ಸಿಡಿ ಕೇಸ್: ಎಸ್ ಐಟಿನಿಂದ ಪತ್ರಕರ್ತರ ಮುಖಾಮುಖೀ ವಿಚಾರಣೆ
Team Udayavani, Jun 13, 2021, 5:49 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಸಿಡಿ ಪ್ರಕರಣ ಸಂಬಂಧ ಪ್ರಕರಣದ ಆರೋಪಿಗಳಾದಪತ್ರಕರ್ತರಾದ ನರೇಶ್ ಗೌಡ ಮತ್ತು ಶ್ರವಣ್ ಶನಿವಾರ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದರು.
ನಿರೀಕ್ಷಣಾ ಜಾಮೀನು ನೀಡಿದ್ದ ಕೋರ್ಟ್ ಎಸ್ಐಟಿವಿಚಾರಣೆಗೆ ಹಾಜರಾಗಬೇಕು ಎಂಬ ಸೂಚನೆ ಮೇರೆಗೆ ಪ್ರಕರಣದ ಕಿಂಗ್ಪಿನ್ ನರೇಶ್ ಗೌಡ ಹಾಗೂ ಹ್ಯಾಕರ್ಶ್ರವಣ್ ಶನಿವಾರ ಅಪರಾಹ್ನ 12 ಗಂಟೆಗೆ ಆಡುಗೋಡಿಟೆಕ್ನಿಕಲ್ ಸೆಂಟರ್ನಲ್ಲಿರುವ ಎಸ್ಐಟಿ ತನಿಖಾಧಿಕಾರಿಗಳಮುಂದೆ ಹಾಜರಾಗಿದ್ದರು.ಪ್ರಕರಣದ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರಕುಮಾರ್ ಅವರು ಇಬ್ಬರು ಆರೋಪಿಗಳನ್ನು ಸತತ ಐದುಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿ ಪ್ರಕರಣಕುರಿತ ಕೆಲವೆಂದು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕಮತ್ತೂಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಿದ್ದಾರೆ.
ಆರಂಭದಲ್ಲಿ ಇಬ್ಬರನ್ನೂ ಪ್ರತ್ಯೇಕವಾಗಿವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಬಳಿಕಮುಖಾಮುಖೀ ಕೂರಿಸಿಕೊಂಡು ವಿಚಾರಣೆ ನಡೆಸಲಾಗಿದ್ದು, ರೆಕಾರ್ಡ್ ಮಾಡಿಕೊಂಡಿದ್ದಾರೆ. ಜತೆಗೆ ಇಬ್ಬರಮೊಬೈಲ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಳಿಕಸಂಜೆ 5 ಗಂಟೆಗೆ ಬಿಟ್ಟು ಕಳುಹಿಸಿದ್ದಾರೆ. ವಕೀಲರ ಸಲಹೆ ಪಡೆದು ಅಗತ್ಯ ಸಿದ್ಧತೆ ನಡೆಸಿಯೇಇಬ್ಬರೂ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.ವಿಚಾರಣೆ ವೇಳೆ ಪೊಲೀಸರಿಗೆ ಯಾವ ರೀತಿ ಉತ್ತರನೀಡಬೇಕು ? ಯುವತಿ ವಿಚಾರಣೆ ವೇಳೆ ಯಾವ ಅಂಶಬೆಳಕಿಗೆ ಬಂದಿದೆ? ಎಸ್ಐಟಿ ಯಾವೆಲ್ಲಾ ಪ್ರಶ್ನೆಗಳನ್ನುಕೇಳಬಹುದು? ಆ ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕು?ಎಂಬೆಲ್ಲ ಪ್ರಶ್ನೆಗಳಿಗೆ ಆರೋಪಿಗಳು ಮೊದಲೇ ಸಿದ್ಧರಾಗಿಬಂದಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್