ಸರ ಕದಿಯಲು ಉತ್ತಮ ಭವಿಷ್ಯದ ನೆಪ!


Team Udayavani, Dec 14, 2019, 10:26 AM IST

bng-tdy-01

ಸಾಂಧರ್ಬಿಕ ಚಿತ್ರ

ಬೆಂಗಳೂರು: ಭವಿಷ್ಯದಲ್ಲಿ ಐಪಿಎಸ್‌ ಕನಸು ಕಂಡವಳು ಪ್ರೇಮಿಯ ಜತೆ ಸೇರಿ ಸರಗಳ್ಳತನ ಮಾಡಿ ಜೈಲು ಸೇರಿದ್ದಾಳೆ!  ಈ ಮೊದಲು ಹೆಲ್ಮೆಟ್‌ ಧರಿಸಿ ಗಂಡಸರಷ್ಟೇ ಸರ ಅಪಹರಣ ಮಾಡುತ್ತಿದ್ದರು. ಇದೀಗ ಯುವತಿಯೊಬ್ಬಳು ಭವಿಷ್ಯದಲ್ಲಿ ಉತ್ತಮ ಜೀವನ ನಡೆಸುವ ಉದ್ದೇಶದೊಂದಿಗೆ ತನ್ನ ಪ್ರೇಮಿಯ ಜತೆ ಸೇರಿಕೊಂಡು ಸರಗಳ್ಳತನ ಮಾಡಿ ಚಂದ್ರ ಲೇಔಟ್‌ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

ಕುಂಬಳಗೋಡು ಸಮೀಪದ ದೊಡ್ಡ ಆಲದಮರದ ರಾಮೋಹಳ್ಳಿ ನಿವಾಸಿಗಳಾದ ಹರೀಶ್‌ (22) ಮತ್ತು ಆತನ ಸ್ನೇಹಿತೆ ಕೀರ್ತನಾ (ಹೆಸರು ಬದಲಾಯಿಸಲಾಗಿದೆ) (18) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಮತ್ತೂಬ್ಬನನ್ನು ಬಂಧಿಸಿ, ಆರೋಪಿಗಳಿಂದ 46 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಕಾಲೇಜು ಯುವತಿಯರು ಮತ್ತು ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಕಳವು ಮಾಡುತ್ತಿದ್ದ ಪ್ರೇಮಿ ಗಳು, ಬಳಿಕ ನಗರದ ಕೇರಳ ಮೂಲದ ಫೈನಾನ್ಸ್‌ ಹಾಗೂ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ಅಡಮಾನ ಇಟ್ಟು ಹಣ ಸಂಪಾದಿಸುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕುಂಬಳಗೋಡು ಠಾಣೆ ಹಾಗೂ ಚಂದ್ರ ಲೇಔಟ್‌ ಠಾಣೆ ವ್ಯಾಪ್ತಿಯ ನಾಗರಬಾವಿ ವರ್ತುಲ ರಸ್ತೆಗಳು, ಕೆಂಗೇರಿ ಠಾಣೆ ವ್ಯಾಪ್ತಿ ಯಲ್ಲಿ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಹರೀಶ್‌ ಕ್ಯಾಬ್‌ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದು, ತನ್ನ ಮನೆ ಸಮೀಪದ ಕೀರ್ತನಾಳನ್ನು ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ, ಆತನ ದುಡಿಮೆಯಿಂದ ಜೀವನ ನಡೆಸುವುದು ದುಸ್ತರ ವಾಗಿತ್ತು. ಜತೆಗೆ ಪ್ರಿಯತಮೆಯ ಆಸೆಗಳನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಇಬ್ಬರೂ ಸರಗಳ್ಳತನ ಮಾಡಲು ಸಂಚು ರೂಪಿಸಿದ್ದರು. ಕೆಲ ತಿಂಗಳ ಹಿಂದೆ ಹರೀಶ್‌ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಜತೆ ಸೇರಿ ಕುಂಬಳಗೋಡು ಸಮೀಪದಲ್ಲಿ ಸರಗಳ್ಳತನ ಮಾಡಿ, ಕೆಂಗೇರಿಯಲ್ಲಿರುವ ಫೈನಾನ್ಸ್‌ ಒಂದರಲ್ಲಿ ಅಡಮಾನ ಇಟ್ಟಿದ್ದರು. ಅದರಿಂದ ಸಾಕಷ್ಟು ಸಂಪಾದಿಸಿದ್ದರು. ಬಳಿಕ ಅದನ್ನೆ ಪ್ರವೃತ್ತಿಯನ್ನಾಗಿಸಿಕೊಂಡ ಹರೀಶ್‌, ಕೀರ್ತನಾ ಜತೆ ಸೇರಿಕೊಂಡು ಸರಗಳ್ಳತನಕ್ಕೆ ಇಳಿದಿದ್ದ ಎಂದು ಪೊಲೀಸರು ಹೇಳಿದರು.

ಪ್ರೇಮಿಗಳಂತೆ ಹೋಗಿ ಕೃತ್ಯ: ಹರೀಶ್‌ ಮತ್ತು ಕೀರ್ತನಾ, ಶಾಲಾ, ಕಾಲೇಜುಗಳು ಮತ್ತು ಖಾಸಗಿ ಕಂಪನಿಗಳ ಸಮೀಪದಲ್ಲಿರುವ ಐಸ್‌ ಕ್ರೀಂ ಅಂಗಡಿ ಹಾಗೂ ರಸ್ತೆ ಬದಿಯ ಪಾನಿಪುರಿ ವ್ಯಾಪಾರ ಸ್ಥಳಗಳಲ್ಲಿ ಪ್ರೇಮಿಗಳ ಸೋಗಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅಲ್ಲಿಗೆ ಬರುತ್ತಿದ್ದ ಯುವತಿಯರು ಹಾಗೂ ಮಹಿಳೆಯರ ಚಲನವಲನಗಳ ಮೇಲೆ ನಿಗಾವಹಿಸುತ್ತಿದ್ದ ಆರೋಪಿಗಳು, ಬಳಿಕ ನಡೆದು ಹೋಗುತ್ತಿದ್ದ ಯುವತಿಯರನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸುತ್ತಿದ್ದು, ಬೈಕ್‌ ನ ಹಿಂಬದಿ ಕುಳಿತಿದ್ದ ಕೀರ್ತನಾ ಸರ ಕಸಿದುಕೊಳ್ಳುತ್ತಿದ್ದಳು. ಬಳಿಕ ಇಬ್ಬರು ಜ್ಞಾನಭಾರತಿ ಕ್ಯಾಂಪಸ್‌ ಮೂಲಕ ಕುಂಬಳಗೋಡುಗೆ ಪರಾರಿಯಾಗುತ್ತಿದ್ದರು. ಕಳವು ಚಿನ್ನದ ಸರಗಳನ್ನು ಚಿನ್ನಾಭರಣ ಮಳಿಗೆಯೊಂದರಲ್ಲಿ ಅಡಮಾನ ಇಟ್ಟಿದ್ದರು.

ನಾಗರಬಾವಿ ಸಮೀಪದಲ್ಲಿ ಆರೋಪಿಗಳು, ಇಬ್ಬರು ಯುವತಿಯರ ಸರಗಳನ್ನು ಕಸಿದುಕೊಂಡಿದ್ದರು. ಈ ಸಂಬಂಧ ಯುವತಿಯರು ದೂರು ನೀಡಿದ್ದರು. ಆರೋಪಿಗಳ ಕೃತ್ಯ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗತ್ತು. ಅದರ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಐಪಿಎಸ್‌ ಮಾಡ್ತೇನೆ; ಸರಿಯಾಗಿ ಮಾತಾಡ್ಸಿ ಸರ್‌!: ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಕೀರ್ತನಾ, “ನನ್ನೊಂದಿಗೆ ಸರಿಯಾಗಿ ಮಾತನಾಡಿ ಸರ್‌. ನಾನು ಭವಿಷ್ಯದಲ್ಲಿ ಐಪಿಎಸ್‌ ಮಾಡಬೇಕೆಂದಿದ್ದೇನೆ. ನನಗೆ ಯಾರೂ ಇಲ್ಲ. ತರಬೇತಿ ಪಡೆಯಲು ಶುಲ್ಕ ಕಟ್ಟಲು ಹಣ ಇಲ್ಲದರಿಂದ ಈ ರೀತಿ ಮಾಡುತ್ತಿದ್ದೇನೆ’ ಎಂದು ಹೇಳುತ್ತಿದ್ದಂತೆ ಒಂದು ಕ್ಷಣ ಅಚ್ಚರಿಗೊಂಡ ಪೊಲೀಸರು, ಕೂಡಲೇ ಆಕೆ ತಾಯಿಯನ್ನು ಕರೆಸಿ ವಿಚಾರಣೆ ನಡೆಸಿದಾಗ ಕೀರ್ತನಾ, 8ನೇ ತರಗತಿಯಲ್ಲಿ ಅನುತ್ತೀರ್ಣವಾಗಿರುವುದು ಗೊತ್ತಾಗಿದೆ. ಭವಿಷ್ಯದಲ್ಲಿ ತನ್ನ ಪ್ರೇಯಸಿ ಜತೆ ಉತ್ತಮ ಜೀವನ ನಡೆಸಲು ಸರಗಳ್ಳತನವನ್ನು ಪ್ರವೃತ್ತಿಯನ್ನಾಗಿಕೊಂಡಿದ್ದೆ ಎಂದು ಹರೀಶ್‌ ಕೂಡ ಹೇಳಿಕೆ ದಾಖಲಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.