ಸಿಡಿ ಲೇಡಿಯಿಂದ ರಮೇಶ ವಿರುದ್ಧ ಹಣದ ಆಮಿಷದ ಆರೋಪ
Team Udayavani, May 6, 2021, 2:44 PM IST
ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಮರೆಯಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಮತ್ತೂಮ್ಮೆ ಸದ್ದು ಮಾಡಿದೆ. ಸಿಡಿಯಲ್ಲಿರುವ ಯುವತಿ ಮತ್ತೂಮ್ಮೆ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಮತ್ತು ತನಿಖಾಧಿಕಾರಿ ಕವಿತಾ ಅವರಿಗೆ ಪತ್ರ ಬರೆದು ರಮೇಶ್ ಜಾರಕಿಹೊಳಿ ವಿರುದ್ಧ ತಮ್ಮ ಪರ ವಕೀಲರಿಗೆ ಹಣದ ಆಮಿಷವೊಡ್ಡಿದ ಆರೋಪ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿ ಕಡೆಯಿಂದ ತಮ್ಮ ಪರ ವಕೀಲ ಸೂರ್ಯ ಮುಕುಂದರಾಜ್ ಮತ್ತು ಕೆ.ಎನ್. ಜಗದೀಶ್ ಅವರಿಗೆ ವಾಟ್ಸ್ಆಪ್ ಮೂಲಕ ಕರೆಮಾಡಿ ಹಣದ ಆಮಿಷವೊಡ್ಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ನ್ಯಾಯ ಒದಗಿಸಲು ಯುವತಿ ವಿನಂತಿ: ರಮೇಶ್ ಜಾರಕಿಹೊಳಿ ಕಡೆಯವರು ನಿರಂತರವಾಗಿ ಸಾಕ್ಷ್ಯ ನಾಶಮಾಡಲು ಮತ್ತು ನನ್ನ ಮತ್ತು ನನ್ನ ವಕೀಲರ ಮೇಲೆ ಪ್ರಕರಣ ಹಿಂಪಡೆಯುವಂತೆ ಎಲ್ಲ ರೀತಿಯ ಒತ್ತಡ ಬೀರುತ್ತಿದ್ದಾರೆ. ದೂರವಾಣಿ ಕರೆ ಮಾಡಿದ ಪ್ರದೀಪ್ ಪಾಟೀಲ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕೋರುತ್ತೇನೆ.
ಜತೆಗೆ ತನ್ನ ಹಿಂಬಾಲಕರ ಮೂಲಕ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸುತ್ತಿರುವ ಆರೋಪಿ ರಮೇಶ್ ಜಾರಕಿಹೊಳಿಯನ್ನುಕೂಡಲೇ ಬಂಧಿಸಿ ನನಗೆ ನ್ಯಾಯ ಒದಗಿಸಿ ರಕ್ಷಣೆ ನೀಡಬೇಕೆಂದು ಪತ್ರದಲ್ಲಿ ಯುವತಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು