ಕುಲಪತಿ ನೇಮಕ ವಿಳಂಬಕ್ಕೆ ಗೌರ್ನರ್ ಕಾರಣ: ರಾಯರಡ್ಡಿ
Team Udayavani, Sep 11, 2017, 6:10 AM IST
ಬೆಂಗಳೂರು: ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕವನ್ನು ರಾಜ್ಯಪಾಲರೇ ವಿಳಂಬ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆರೋಪಿಸಿದರು.
ಬಸವ ಭವನದಲ್ಲಿ ಬಿ.ಡಿ.ಜತ್ತಿಯವರ ಜನ್ಮದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳ ಸ್ಥಾನ ಖಾಲಿಯಾಗಿ ಆರು ತಿಂಗಳಾಗಿದೆ. ಈ ಎರಡು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಚಿಸಿರುವ ಶೋಧನಾ ಸಮಿತಿ ಅರ್ಹರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಹೆಸರು ಕಳುಹಿಸಿದೆ. ರಾಜ್ಯಸರ್ಕಾರ ಆ ಹೆಸರುಗಳನ್ನು ಶಿಫಾರಸ್ಸಿನ ಮೂಲಕ, ಯಾರನ್ನು ಕುಲಪತಿ ಮಾಡಬೇಕು ಎಂಬುದನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ಆದರೆ, ರಾಜ್ಯಪಾಲರು ಇನ್ನು ಒಪ್ಪಿಗೆ ನೀಡಿಲ್ಲ ಎಂದರು.
ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯ ಪ್ರಕಾರ ರಾಜ್ಯ ಸರ್ಕಾರದ ಸಹಮತಿಯೊಂದಿಗೆ ರಾಜ್ಯಪಾಲರು ಕುಲಪತಿಗಳ ನೇಮಕ ಮಾಡಬೇಕು ಎಂಬುದು ಸ್ಪಷ್ಟವಾಗಿದೆ. ರಾಜ್ಯಪಾಲರು ವಿಶ್ವವಿದ್ಯಾಲಯದ ನಿಯಮವನ್ನು ಅಧ್ಯಯನ ಮಾಡುತ್ತಿರಬೇಕು. ರಾಜ್ಯಪಾಲರು ನಮ್ಮ ಶಿಫಾರಸ್ಸಿಗೆ ತ್ವರಿತ ಒಪ್ಪಿಗೆ ನೀಡಿದರೆ ಆರೋಗ್ಯಕರ ಬೆಳವಣಿಗೆ ಆಗಲಿದೆ ಎಂದು ಹೇಳಿದರು.
ಕಲಬುರಗಿ ವಿವಿಗೆ ಬಸವಣ್ಣನ ಹೆಸರು:
ಕಲಬುರಗಿ ರಾಜ್ಯ ವಿಶ್ವವಿದ್ಯಾಲಯಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಇಡಲು ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ನವೆಂಬರ್ ಒಳಗೆ ಮರು ನಾಮಕರಣ ಮಾಡಲಿದ್ದೇವೆ. ಹಾಗೆಯೇ ಕಲುºರ್ಗಿ ಕೇಂದ್ರ ವಿಶ್ವವಿದ್ಯಾಲಯಕ್ಕೆ ಅಂಬೇಡ್ಕರ್ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಪ್ರತ್ಯೇಕವಾಗಿ ಪತ್ರವನ್ನು ಬರೆದಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಇನ್ನೊಮ್ಮೆ ಮುಖ್ಯಮಂತ್ರಿಗಳ ಮೂಲಕ ಪತ್ರ ಬರೆಸಲಿದ್ದೇನೆ ಎಂದು ಸಚಿವ ರಾಯರೆಡ್ಡಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್