ಬದಲಾಗಿರುವ ಭಾರತ ಇನ್ನಷ್ಟು ಬದಲಾಗಬೇಕಿದೆ


Team Udayavani, Apr 15, 2019, 3:00 AM IST

badalagi

ಬೆಂಗಳೂರು: ಅಭಿವೃದ್ಧಿ, ವಿಶ್ವಮನ್ನಣೆ, ಭದ್ರತಾ ವಿಚಾರಗಳಲ್ಲಿ ಐದು ವರ್ಷಗಳ ಹಿಂದೆ ಇದ್ದ ಭಾರತಕ್ಕೂ, ಇಂದು ನಿಮ್ಮ ಕಣ್ಣ ಮುಂದೆ ಇರುವ ಭಾರತಕ್ಕೂ ಹೋಲಿಕೆ ಮಾಡಿ. ನಂತರ ಬದಲಾಗಿರುವ ಹಾಗೂ ಮತ್ತಷ್ಟು ಬದಲಾಗಬೇಕಿರುವ ಭಾರತಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಮತ ಚಲಾಯಿಸಿ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ.

ಚಿಂತಕರ ಚಾವಡಿ ವತಿಯಿಂದ ನಗರದ ಎಸ್‌.ಜೆ.ಆರ್‌.ಸಿ.ಕಾಲೇಜಿನಲ್ಲಿ ಹಮ್ಮಿಕೊಂದಿದ್ದ ಯುವ ಮತದಾರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಭಾರತ ಐತಿಹಾಸಿಕವಾಗಿ ಬದಲಾವಣೆಯತ್ತ ಸಾಗುತ್ತಿದೆ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಬಹುತೇಕ ಇಲಾಖೆಗಳಲ್ಲಿ ಭ್ರಷ್ಟಾಚಾರವೇ ತುಂಬಿತ್ತು. ಬೇಳೆ ಕಾಳುಗಳ ದರ ಗಗನಕ್ಕೇರಿದ್ದವು.

ಆದರೆ, ಇಂದು ಪರಿಸ್ಥಿತಿ ಸುಧಾರಿಸಿದೆ. ಭದ್ರತೆ, ವಿಜ್ಞಾನ ತಂತ್ರಜ್ಞಾನ ಸೇರಿ ವಿವಿಧ ವಿಚಾರಗಳಲ್ಲಿ ವಿಶ್ವದ ನಾನಾ ದೇಶಗಳು ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಮುಂದೆ ಇನ್ನಷ್ಟು ಬದಲಾಗಬೇಕಿದ್ದು, ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆ ಅತ್ಯಂತ ಮುಖ್ಯವಾಗಿದೆ. ಬಿಜೆಪಿ ನೀಡುತ್ತಿರುವ “ಮಾದರಿ ಆಡಳಿತ’ ಮುಂದುವರಿಯಬೇಕೋ ಅಥವಾ ಇಲ್ಲಿಗೆ ನಿಲ್ಲಬೇಕೊ ಎಂಬುದನ್ನು ಶಿಕ್ಷಿತ, ಪ್ರಜ್ಞಾವಂತ ಯುವ ಮತದಾರರು ನಿರ್ಣಯಿಸಬೇಕು ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಸಮಸ್ಯೆಗಳು ಮತ್ತೆ ಮರುಕಳಿಸುತ್ತವೆ ಎಂಬ ಕಾರಣಕ್ಕಾಗಿ ಯಾವುದೇ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳುವುದಿಲ್ಲ. ಹೀಗಾಗಿಯೇ, ಸದೃಢ ಭಾರತ ನಿರ್ಮಾಣಕ್ಕೆ ಭವಿಷ್ಯದ ಯೋಜನೆಗಳನ್ನು ಹಾಕಿಕೊಳ್ಳುತ್ತಾರೆ. ಅದಕ್ಕೆ ಸೂಕ್ತ ಉದಾಹರಣೆ ಸ್ವತ್ಛತೆ ವಿಚಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಕಂಡ ಕನಸನ್ನು ಸಾಕಾರಗೊಳಿಸಲು 2015 ಆ.15ರಂದು ಸ್ವತ್ಛ ಭಾರತಕ್ಕೆ ಕರೆ ಕೊಟ್ಟರು.

ಆ ಯೋಜನೆಯ ಫ‌ಲವಾಗಿ ಗಾಂಧೀಜಿಯವರ 150ನೇ ಹುಟ್ಟುಹಬ್ಬಕ್ಕೆ ಭಾರತ “ಬಹಿರ್ದೆಸೆ ಮುಕ್ತರಾಷ್ಟ್ರ’ವಾಗುತ್ತಿದೆ. ಅಂತೆಯೇ, 2022ರ ವೇಳೆಗೆ ಭಾರತಕ್ಕೆ ಸ್ವಾತಂತ್ರ ಬಂದು 75 ವರ್ಷವಾಗಲಿದ್ದು, ಆ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನು ವಸತಿ ಸೌಕರ್ಯ ಹೊಂದಿರಬೇಕು ಹಾಗೂ ಭಾರತವನ್ನು “ಗುಡಿಸಲು ಮುಕ್ತರಾಷ್ಟ್ರ’ ಮಾಡಬೇಕೆಂಬ ಯೋಜನೆ ಹಾಕಿಕೊಂಡಿದ್ದಾರೆ.

ಇನ್ನು, ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷವಾಗುವ (2047)ವೇಳೆಗೆ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಹಣೆಪಟ್ಟಿಯಿಂದ ಹೊರ ಬಂದು, ಅಭಿವೃದ್ಧಿ ಹೊಂದಿರುವ ರಾಷ್ಟ್ರವಾಗಬೇಕೆಂಬ ಕನಸು ಕಂಡಿದ್ದಾರೆ ಎಂದು ತಿಳಿಸಿದರು.

ರಿಮೋಟ್‌ ಕಂಟ್ರೋಲ್‌ ಪ್ರಧಾನಿಯಲ್ಲ: ನಮ್ಮ ಪ್ರಧಾನಿ ಮೋದಿಜಿ ಯಾರ ನಿಯಂತ್ರಣಕ್ಕೂ ಒಳಪಟ್ಟಿಲ್ಲ. ಸಂದರ್ಭಕ್ಕೆ ತಕ್ಕಂತೆ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಅದಕ್ಕೆ ಸೂಕ್ತ ಉದಾಹರಣೆ ಪುಲ್ವಾಮಾ ದಾಳಿಗೆ ಪ್ರತಿದಾಳಿ ನಡೆಸಿದ್ದು, ಪಾಕಿಸ್ತಾನಕ್ಕೆ ಎಚ್ಚರಿಗೆ ಕೊಟ್ಟಿದ್ದು. ಇತ್ತೀಚಿನ ಪುಲ್ವಾಮಾ ದಾಳಿಯಂತೆಯೇ 2008ರಲ್ಲಿ ಮುಂಬೈ ಮೇಲೆ ಉಗ್ರ ದಾಳಿಯಾಗಿ ವಿದೇಶಿಯರು ಸೇರಿ ಅನೇಕರು ಸಾವಿಗೀಡಾಗಿದ್ದರು.

ಆ ವೇಳೆ, ಸೇನೆಯು ಪ್ರತಿದಾಳಿಗೆ ಸಿದ್ಧವಾಗಿದ್ದರೂ, ಅಂದಿನ ಕಾಂಗ್ರೆಸ್‌ ಸರ್ಕಾರ ಹಿಂದೇಟು ಹಾಕಿ, ಭದ್ರತಾ ವಿಚಾರದಲ್ಲಿ ಭಾರತವನ್ನು ಇತರ ದೇಶಗಳು ಟೀಕಿಸುವಂತೆ ಮಾಡಿತ್ತು. ಆದರೆ, ಇಂದು ಸೇನೆಗೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಹಕ್ಕನ್ನು ನೀಡಲಾಗಿದೆ ಎಂದರು.

ರಾಜ್ಯ ಸರ್ಕಾರ ವಿಫ‌ಲ: ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಅರ್ಹ ರೈತರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿದೆ. ರಾಜ್ಯದಲ್ಲಿ 73 ಲಕ್ಷ ರೈತರಿದ್ದು, ಇವರಲ್ಲಿ ಈ ಯೋಜನೆಗೆ 62 ಲಕ್ಷ ರೈತರು ಅರ್ಹರಾಗಿದ್ದಾರೆ. ಆದರೆ, ರೈತರ ನೋಂದಣಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ವಿಳಂಬ ಮಾಡಿರುವುದರಿಂದ ಕೇವಲ 12 ಸಾವಿರ ರೈತರು ಇಲ್ಲಿಯವರೆಗೆ ನೋಂದಣಿಯಾಗಿದ್ದಾರೆ ಎಂದರು.

15 ಲಕ್ಷ ರೂ. ಕೊಡುತ್ತೇನೆ ಎಂದು ಯಾರೂ ಹೇಳಿಲ್ಲ: ಸಂವಾದ ಸಂದರ್ಭದಲ್ಲಿ “ಬಡವರ ಖಾತೆಗೆ 15 ಲಕ್ಷ ರೂ.ಜಮೆ ಮಾಡುತ್ತೇವೆಂಬ ಆಶ್ವಾಸನೆಯನ್ನು ಇನ್ನೂ ಮೋದಿಯವರು ಈಡೇರಿಸಿಲ್ಲ ಎಂದು ಯುವತಿಯೊಬ್ಬಳು ಪ್ರಶ್ನಿಸಿದಳು.

ಇದಕ್ಕೆ ಉತ್ತರಿಸಿದ ನಿರ್ಮಲಾ ಸೀತಾರಾಮಮನ್‌, ಕಳೆದ ಬಾರಿ ಚುನಾವಣೆಯ ಪ್ರಣಾಳಿಕೆಯಲ್ಲಿ 15 ಲಕ್ಷ ರೂ.ಕೊಡುತ್ತೇವೆಂದು ಮೋದಿ ಹೇಳಿಲ್ಲ. ಜತೆಗೆ, ಈ ಕುರಿತು ಯಾವುದೇ ಹೇಳಿಕೆಗಳನ್ನು ಕೊಟ್ಟಿಲ್ಲ. ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ, ಕಪ್ಪು ಹಣಕ್ಕೆ ಕಡಿವಾಣ ಬಿದ್ದಾಗ ಪ್ರತಿಯೊಬ್ಬರಿಗೂ 15 ಲಕ್ಷ ರೂ.ವರೆಗೆ ದೊರೆಯಲಿದೆ ಎಂದು ವಿಶ್ಲೇಷಿಸಿದರು. ಆದರೆ, ಕಾಂಗ್ರೆಸ್‌ ಈ ಹೇಳಿಕೆಯನ್ನು ತಿರುಚಿದೆ ಎಂದರು.

ರಫೆಲ್‌ ಒಪ್ಪಂದ ಕುರಿತು ವ್ಯರ್ಥ ಆರೋಪ: ರಫೆಲ್‌ ಒಪ್ಪಂದದಲ್ಲಿ ಭ್ರಷ್ಟಾಚಾರವಾಗಿಲ್ಲ ಎಂದು ಸುಪ್ರಿಂಕೋರ್ಟ್‌ ತೀರ್ಪು ನೀಡಿದೆ. ಸಿಐಜಿ ವರದಿ ನೀಡಿದೆ. ಆದರೆ, ಕಾಂಗ್ರೆಸ್‌ನವರು ಅದನ್ನೇ ಪುನಃ ಆರೋಪಿಸುತ್ತಾ ದೆವ್ವ ಹಿಡಿದವರಂತಾಡುತ್ತಿದ್ದಾರೆ. ಇದರ ಬದಲು ಕಾಂಗ್ರೆಸ್‌ ಆಡಳಿತದಲ್ಲಾದ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹಾಗೂ 2ಜಿ ಹಗರಣದ ಕುರಿತು ಮಾತನಾಡಲಿ.

ರಕ್ಷಣಾ ಇಲಾಖೆಯನ್ನು ಮಧ್ಯಮ ವರ್ಗದ ಸಾಮಾನ್ಯ ಮಹಿಳೆ ನಿರ್ವಹಣೆ ಮಾಡುತ್ತಿರುವುದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಜತೆಗೆ, ಮೋದಿ ಅವರು ರಕ್ಷಣಾ ಇಲಾಖೆಯಿಂದ ದಲ್ಲಾಳಿಗಳನ್ನು ದೂರ ಇಟ್ಟಿರುವುದು ಕಾಂಗ್ರೆಸ್‌ನವರಿಗೆ ಸಾಕಷ್ಟು ಬೇಸರ ತಂದಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.