ಪ್ರಕರಣ ರದ್ದು: ಬಿಎಸ್ವೈ ಅರ್ಜಿ
Team Udayavani, Jan 31, 2019, 6:09 AM IST
ಬೆಂಗಳೂರು: ಡಿ-ನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಖಾಸಗಿ ದೂರು ರದ್ದುಗೊಳಿಸಬೇಕು ಹಾಗೂ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ನಗರದ ದೇವರಬೀಸನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ವಶಪಡಿಸಿಕೊಂಡಿದ್ದ ಜಮೀನನ್ನು ಬಿಎಸ್ವೈ ಉಪಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ಡಿ-ನೋಟಿಫಿಕೇಷನ್ ಮಾಡಿದ್ದಾರೆ ಎಂದು ವಾಸುದೇವ ರೆಡ್ಡಿ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯು ತ್ತಿದೆ. ಇದನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿದೆ.
ನಗರದ ವೈಟ್ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯ ಜಾಗವನ್ನು ‘ಐಟಿ ಕಾರಿಡಾರ್’ ಎಂದು ರಾಜ್ಯ ಸರ್ಕಾರ 2000-2001ರಲ್ಲಿ ಘೋಷಿಸಿತ್ತು. ಅದರಂತೆ ಮಾರತಹಳ್ಳಿ, ಬೆಳ್ಳಂದೂರು, ಸರ್ಜಾ ಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶವನ್ನು ಸ್ವಾಧೀನಕ್ಕೆ ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು.
ಆದರೆ, ಬಿ.ಎಸ್.ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10 ಎಕರೆ, ಸರ್ವೇ ನಂ 10ರ 33 ಗುಂಟೆ ಜಾಗವನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರ ಜುಲೈ 10ರಂದು ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.
ದೂರು ಕುರಿತು ತನಿಖೆ ನಡೆಸುವಂತೆ ಲೋಕಾ ಯುಕ್ತ ವಿಶೇಷ ನ್ಯಾಯಾಲಯವು 2015ರ ಫೆ.18ರಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಅದರಂತೆ ಪೊಲೀಸರು 2015ರ ಫೆ.21ರಂದು ಎಫ್ಐಆರ್ ದಾಖಲಿಸಿ, ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಯಡಿಯೂರಪ್ಪ ಅವರು, ತಮ್ಮ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ದೂರು ದಾಖಲಿಸಿದ್ದು, ಅದನ್ನು ವಿಶೇಷ ನ್ಯಾಯಾಯಲವು ವಿಚಾರಣೆಗೆ ಅಂಗೀಕರಿಸಿರುವುದು ಕಾನೂನು ಬಾಹಿರ ಕ್ರಮ. ಸುಪ್ರೀಂ ಕೋರ್ಟ್ ಆದೇಶ ಮೀರಿ ದೂರುದಾರ ನೇರವಾಗಿ ವಿಶೇಷ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದಾರೆ. ಇದು ಕಾನೂನು ಬಾಹಿರ. ಹಾಗಾಗಿ ಪ್ರಕರಣ ರದ್ದುಪಡಿಸುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು