ವಿಚಾರಣೆ ವೇಳೆ ಕ್ಷಮೆ ಕೋರಿದ ಚಂದನ್ ಶೆಟ್ಟಿ
Team Udayavani, Aug 29, 2018, 11:45 AM IST
ಬೆಂಗಳೂರು: “ಅಂತ್ಯ’ ಎಂಬ ಸಿನಿಮಾಕ್ಕಾಗಿ ಗಾಂಜಾ ಪರ ಹಾಡು ಹಾಡಿ ವಿವಾದಕ್ಕೆ ಸಿಲುಕಿದ್ದ ರ್ಯಾಪರ್ ಚಂದನ್ ಶೆಟ್ಟಿ ಮಂಗಳವಾರ ಸಿಸಿಬಿ ವಿಚಾರಣೆಗೆ ಹಾಜರಾಗಿ ಕ್ಷಮೆ ಕೋರಿದ್ದಾರೆ. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ ಚಂದನ್ ಶೆಟ್ಟಿ, ಮಹಿಳೆ ಮತ್ತು ಮಾದಕ ವಸ್ತು ತಡೆ ದಳದ ಎಸಿಪಿ ಮೋಹನ್ ಕುಮಾರ್ ಎದುರು ವಿಚಾರಣೆಗೆ ಹಾಜರಾಗಿದ್ದು, ಮೂರೂವರೆ ಗಂಟೆ ವಿಚಾರಣೆ ನಡೆಸಿ ಚಂದನ್ ಶೆಟ್ಟಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
ಗಾಂಜಾ ಸೇವನೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಹಾಡು ಹಾಡಿಲ್ಲ. ಮತ್ತೆ ಆ ರೀತಿಯ ತಪ್ಪು ಮಾಡುವುದಿಲ್ಲ ಎಂದು ಚಂದನ್ ಕ್ಷಮೆ ಕೋರಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಚಂದನ್ ಶೆಟ್ಟಿ, ನನ್ನ ಕರಿಯರ್ನ ಆರಂಭದ ದಿನಗಳಲ್ಲಿ ಅಂತ್ಯ ಸಿನಿಮಾಗಾಗಿ ಹಾಡು ಹಾಡಿದ್ದೆ. ಆಗ ನಾನು ಯಾರೆಂದು ಯಾರಿಗೂ ಗೊತ್ತಿರಲಿಲ್ಲ. ಇದೀಗ ಇಡೀ ಕರ್ನಾಟಕಕ್ಕೆ ಗೊತ್ತಾಗಿದೆ.
ಹೀಗಾಗಿ ಮೂರು ವರ್ಷದ ಬಳಿಕ ಈ ಹಾಡು ಈ ರೀತಿಯ ತಿರುವು ಪಡೆದುಕೊಂಡಿದೆ. ನಾನು ಮಾದಕ ವಸ್ತುಗಳ ವಿರುದ್ಧ ಹೋರಾಡುತ್ತೇನೆ. ಮಾದಕ ವಸ್ತುಗಳನ್ನು ಸೇವನೆ ಮಾಡಬಾರದು ಎಂದು ಸಂದೇಶ ಇರುವ ಹಾಡನ್ನು ನಾನೇ ರಚಿಸುತ್ತೇನೆ. ಮತ್ತೂಮ್ಮೆ ಈ ರೀತಿಯ ಹಾಡು ರಚಿಸದಂತೆ ತನಿಖಾಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA