ಜಾಲಿರೈಡ್ ಬಂದು ಮದುವೆಗೆ ಎಂದ ಮಹಿಳೆಯರು!
ಕಾರು ಜಪ್ತಿ ಮಾಡಿ ಆಟೋದಲ್ಲಿ ಐವರನ್ನು ಮನೆಗೆ ಕಳಿಸಿದ ಪೊಲೀಸರು
Team Udayavani, Jan 16, 2022, 11:53 AM IST
ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ ನಿಯಂತ್ರಣ ಹಿನ್ನೆಲೆಯಲ್ಲಿ ಜಾರಿಯಾಗಿರುವ “ವಾರಾಂತ್ಯದ ಕರ್ಫ್ಯೂ’ನ ಎರಡನೇ ವಾರದ ಮೊದಲ ದಿನ ಪೊಲೀಸರು ಕಟ್ಟುನಿಟ್ಟಾಗಿ ಪಾಲನೆ ಮಾಡಿದರು. ಈ ನಡುವೆಯೂ ವೃದ್ಧರೊಬ್ಬರ ಮನವಿಗೆ ಸ್ಪಂದಿಸಿದ ಪೊಲೀಸರು ಮಾನವಿಯತೆ ಮೆರೆದರು. ಜತೆಗೆ ಒಂದೆರಡು ಸ್ವಾರಸ್ಯಕರ ಘಟನೆಗಳು ವರದಿಯಾಗಿವೆ.
ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ವಿರುದ್ಧ ನಿರ್ದಾಕ್ಷಣ್ಯ ಕ್ರಮಕೈಗೊಂಡು, ವಾಹನ ಜಪ್ತಿ ಮಾಡಿದರು. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನಿಷ್ಠ 8-10 ಕಡೆಗಳಲ್ಲಿ ವಾಹನ ತಪಾಸಣೆಗಾಗಿಯೇ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿತ್ತು. ಶುಕ್ರವಾರ ರಾತ್ರಿ 10 ಗಂಟೆಯಿಂದ ತಡರಾತ್ರಿ 2 ಗಂಟೆವರೆಗೆ ತಪಾಸಣೆ ನಡೆಸಿದರು.
ನಂತರ ಶನಿವಾರ ಮುಂಜಾನೆ 5 ಗಂಟೆಯಿಂದಲೇ ವಾಹನ ತಪಾಸಣೆ ಆರಂಭಿಸಿ, ಜಪ್ತಿ ಮಾಡಿದರು. ಈ ವಾಹ ನಗಳ ವಿರುದ್ಧ ಯಾವುದಾದರೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆಯೇ ಎಂಬ ಮಾಹಿತಿ ಸಂಗ್ರಹಿಸಿ, ನ್ಯಾಯಾಲಯಕ್ಕೆ ವರದಿ ನೀಡಲಿದ್ದಾರೆ. ನಂತರ ಸಂಚಾರ ನಿಯಮ ಉಲ್ಲಂಘನೆ ದಂಡದ ಜತೆಗೆ ಕೊರೊನಾ ನಿಯಮ ಉಲ್ಲಂಘನೆ ದಂಡವು ಪಾವತಿಸಿಬಿಡುಗಡೆ ಮಾಡಿಕೊಳ್ಳಬೇಕು. ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾನೆವರೆಗೆ ನಗರದಲ್ಲಿ 42 ವಾಹನಗಳ( ಬೈಕ್, ಕಾರು, ಆಟೋ ಸೇರಿ) ಜಪ್ತಿ ಮಾಡಿದ್ದಾರೆ.
ಮದುವೆಗೆ ಎಂದು ಸುಳ್ಳು: ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮಹಿಳೆಯರು ಸೇರಿ ಐವರು ಮೈಸೂರು ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ಪೊಲೀಸರು ತಡೆದು ಪರಿಶೀಲಿಸಿದಾಗ ಮದುವೆ ಆಹ್ವಾನ ಪತ್ರಿಕೆ ಇರಲಿಲ್ಲ. ಬಳಿಕ ಪರಿಶೀಲಿಸಿದಾಗ ಯಾವುದೇ ಮದುವೆಗೆ ಹೋಗುತ್ತಿರಲಿಲ್ಲ. ಸುಮ್ಮನೆ ಹೊರಗಡೆ ಬಂದಿದ್ದಾರೆ ಎಂಬುದು ಗೊತ್ತಾಗಿದೆ. ನಂತರ ಕಾರು ಜಪ್ತಿ ಮಾಡಲಾಗಿದೆ. ಐವರು ಆಟೋದಲ್ಲಿ ಮನೆಗೆ ತೆರಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ಮತ್ತೂಂದು ಘಟನೆಯಲ್ಲಿ ಯುವಕನೊಬ್ಬ ತಾನೂ ಝೋಮ್ಯಾಟೋದಲ್ಲಿ ಫುಡ್ ಡೆಲಿವರಿ ಬಾಯ್ ಆಗಿದ್ದೇನೆ ಎಂದು ಹೇಳಿದ್ದಾನೆ.
ಆದರೆ, ಆತನ ಬ್ಯಾಗ್ ಪರಿಶೀಲಿಸಿದಾಗ ಫುಡ್ ಇರಲಿಲ್ಲ. ಅದನ್ನು ಪ್ರಶ್ನಿಸಿದಾಗ ಪರಿಚಯಸ್ಥರ ವಾಹನ ತಂದಿರುವುದಾಗಿ ಗೊತ್ತಾಗಿದೆ. ಅದನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ