ಚಾಮರಾಜಪೇಟೆ ಮೈದಾನ: ಮುಂದುವರಿದ ಒಡೆತನ ವಿವಾದ
Team Udayavani, Jun 20, 2022, 8:24 PM IST
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದ ಒಡೆತನಕ್ಕೆ ಸಂಬಂಧಿಸಿ ವಕ್ಫ್ ಬೋರ್ಡ್ನಿಂದ ಬಿಬಿಎಂಪಿಗೆ ದಾಖಲೆ ಸಲ್ಲಿಸಲಾಗಿದ್ದು, ಅದನ್ನು ಕಾನೂನು ವಿಭಾಗದಿಂದ ಪರಿಶೀಲಿಸಲಾಗುತ್ತಿದೆ.
ಮೈದಾನದ ಒಡೆತನ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮೈದಾನ ತಮಗೆ ಸೇರಿದ್ದು ಎಂಬ ವಾದವನ್ನು ವಕ್ಫ್ ಬೋರ್ಡ್ ಮಂಡಿಸುತ್ತಿದ್ದ ಕಾರಣ, ದಾಖಲೆಗಳನ್ನು ಸಲ್ಲಿಸುವಂತೆ ಅದಕ್ಕೆ ಬಿಬಿಎಂಪಿ ನೋಟಿಸ್ ನೀಡಿತ್ತು. ವಕ್ಫ್ ಬೋರ್ಡ್ ಕಳೆದ ಶುಕ್ರವಾರ ದಾಖಲೆಗಳನ್ನು ಸಲ್ಲಿಸಿದೆ.
ವಕ್ಫ್ ಬೋರ್ಡ್ ಪ್ರಮುಖವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶಗಳ ಪ್ರತಿ ಹಾಗೂ ವಕ್ಫ್ ಬೋರ್ಡ್ ದಾಖಲೆಯಲ್ಲಿ ಮೈದಾನದ ಕುರಿತು ಉಲ್ಲೇಖೀಸಿರುವ ದಾಖಲೆಗಳನ್ನು ಸಲ್ಲಿಸಿದೆ. ಸುಪ್ರೀಂಕೋರ್ಟ್ ಆದೇಶದಲ್ಲಿ ಮೈದಾನವು ವಕ್ಫ್ ಬೋರ್ಡ್ಗೆ ಸೇರಿದ್ದು ಎಂಬ ಉಲ್ಲೇಖವಿದ್ದು, ಅದರಿಂದಾಗಿ ಚಾಮರಾಜಪೇಟೆ ಮೈದಾನ ತಮ್ಮದು ಎಂದು ವಾದ ಮಂಡಿಸಲಾಗಿದೆ.
ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ:
ಚಾಮರಾಜಪೇಟೆ ಮೈದಾನದಲ್ಲಿ ಜೂ. 21ರಂದು ಯೋಗ ದಿನ ಆಚರಣೆಗಾಗಿ ಕೆಲವು ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿತ್ತು. ಆದರೆ ಒಡೆತನ ವಿಚಾರವಾಗಿ ಗೊಂದಲಗಳು ನಿವಾರಣೆಯಾಗದ ಕಾರಣ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ಬಿಬಿಎಂಪಿ ನಿರ್ಧರಿಸಿದೆ.
ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್ ಬೋರ್ಡ್ನಿಂದ ದಾಖಲೆ ಸಲ್ಲಿಸಲಾಗಿದೆ. ಆ ದಾಖಲೆಗಳ ಪರಿಶೀಲನೆಗೆ ಬಿಬಿಎಂಪಿ ಕಾನೂನು ಕೋಶಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಪ್ರತಿಕ್ರಿಯೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು.-ಶ್ರೀನಿವಾಸ್ ,ಬಿಬಿಎಂಪಿ ಜಂಟಿ ಆಯುಕ್ತ (ಪಶ್ಚಿಮ ವಲಯ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ