ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲು
Team Udayavani, Mar 22, 2019, 6:39 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸಂಭವನೀಯ ಅಭ್ಯರ್ಥಿ, ನಟ ಪ್ರಕಾಶ್ ರಾಜ್ ಸೇರಿ ಮೂವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಂತಿನಗರ ವಿಧಾನಸಭಾ ಕ್ಷೇತ್ರದ ವಿಚಕ್ಷಣಾ ದಳದ ಅಧಿಕಾರಿ ಡಿ.ಮೂರ್ತಿ ಅವರು ನೀಡಿದ ದೂರಿನ ಆಧಾರದ ಮೇಲೆ ನಟ ಕೆ.ಪ್ರವೀಣ್, ಸಿ.ಎ.ಅಭಿಲಾಷ್ ಹಾಗೂ ಪ್ರಕಾಶ್ ರಾಜ್ ವಿರುದ್ಧ ಕಬ್ಬನ್ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರವೀಣ್ ಮತ್ತು ಅಭಿಲಾಷ್ ಮಾ.12ರಂದು ಸಂಜೆ 4.30ರ ಸುಮಾರಿಗೆ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮಗಾಂಧಿ ವೃತ್ತದ ಬಳಿ ಒಂದು ಗಂಟೆಗಳ ಕಾಲ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್, ಕೆಲ ಲೇಖಕರು, ಕಲಾವಿದರು, ಹೋರಾಟಗಾರರು ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್, ಲೋಕಸಭಾ ಚುನಾವಣೆ ಕುರಿತ ಮತದಾನದ ಬಗ್ಗೆ ಮಾತನಾಡಿದ್ದರು.
ಈ ಕುರಿತು ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಪ್ರತಿಭಟನೆಯಲ್ಲಿ ಸುಮಾರು 25-30 ಮಂದಿ ಜನ ಸೇರಿದ ಪರಿಣಾಮ ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕರ ಓಡಾಡಕ್ಕೆ ತೊಂದರೆಯಾಗಿತ್ತು. ಈ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮೇಲೆ ಡಿ.ಮೂರ್ತಿ ಅವರು ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಕಬ್ಬನ್ಪಾರ್ಕ್ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?