ಹಿರಿಯ ಅಧಿಕಾರಿಗಳ ವಿರುದ್ಧ ಕೇಸ್‌


Team Udayavani, Feb 5, 2020, 3:10 AM IST

hiriya

ಬೆಂಗಳೂರು: ಬಹುಕೋಟಿ ಐ ಮಾನಿಟರಿ ಅಡ್ವೈಸರಿ(ಐಎಂಎ) ವಂಚನೆ ಪ್ರಕರಣದಲ್ಲಿ ರಾಜ್ಯದ ಇಬ್ಬರು ಹಿರಿಯ ಐಪಿಎಸ್‌ ಅಧಿಕಾರಿಗಳಾದ ಬೆಂಗಳೂರು ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌, ಕೆಎಸ್‌ಆರ್‌ಪಿ ಕಮಾಂಡೆಂಟ್‌ ಅಜಯ್‌ ಹಿಲ್ಲೋರಿ ಸೇರಿ ಒಂಭತ್ತು ಮಂದಿ ಮತ್ತು ಐಎಂಎ ಕಂಪನಿ ಹಾಗೂ ಇತರರ ವಿರುದ್ಧ ಬೆಂಗಳೂರಿನ ಸಿಬಿಐ(ಭ್ರಷ್ಟಾಚಾರ ನಿಗ್ರಹ ದಳ) ಭ್ರಷ್ಟಾಚಾರ ಹಾಗೂ ಅಪರಾಧ ಒಳ ಸಂಚು ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಪ್ರಕರಣ ಸಂದರ್ಭದಲ್ಲಿ ಎ1(ಮೊದಲ ಆರೋಪಿ) ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಇನ್‌ಸ್ಪೆಕ್ಟರ್‌ ಆಗಿದ್ದ ಎಂ.ರಮೇಶ್‌, ಎ2 ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್‌ ಅಧಿಕಾರಿ ಅಜಯ್‌ ಹಿಲ್ಲೋರಿ, ಎ3 ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಆಗಿದ್ದ ಗೌರಿಶಂಕರ್‌, ಎ4 ಸಿಐಡಿ ಆರ್ಥಿಕ ಅಪ ರಾಧಗಳ ವಿಭಾಗದ ಡಿವೈಎಸ್ಪಿಯಾಗಿದ್ದ ಇ.ಬಿ. ಶ್ರೀಧರ್‌, ಎ5 ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿಪಿಯಾಗಿದ್ದ ಹೇಮಂತ್‌ ನಿಂಬಾಳ್ಕರ್‌, ಎ6 ಪ್ರಕರಣದ ಮಾಸ್ಟರ್‌ ಮೈಂಡ್‌, ಐಎಂಎ ಮುಖ್ಯಸ್ಥ ಮೊಹಮ್ಮದ್‌ ಮನ್ಸೂರ್‌ ಖಾನ್‌, ಎ7 ನಿರ್ದೇಶಕ ನಿಜಾವುದ್ದೀನ್‌, ಎ8 ನಿರ್ದೇಶಕ ವಸೀಂ, ಎ9 ಅಶ್ರದ್‌ ಖಾನ್‌, ಎ10 ಐಎಂಎ ಸಂಸ್ಥೆ ಮತ್ತು ಎ11 ಸರ್ಕಾರದ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಅಧಿಕ ಬಡ್ಡಿ ಹಾಗೂ ಇತರೆ ಆಮಿಷಗಳನ್ನೊಡ್ಡಿ ಸಾವಿರಾರು ಮಂದಿಯಿಂದ ಸುಮಾರು ನಾಲ್ಕು ಸಾವಿರ ಕೋಟಿ ರೂ. ಸಂಗ್ರಹಿಸಿ ವಂಚಿಸಿದ ಪ್ರಕರಣ ಸಂಬಂಧ ಆರಂಭದಲ್ಲಿ ಡಾ ಬಿ.ಆರ್‌.ರವಿಕಾಂತೇಗೌಡ ನೇತೃತ್ವದ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸಿ ಮನ್ಸೂರ್‌ ಖಾನ್‌, ನಿರ್ದೇಶಕರು, ಮೌಲ್ವಿಗಳು, ಮಧ್ಯವರ್ತಿಗಳು ಹಾಗೂ ಒಬ್ಬರು ಐಎಎಸ್‌ ಅಧಿಕಾರಿಗಳು, ಉಪವಿಭಾಗಾಧಿಕಾರಿ ಸೇರಿ ಸುಮಾರು 25ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿತ್ತು. ಜತೆಗೆ ಸಂಸ್ಥೆ ಹಾಗೂ ಅದರ ಅಂಗ ಸಂಸ್ಥೆಯಲ್ಲಿರುವ ವಸ್ತುಗಳು ಹಾಗೂ ಕೋಟ್ಯಂತರ ರೂ. ನಗದು ವಶಕ್ಕೆ ಪಡೆದುಕೊಂಡಿತ್ತು. ಬಳಿಕ ಪ್ರಕರಣವನ್ನು ಸರ್ಕಾರ ಪ್ರಕರಣದ ಹೆಚ್ಚಿನ ತನಿಖೆಗೆ ಸಿಬಿಐಗೆ ವಹಿಸಿತ್ತು.

ಈ ಸಂಬಂಧ ತನಿಖೆ ಚುರುಕುಗೊಳಿಸಿದ್ದ ಸಿಬಿಐ ಅಧಿಕಾರಿಗಳು ಎಸ್‌ಐಟಿ ತನಿಖಾ ವರದಿಯನ್ನಾಧರಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಸಿತ್ತು. ಬಳಿಕ ಐಎಂಎ ಮುಖ್ಯಸ್ಥ ಮನ್ಸೂರ್‌ ಖಾನ್‌ನ ಅವ್ಯವಹಾರ ಹಾಗೂ ಅಕ್ರಮ ಹಣ ಸಂಗ್ರಹಕ್ಕೆ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಮತ್ತು ಡಿಸಿಪಿ ಅಜಯ್‌ ಹಿಲ್ಲೋರಿ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಸಹಾಯ ಮಾಡಿದ್ದಾರೆ ಎಂಬ ಗಂಭೀರ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಸರ್ಕಾರ ಅನುಮತಿ ನೀಡಿದ ಮೇರೆಗೆ ಸಿಬಿಐ ಫೆ.1ರಂದು ಎಲ್ಲ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಅಪರಾಧ ಒಳಸಂಚು ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪ ಏನು?: ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಅಕ್ರಮವಾಗಿ ಹಣ ಹೂಡಿಕೆ ಮಾಡುತ್ತಿರುವ ಐಎಂಎ ಕಂಪನಿಯ ಬಗ್ಗೆ 2016ರಲ್ಲಿ ಆರ್‌ಬಿಐ ಬಗ್ಗೆ ನಿಗಾ ವಹಿ ಸುವಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇ ಶಕರಿಗೆ ಸೂಚಿಸಿತ್ತು. ಆಗ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಅಜಯ್‌ ಹಿಲ್ಲೋರಿ ಮೂಲಕ ಇನ್‌ಸ್ಪೆಕ್ಟರ್‌ ರಮೇಶ್‌ಗೆ ಪತ್ರದ ಮೂಲಕವೇ ಸೂಚಿಸ ಲಾಗಿತ್ತು. ಆದರೆ, ಸೂಕ್ತ ತನಿಖೆ ನಡೆಸದೆ 2016ರ ಆ. 29ರಂದು ಪ್ರಕರಣವನ್ನು ಮುಕ್ತಗೊಳಿಸಿದ್ದರು. ಐಎಂಎ ಕಂಪನಿ ನಿಯಮ ಪ್ರಕಾರವೇ ವ್ಯವಹಾರ ನಡೆಸುತ್ತಿದೆ. ಯಾವುದೇ ಹೂಡಿಕೆದಾರ ದೂರು ನೀಡದೇ ಇರುವುದರಿಂದ ಕರ್ನಾಟಕ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆಯಡಿ (ಕೆಪಿಐಡಿ) ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ರಮೇಶ್‌ ವರದಿ ನೀಡಿದ್ದರು ಎಂದು ಸಿಬಿಐ ಎಫ್ಐಆರ್‌ನಲ್ಲಿ ತಿಳಿಸಿದೆ.

ಆದರೆ, ಈ ವರದಿ ತಿರಸ್ಕರಿಸಿದ ಆರ್‌ಬಿಐ ನೇರವಾಗಿ ಕಂದಾಯ ಇಲಾಖೆಗೆ ಪತ್ರ ಬರೆದು ಮತ್ತೂಮ್ಮೆ ಪರಿಶೀಲಿಸುವಂತೆ ಸೂಚಿಸಿತ್ತು. ಈ ಮಧ್ಯೆ ಐಎಂಎ ಕಂಪನಿ ವಿರುದ್ಧ ದೂರುಗಳು ಬಂದಿದ್ದು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪೊಲೀಸ್‌ ತನಿಖೆಗೆ ಸೂಚಿಸಿದ್ದರು. ಆದರೆ, ಪಿಐ ರಮೇಶ್‌, ಪಿಎಸ್‌ಐ ಗೌರಿಶಂಕರ್‌ ಮತ್ತು ಡಿಸಿಪಿ ಅಜಯ್‌ ಹಿಲ್ಲೋರಿ ಕ್ರಮ ತೆಗೆದುಕೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದರು. ಮನ್ಸೂರ್‌ ಖಾನ್‌ನ ಆಮಿಷಕ್ಕೊಳಗಾಗಿ ಆತನ ಪರವಾಗಿ ವರದಿ ಸಲ್ಲಿಸಿದ್ದರು. ಈ ಮೂವರು ಅಧಿಕಾರಿಗಳು ಒಳಚಂಚು ರೂಪಿಸಿ, ಐಎಂಎ ಕಂಪನಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಸಿಬಿಐ ಹೇಳಿದೆ.

ಮೌಲ್ಯಯುತ ವಸ್ತು ಸ್ವೀಕಾರ ಆರೋಪ: ಠೇವಣಿದಾರರ ಸಂರಕ್ಷಣಾ ಕಾಯ್ದೆಯಡಿ ಐಎಂಎ ಕಂಪನಿಯ ವ್ಯವಹಾರಗಳನ್ನು ತನಿಖೆ ನಡೆಸುವಂತೆ 2018ರ ಜುಲೈ 4ರಂದು ಸರ್ಕಾರ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವಹಿಸಿತ್ತು. ಆಗ ಈ ವಿಭಾಗದ ಐಜಿಪಿಯಾಗಿದ್ದ ಹೇಮಂತ್‌ ನಿಂಬಾಳ್ಕರ್‌ ಮತ್ತು ಡಿವೈಎಸ್ಪಿ ಇ.ಬಿ. ಶ್ರೀಧರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಅವರು 2019ರ ಜ. 1ರಂದು ಕಂಪನಿ ಯಾವುದೇ ಅವ್ಯವಹಾರದಲ್ಲಿ ತೊಡಗಿಲ್ಲ. ಕಾನೂನು ಬದ್ಧವಾಗಿಯೇ ಹಣ ಸಂಗ್ರಹಿಸುತ್ತಿದೆ ಎಂದು ಕಂಪನಿಯ ಪರವಾಗಿ ವರದಿ ಸಿದ್ದಪಡಿಸಿ 2019ರ ಜ. 18ರಂದು ಸಲ್ಲಿಸಿದ್ದರು. ಅಧಿಕಾರಿಗಳು ಲಂಚ ಹಾಗೂ ಮೌಲ್ಯಯುತ ವಸ್ತುಗಳನ್ನು ಸ್ವೀಕರಿಸಿದ್ದಾರೆ ಎಂಬ ಆರೋಪ ಸಿಬಿಐ ಮಾಡಿದೆ.

ಲಂಚದ ಬಗ್ಗೆ ಮನ್ಸೂರ್‌ ಹೇಳಿಕೆ: ಈ ಮಧ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮನ್ಸೂರ್‌ ಖಾನ್‌ ಸಿಬಿಐ ವಿಚಾರಣೆ ಸಂದರ್ಭದಲ್ಲಿ ತನ್ನ ಪರವಾಗಿ ವರದಿ ನೀಡುವಂತೆ ತನಿಖಾಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಕೋಟ್ಯಂತರ ರೂ. ಲಂಚ ನೀಡಿರುವುದಾಗಿ ಹೇಳಿಕೆ ನೀಡಿದ್ದ. ಈ ಎಲ್ಲ ಮಾಹಿತಿ ಆಧರಿಸಿ ಐಪಿಎಸ್‌ ಅಧಿಕಾರಿಗಳು ಸೇರಿ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.