ಅದಿರು ಗಣಿಯ ದಂಡದ ಮೊತ್ತ ಬಳಕೆಗೆ ಕಾನೂನು ನೆರವು ಯಾಚಿಸಿದ ಮುರುಗೇಶ್ ನಿರಾಣಿ
Team Udayavani, Feb 6, 2021, 9:18 PM IST
ಬೆಂಗಳೂರು : ಕಬ್ಬಿಣದ ಆದಿರು ಗಣಿ ಕಂಪನಿಗಳಿಂದ ದಂಡದ ರೂಪದಲ್ಲಿ ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಳೆದ ಆರು ವರ್ಷಗಳಿಂದ ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂ.ನಿಧಿ ಪಡೆಯಲು ಕಾನೂನಿನ ನೆರವು ನೀಡಬೇಕೆಂದು ಸಚಿವ ಮುರುಗೇಶ್ ನಿರಾಣಿ ಅವರು, ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಜೋಶಿ ಅವರನ್ನು ಖುದ್ದು ಭೇಟಿ ಮಾಡಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ ಅವರು ಮಾತುಕತೆ ನಡೆಸಿ, ಸಭೆಯಲ್ಲಿ ಸಂಗ್ರಹಿಸಿದ ನಿಧಿಯ ವಿಷಯ ಪ್ರಸ್ತಾಪ ಮಾಡಿದರು. ಇದೇ ವೇಳೆ ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು – ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕು. ಇದು ದೀರ್ಘಾವಧಿಯ ಬೇಡಿಕೆಯಾಗಿದ್ದು, ಶೀಘ್ರವೆ ಸೂಕ್ತ ನಿರ್ಧಾರ ತೆಗೆದುಕೊಂಡರೆ, ಹೆಚ್ಚಿನ ಅನುಕೂಲವಾಗಲಿದೆ ಎಂದು ಜೋಶಿ ಅವರಿಗೆ ನಿರಾಣಿಯವರು ಮನವರಿಕೆ ಮಾಡಿಕೊಟ್ಟರು.
ಇದನ್ನೂ ಓದಿ :‘ಆ ದೇವರಿಂದಲೂ ನನ್ನನ್ನು ಹಿಡಿಯಲಾಗುವುದಿಲ್ಲ’ ಎಂದ ಆರೋಪಿಯನ್ನು ಜೈಲಿಗಟ್ಟಿದ ಪೊಲೀಸರು
ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಚಿವ ಜೋಶಿ,ಈ ವಿಷಯದ ಕುರಿತು ಹೆಚ್ಚಿನ ಚರ್ಚೆಗಾಗಿ ದೆಹಲಿಗೆ ಬರುವಂತೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ