ಮಾರಕಾಸ್ತ್ರದಿಂದ ಬೆದರಿಸಿದ್ದವರ ಸೆರೆ
Team Udayavani, Jul 7, 2019, 3:03 AM IST
ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಜೂ.30ರಂದು ಗಾಂಜಾ ಸೇವಿಸಿ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳನ್ನು ಬೀಸಿ ಆತಂಕದ ವಾತಾವರಣ ಸೃಷ್ಟಿಸಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಅಂಜನಾನಗರ ನಿವಾಸಿ ಸುಹಾಸ್ (21) ಮಾಗಡಿ ಮುಖ್ಯರಸ್ತೆಯ ಕಾಚೋಹಳ್ಳಿ ಕ್ರಾಸ್ ನಿವಾಸಿ ಮಾರೇಗೌಡ ಅಲಿಯಾಸ್ ಮಹೇಶ್ (23) ಬಂಧಿತರು. ತಲೆಮರೆಸಿಕೊಂಡಿರುವ ಆರೋಪಿಗಳಾದ ರಿಜ್ವಾನ್, ಅಕºರ್, ನಾಗೇಂದ್ರ ಮತ್ತು ಲೋಕೇಶ್ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಜೂ.30ರಂದು ಗಾಂಜಾ ಸೇವಿಸಿದ್ದ ಆರೋಪಿಗಳು, ಬ್ಯಾಡರಹಳ್ಳಿಯಲ್ಲಿ ಸಾರ್ವಜನಿಕರ ಕಡೆ ಮಾರಕಾಸ್ತ್ರಗಳನ್ನು ಬೀಸಿ ಆತಂಕ ಸೃಷ್ಟಿಸಿದ್ದರು. ಅಲ್ಲದೆ, ವಿಜಯನಗರದಿಂದ ಬ್ಯಾಡರಹಳ್ಳಿಯವರೆಗೂ ರಸ್ತೆ ಬದಿ ನಿಂತಿದ್ದ ಪಾನಿಪುರಿ ಅಂಗಡಿ ಸೇರಿ ತಳ್ಳುವ ಗಾಡಿ ವ್ಯಾಪಾರಿಗಳಿಗೆ ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದರು.
ಅಂಗಡಿಗಳ ಪಿಠೊಪಕರಗಳನ್ನು ಧ್ವಂಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿತ್ತು.
ಈ ಮಧ್ಯೆಆರೋಪಿಗಳು ಎರಡು ದಿನಗಳ ಹಿಂದೆ ಕಾಮಾಕ್ಷಿಪಾಳ್ಯದ ಪ್ರೇಮ್ನಗರದಲ್ಲಿ ಡಕಾಯಿತಿ ಮಾಡಲು ಸಂಚು ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದಾಗ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಕಾಮಾಕ್ಷಿಪಾಳ್ಯ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ