ಬದಲಾದ ಕನ್ನಡ ಚಳವಳಿ ಸ್ವರೂಪ


Team Udayavani, May 11, 2018, 12:09 PM IST

badalaad.jpg

ಬೆಂಗಳೂರು: ಇತ್ತೀಚೆಗೆ ಕನ್ನಡ ಚಳವಳಿಗಳು ಪ್ರದರ್ಶನ, ವಿಡಂಬನೆ ಹಾಗೂ ದಬ್ಟಾಳಿಕೆಯ ಸ್ವರೂಪ ಪಡೆಯುತ್ತಿವೆ ಎಂದು ಕನ್ನಡದ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ ಕಟ್ಟಡದ ಕುವೆಂಪು ಸಭಾಂಗಣದಲ್ಲಿ ಕರ್ನಾಟಕ ವಿಕಾಸ ರಂಗ ಹಾಗೂ ಕರ್ನಾಟಕ ವಿಚಾರ ವೇದಿಕೆ ವತಿಯಿಂದ ಡಾ.ಎಂ.ಚಿದಾನಂದಮೂರ್ತಿ ಅವರ 88ನೇ ಜನ್ಮದಿನದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾನು ನನ್ನ ಬದುಕು ಕುರಿತಂತೆ ಅವರು ವಿಶೇಷ ಉಪನ್ಯಾಸ ನೀಡಿದರು.

ಇಂದಿನ ಕೆಲ ಕನ್ನಡಪರ ಚಳವಳಿಗಳು ತ್ಯಾಗ ಹಾಗೂ ಸೇವಾ ಮನೋಭಾವ ಮರೆತು ಕೇವಲ ಹಣದ ಅಥವಾ ಅಧಿಕಾರದ ಸ್ವಾರ್ಥಕ್ಕಾಗಿ ನಡೆಯುತ್ತಿವೆ. ಹಾಗಾಗಿ ಮೊದಲು ಭಾಷೆ, ನಾಡು ಹಾಗೂ ದೇಶದ ಕುರಿತು ನಿಸ್ವಾರ್ಥದ ಅಭಿಮಾನ ಬೆಳಸಿಕೊಂಡು ಹೋರಾಟಕ್ಕೆ ಮುಂದಾಗಬೇಕು ಎಂದರು.

ಹಳ್ಳಿಯ ಕಡು ಬಡ ಕುಟುಂಬದಲ್ಲಿ ಹುಟ್ಟಿ ನಾನು ಮನೆಯವರ ಸಹಕಾರದಿಂದ ವಿದ್ಯಾಭ್ಯಾಸ ಮಾಡಿ ಅಂದಿನ ಕಾಲಕ್ಕೆ ಮೈಸೂರು ಕರ್ನಾಟಕಕ್ಕೆ 10ನೆ ರ್‍ಯಾಂಕ್‌ ಗಳಿಸಿದ್ದೆ. ಆ ನಂತರ ದಾವಣಗೆರೆಯಲ್ಲಿ ಕವಿ ಜಿ.ಎಸ್‌.ಶಿವರುದ್ರಪ್ಪನವರ ಪ್ರಭಾವಕ್ಕೆ ಒಳಗಾಗಿ ಕನ್ನಡ ಸಾಹಿತ್ಯ ಅಧ್ಯಯನ ಆರಂಭಿಸಿದೆ. ಆ ವೇಳೆ ವೈದ್ಯಕೀಯ ಶಿಕ್ಷಣ, “ಎಂಜಿನಿಯರಿಂಗ್‌ನಂತಹ ಓದು ಬಿಟ್ಟು ಕನ್ನಡ ಸಾಹಿತ್ಯ ಕಲಿಯುತ್ತಾನಂತೆ’ ಎಂದು ಊರಿನ ಅನೇಕರಿಂದ ನಿಂದನೆಗೊಳಗಾದೆ.

ಆದರೂ ಪಟ್ಟು ಬಿಡದೆ ಕುವೆಂಪು ಅವರ ವಿದ್ಯಾರ್ಥಿಯಾಗಿ ಕನ್ನಡ ಸಾಹಿತ್ಯ ಅಧ್ಯಯನ ಮಾಡಿದೆ. ನಂತರ ತೀನಂಶ್ರೀ ಅವರ ಬಳಿ ಸಂಶೋಧನ ವಿದ್ಯಾರ್ಥಿಯಾಗಿ ಕವಿ ಹಾಗೂ ಸಾಹಿತಿಯಾಗುವ ಕನಸು ಸಾಕಾರ ಮಾಡಿಕೊಂಡೆ ಎಂದು ತಮ್ಮ ಅಧ್ಯಯನ ದಿನಗಳನ್ನು ಮೆಲಕು ಹಾಕಿದರು. 

ಸಂಶೋಧನೆ ಎಂದರೆ ಕೇವಲ ಪುಸ್ತಕಗಳನ್ನು ತಿರುವಿ ಹಾಕುವುದಲ್ಲ. ಹೊಸ ಹೊಸ ವಿಷಯಗಳನ್ನು ಶೋಧಿಸುವುದು ಎಂಬ ತೀನಂಶ್ರೀ ಅವರ ಮಾತಿನಿಂದ ಸ್ಪೂರ್ತಿ ಪಡೆದ ನಾನು ಅನೇಕ ಮಹತ್ತರ ಸಂಶೋಧನೆಗಳನ್ನು ಕೈಗೊಂಡೆ. ಅವುಗಳಲ್ಲಿ ಮುಖ್ಯವಾಗಿ ವಚನಕಾರ ಬಸವಣ್ಣನ ಹಾಗೂ ಕವಿ ಪಂಪನ ವಂಶಸ್ಥರನ್ನು ಪತ್ತೆ ಹಚ್ಚಿದ್ದು,

ಕರ್ನಾಟಕ ಸಂಸ್ಕೃತಿಯ ಪ್ರಭಾವವನ್ನು ಕ್ಷೇತ್ರಕಾರ್ಯದ ಮೂಲಕ ದೇಶದಾಚೆಗಿನ ನೇಪಾಳದಲ್ಲಿ ಗುರುತಿಸಿದ ಸಂಶೋಧನೆಗಳು ಒಂದಿಷ್ಟು ಸಾರ್ಥಕ ಭಾವ ಹಾಗೂ ಖುಷಿ ತಂದುಕೊಟ್ಟಿವೆ. ಸಂಶೋಧನೆ ಜತೆಗೆ ನಾಡಿನ ಸಮಕಾಲಿನ ಕಷ್ಟ- ಸುಖಗಳಿಗೆ ಸ್ಪಂದಿಸಿದ್ದು, ಪ್ರಚಲಿತ ವಿಷಯಗಳಿಗೆ ಪ್ರತಿಕ್ರಿಯಿಸುತ್ತಾ ಬಂದಿದ್ದೇನೆ ಎಂದರು.

ಸಾಹಿತಿ ಡಾ.ಬಾಬು ಕೃಷ್ಣಮೂರ್ತಿ ಮಾತನಾಡಿ, ಕನ್ನಡ ಪರ ಯಾವುದೇ ಹೋರಾಟವಾದರೂ ಅಲ್ಲಿ ಮೊದಲು ಚಿದಾನಂದ ಮೂರ್ತಿಯವರ ಧ್ವನಿ ಕೇಳಿಸುತ್ತದೆ. ಕನ್ನಡದ ಕೆಲಸ ಮಾಡುವ ಶಕ್ತಿ ಕೇಂದ್ರ ಎಂಬ ಸಂಘವನ್ನು ಸ್ಥಾಪಿಸಿ ಅದರ ಶಕ್ತಿಯಾಗಿ ನಿಂತಿದ್ದರು. ಇಂದಿಗೂ ವೈಚಾರಿಕ  ಹಾಗೂ ಸಂಶೋಧನಾ ಸತ್ಯಗಳನ್ನು ನಿರ್ಭಯವಾಗಿ ಪ್ರತಿಪಾದಿಸುವ ಇವರು ಎಲ್ಲಾ ಸಂಶೋಧನ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಬೇಕು ಎಂದರು.

ಕಸಾಪ ಅಧ್ಯಕ್ಷ ಮನು ಬಳಿಗಾರ್‌, ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ್‌, ಉಪನ್ಯಾಸಕ ಎಸ್‌.ಎಸ್‌.ಅಂಗಡಿ, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ, ಕರ್ನಾಟಕ ವಿಕಾಸ ರಂಗ ಪ್ರಧಾನ ಸಂಚಾಲಕ ವ.ಚ.ಚನ್ನೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.