ಕೌಶಲ್ಯ ತರಬೇತಿಯಿಂದ ಬದಲಾವಣೆ ಸಾಧ್ಯ
Team Udayavani, Sep 26, 2019, 3:07 AM IST
ಬೆಂಗಳೂರು: ದೇಶದ ಮಾನವ ಸಂಪನ್ಮೂಲಕ್ಕೆ ಸೂಕ್ತ ಕೌಶಲ್ಯ ತರಬೇತಿ ನೀಡಿದರೆ ಬಹುದೊಡ್ಡ ಮಟ್ಟದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರೀಯ ಸಿಬ್ಬಂದಿ ನಿರ್ವಹಣಾ ಸಂಸ್ಥೆ (ಎನ್ಐಪಿಎಂ) ಹೆಬ್ಟಾಳದ ಜಿಕೆವಿಕೆ ಕ್ಯಾಂಪಸ್ನಲ್ಲಿ ಹಮ್ಮಿಕೊಂಡಿದ್ದ ನ್ಯಾಟ್ಕಾನ್-2019 38ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ದೇಶಗಳಲ್ಲಿ ಭಾರತವೂ ಒಂದಾಗಿದೆ. ನಮ್ಮ ದೇಶದ ಜನರಿಗೆ ಸರಿಯಾದ ಕೌಶಲ್ಯ ನೀಡಿದರೆ, ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು.
ಪ್ರತಿ ಸಂಸ್ಥೆ ಹಾಗೂ ಉದ್ಯಮವು ತಮ್ಮ ಹೊಣೆಗಾರಿಕೆಯನ್ನು ಅರ್ಥಮಾಡಿಕೊಂಡು ಸೇವೆ ಸಲ್ಲಿಸಬೇಕು. ಕೌಶಲ್ಯ ಅಭಿವೃದ್ಧಿಪಡಿಸುವಲ್ಲಿ ಉದ್ಯಮಗಳ ಬದ್ಧತೆ ದೊಡ್ಡದಿದೆ. ಉದ್ಯಮ ಕ್ಷೇತ್ರಗಳಲ್ಲಿ ನಿತ್ಯ ವಿಭಿನ್ನ ಸವಾಲುಗಳು ಎದುರಾಗುತ್ತಿರುತ್ತದೆ. ಈ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯುವ ಜನಾಂಗವನ್ನು ತಯಾರು ಮಾಡಬೇಕಿದೆ ಎಂದರು.
ದೇಶದ ನಾಯಕತ್ವ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಪ್ರಧಾನಿ ಮೋದಿಯವರು ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ. ದೇಶದ ಕೌಶಲ್ಯವಂತರು ಮತ್ತು ಪ್ರತಿಭಾವಂತರಿಗೂ ಇದೇ ಸರಿಯಾದ ಮಾರ್ಗ ಎಂದು ಹೇಳಿದರು.
ದೇಶದ ಅಭಿವೃದ್ಧಿಗೆ ಉದ್ಯಮಗಳು ಸಾಥ್ ನೀಡಬೇಕು. ಪ್ರತಿ ಪ್ರತಿಭೆಯೂ ಗೌರವಿಸಲ್ಪಡುವ ವೇದಿಕೆ ಸದ್ಯದ ಭಾರತದಲ್ಲಿ ಸೃಷ್ಟಿಯಾಗುತ್ತಿದೆ. ಜನರ ಮನೋಭಾವ ಬದಲಾಗುತ್ತಿದೆ. ವಾಹನಕ್ಕೆ ಚಾಲಕ ಹೇಗೆ ಮುಖ್ಯವೋ ದೇಶದ ನಾಯಕತ್ವವೂ ಅಷ್ಟೇ ಮುಖ್ಯ. ಎಲ್ಲರನ್ನೂ ನಾಯಕನಾದವನೇ ಮುಂದಕ್ಕೂ ಕರೆದೊಯ್ಯಬೇಕು ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಯುವ ಸಮೂಹದಲ್ಲಿ ಕೌಶಲ್ಯ ಮತ್ತು ಉದ್ಯಮಶೀಲತೆ ವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆ ಜಾರಿಗೆ ತಂದಿವೆ. ಕೌಶಲ್ಯ ಮತ್ತು ಜ್ಞಾನ ದೇಶದ ಆರ್ಥಿಕತೆ ಹಾಗೂ ಸಾಮಾಜಿಕ ಅಭಿವೃದ್ಧಿ ಗೆ ಸಹಕಾರಿ ಎಂದು ಹೇಳಿದರು. ಪದವೀಧರರಿಗೆ ಉದ್ಯಮಶೀಲತೆ ಕೌಶಲ್ಯ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಕೌಶಲ್ಯಾಭಿವೃದ್ಧಿ ನೀತಿ ಜಾರಿಗೆ ತಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲನೆಯಾದಾಗಿದೆ. ಕೇಂದ್ರದ ಸ್ಕಿಲ್ ಇಂಡಿಯಾ ಕಾರ್ಯಕ್ರಮಗಳು ಪ್ರತಿಭೆ ಮತ್ತು ಕೌಶಲ್ಯಾಭಿವೃದ್ಧಿಗೆ ಪೂರಕವಾಗಲಿದೆ ಎಂದರು. ರಾಜ್ಯಪಾಲ ವಿ.ಆರ್.ವಾಲಾ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ನ್ಯಾಟ್ಕಾನ್ ಸಂಯೋಜಕ ಪಿ.ಆರ್.ಬಸವರಾಜು, ಎನ್ಐಪಿಎಂ ಗೌರವ ಕಾರ್ಯದರ್ಶಿ ಎ.ಯು.ದಿನೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ