ಕೆಲಸ ಕೊಡಿಸುವುದಾಗಿ ವಂಚಿಸಿದವನ ಸೆರೆ
Team Udayavani, Aug 5, 2018, 3:20 PM IST
ಬೆಂಗಳೂರು: ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಿ ಎಂದು ಜಾಹೀರಾತು ನೀಡಿ ಶುಲ್ಕದ ರೂಪದಲ್ಲಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿ ರೋಹಿತ್(26) ಬಂಧಿತ. ಆರೋಪಿ ಎಂಬಿಎ ಪದವೀಧರನಾಗಿದ್ದು, ಇದುವರೆಗೂ 110 ಕ್ಕೂ ಅಧಿಕ ಮಂದಿಗೆ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಜಾಬ್ ಫಾರ್ ಶ್ಯೂರ್ ಹೆಸರಿನಲ್ಲಿ ಸಂಸ್ಥೆ ಆರಂಭಿಸಿದ್ದ ಆರೋಪಿ, ಮನೆಯಲ್ಲೇ ಕುಳಿತು ಕೆಲಸ ಮಾಡಬಹುದು. ಬರವಣೆಗೆ ಕೆಲಸ ಇರುತ್ತದೆ. ಪುಟದ ಲೆಕ್ಕದಲ್ಲಿ ಹಣ ನೀಡಲಾಗುವುದು ಎಂದೆಲ್ಲ ಜಾಹೀರಾತು ನೀಡಿದ್ದ. ಇದಕ್ಕಾಗಿ ನೋಂದಣಿ ಶುಲ್ಕ ಎಂದು ತಲಾ 4 ಸಾವಿರ ರೂ. ಸಂಗ್ರಹಿಸಿದ್ದ. ಇದನ್ನು ನಂಬಿದ ನೂರಾರು ಮಂದಿ ಹಣ ಪಾವತಿಸಿದ್ದಾರೆ.
ಆರಂಭದಲ್ಲಿ ನೊಂದಾಯಿಸಿದ ಮಂದಿಗೆ ಪ್ರತಿತಿಂಗಳು ತಪ್ಪದೆ ಹಣ ಪಾವತಿ ಮಾಡಿ ವಿಶ್ವಾಸಗಳಿಸಿದ್ದ. ಬಳಿಕ ಇದೇ ಮಂದಿಗೆ ಇನ್ನಷ್ಟು ಸದಸ್ಯರನ್ನು ನೇಮಿಸಿದರೆ ಸಾವಿರ ರೂ. ಕಮಿಷನ್ ನೀಡುವುದಾಗಿ ಹೇಳಿದ್ದ. ಇದನ್ನು ನಂಬಿದ ಕೆಲ ಮಂದಿ ತಮ್ಮ ಸ್ನೇಹಿತರು ಹಾಗೂ ಸಂಬಂಧಿಕರನ್ನು ಕರೆತಂದು ನೊಂದಾಯಿಸಿದ್ದಾರೆ. ಬಳಿಕ ಆರೋಪಿ ಕೆಲಸ ಕೊಡದೆ, ಹಣವನ್ನು ಹಿಂದಿರುಗಿಸದೆ ವಂಚಿಸಿದ್ದಾನೆ ಈ ಸಂಬಂಧ ವಂಚನೆಗೊಳಗಾದವರು ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?