ ಆಧಾರದ ಮೇಲೆ ಪಾಸ್‌ಪೋರ್ಟ್‌ ಕಚೇರಿಯಲ್ಲಿ ಆರೋಪಿಗಳ ಬಗ್ಗೆ ವಿಚಾರಣೆ ನಡೆಸಿದಾಗ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ತಿಲಕನಗರ ಪೊಲೀಸರು ಆರೋಪಿಗಳು ವಾಸವಾಗಿದ್ದ ಮನೆ ಮೇಲೆ ದಾಳಿ ನಡೆಸಿದಾಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಬಂಧಿತರು ನಗರದ ಎಷ್ಟು ಎಟಿಎಂ ಕೇಂದ್ರಗಳಲ್ಲಿ ಸ್ಕಿಮ್ಮರ್‌ ಅಳವಡಿಸಿದ್ದಾರೆ, ನಗರದಲ್ಲಿ ನಡೆದಿದ್ದ ಈ ಹಿಂದಿನ ಯಾವುದಾದರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರಾ ಎಂಬ ಬಗ್ಗೆ ವಿಚಾರಣೆ ನಡೆಯಬೇಕಿದೆ ಎಂದು ಮೂಲಗಳು ತಿಳಿಸಿವೆ.

ಗ್ರಾಹಕರ ಡೇಟಾ ಕಳವು ಹೇಗೆ?: ಗ್ರಾಹಕರು ಎಟಿಎಂ ಯಂತ್ರಕ್ಕೆ ಕಾರ್ಡ್‌ ಹಾಕಿ ಹಣ ಪಡೆಯುವಾಗ ಅಥವಾ ವಹಿವಾಟು ಪರಿಶೀಲಿಸುವಾಗ ದಾಖಲಿಸುವ ಪಿನ್‌ ನಂಬರ್‌ ನೇರವಾಗಿ ಸ್ಕಿಮ್ಮರ್‌ನಲ್ಲಿ ಸಂಗ್ರಹವಾಗುತ್ತದೆ. ನಂತರ ಸ್ಕಿಮ್ಮರ್‌ಗಳನ್ನು ಕೊಂಡೊಯ್ಯುವ ಕಳ್ಳರು, ಅದರಲ್ಲಿರುವ ಗ್ರಾಹಕರ ಕಾರ್ಡ್‌ಗಳು ಮತ್ತು ಬ್ಯಾಂಕ್‌ನ ಮಾಹಿತಿಯನ್ನು ವಿಶೇಷ ತಾಂತ್ರಿಕತೆ ಮೂಲದ ಮತ್ತೂಂದು ನಕಲಿ ಕಾರ್ಡ್‌ಗೆ ದಾಖಲಿಸಿ, ಬೇರೆಡೆ ವಹಿವಾಟು ನಡೆಸಿ ಅಥವಾ ವಸ್ತುಗಳನ್ನು ಖರೀದಿಸಿ ವಂಚಿಸುತ್ತಾರೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.