ಸುರಕ್ಷತೆಗೆ 400 ಕಡೆ ಸಿಸಿ ಟಿವಿ ಅಳವಡಿಕೆ
Team Udayavani, May 8, 2018, 12:31 PM IST
ಬೆಂಗಳೂರು: ಗೋವಿಂದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಸೋಮವಾರ ನಾಗರಬಾವಿ ವಾರ್ಡ್ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಕಾಂಗ್ರೆಸ್ನ ಪಾಲಿಕೆ ಸದಸ್ಯರು, ಕಾರ್ಯಕರ್ತರು ಹಾಗೂ ಮುಖಂಡರ ಜತೆಗೂಡಿ ಪಾದಯಾತ್ರೆ ನಡೆಸಿದ ಅವರು, ಮತ್ತೂಮ್ಮೆ ಆಶೀರ್ವಾದ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ನಿರ್ಮಾಣ ಯೋಜನೆಯಡಿ 2233 ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಒಂಟಿ ಮನೆ ಯೋಜನೆಯಡಿ 107 ಕೋಟಿ ರೂ. ವೆಚ್ಚದಲ್ಲಿ 2156 ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗಿದೆ.
15 ಕೋಟಿ ರೂ. ವೆಚ್ಚದಲ್ಲಿ ಗೋವಿಂದರಾಜನಗರ ಹಂತ -1 ಮತ್ತು ಹಂತ-2, ಕನಕನಗರ, ಅಗ್ರಹಾರ ದಾಸರಹಳ್ಳಿ, ಗಂಗೊಂಡನಹಳ್ಳಿ ಹಾಗೂ ಪಂತರಪಾಳ್ಯದ ಕೊಳಗೇರಿ ನಿವಾಸಿಗಳಿಗೆ ಮೂಲಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಒಳಚರಂಡಿ, ಸಮುದಾಯದ ಭವನ ನಿರ್ಮಾನ ಕಾರ್ಯ ಪ್ರಗತಿಯಲ್ಲಿದೆ.
ಹಕ್ಕುಪತ್ರ/ನೋಂದಣಿ ಪತ್ರ ವಿತರಣೆ ಮಾಡಲಾಗಿದ್ದು 40 ವರ್ಷದಿಂದ ನೆನಗುದಿಗೆ ಬಿದ್ದಿದ್ದ ಪಂಚಶೀಲ ನಗರ ನಿವಾಸಿಗಳಿಗೆ ಬಿಬಿಎಂಪಿ ವತಿಯಿಂದ ಖಾತಾ ಮಾಡಿಕೊಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, 4 ಕೋಟಿ ರೂ. ವೆಚ್ಚದಲ್ಲಿ 400 ಕಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಪೊಲೀಸ್ ಠಾಣೆಗಳಿಗೆ ನೇರ ಸಂಪರ್ಕ ಕಲ್ಪಿಸಲಾಗಿದೆ. ಅಪರಾಧ ಪ್ರಕರಣ ನಿಯಂತ್ರಣ, ಸರಗಳ್ಳತನ ನಿಗ್ರಹಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ