ಇನ್ನೂ ದುರಸ್ತಿಯಾಗದ ಚಾರ್ಮಾಡಿ ಘಾಟ್‌


Team Udayavani, Jun 14, 2018, 6:40 AM IST

ban14061807medn.jpg

ಬೆಂಗಳೂರು: ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ.
ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಶಾಲೆಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.

ಚಾರ್ಮಾಡಿ ಘಾಟಿಯಲ್ಲಿ ಬುಧವಾರ ಇಡೀ ದಿನ ರಸ್ತೆಯಲ್ಲಿ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆದಿದ್ದು, ವಾಹನ ಸಂಚಾರವನ್ನು ಸಂಪೂರ್ಣ ನಿಷೇ ಧಿಸಲಾಗಿತ್ತು. ಈ ಮಧ್ಯೆ, ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ರಾಜ್ಯದ ಲ್ಲಿಯೇ ಅಧಿಕ, 23 ಸೆಂ. ಮೀ. ಮಳೆ ಸುರಿಯಿತು.

ರಾಜಧಾನಿ ಬೆಂಗಳೂರಿನ ಕೆಲವೆಡೆ ಬುಧವಾರ ಮಧ್ಯಾಹ್ನದ ನಂತರ ಮಳೆಯಾಯಿತು. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮಳೆಯಿಂದಾಗಿ ಬಣಕಲ್‌ ಸಮೀಪದ ಬಂಕೇನಹಳ್ಳಿ ಗ್ರಾಮದಲ್ಲಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಅಕ್ಕ
ಪಕ್ಕದ ಮಣ್ಣು ಕುಸಿಯುತ್ತಿದೆ. ಉದುಸೆ ಗ್ರಾಮದಲ್ಲಿ ಹೇಮಾವತಿ ನದಿ ನೀರು ಅಕ್ಕ ಪಕ್ಕದ ಜಮೀನುಗಳಿಗೆ
ನುಗ್ಗಿದ್ದು, ಲಕ್ಷಾಂತರ ರೂ.ಮೌಲ್ಯದ ಭತ್ತ, ಅಡಕೆ, ಶುಂಠಿ ಹಾಗೂ ಕಾಫಿ ಬೆಳೆಗೆ ಹಾನಿಯಾಗಿದೆ.

ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪ ನೇರ್ಲೆಕೊಪ್ಪ ರಸ್ತೆಯ ಸೇತುವೆ ಮೇಲೆ ನೀರು ಹರಿದು ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಕೊಪ್ಪ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಯ ಮೇಲೆ ಬಿದ್ದಿದ್ದರಿಂದ ಅಲ್ಲಿಯೂ ಕೆಲ ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹರಾಜಪುರ ತಾಲೂಕಿನಲ್ಲಿ ಬುಧವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳಲ್ಲಿ ಬುಧವಾರ ಮತ್ತು ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿಯೂ ಮಳೆಯಾಗುತ್ತಿದ್ದು, ಆನಂದಪುರದಲ್ಲಿ ಗಾಳಿ-ಮಳೆಯಿಂದ ಬೃಹತ್‌ ಅರಳಿ ಮರವೊಂದು ಮಂಗಳವಾರ ರಾತ್ರಿ 2 ಮನೆಗಳ ಮೇಲೆ ಬಿದ್ದು ಐವರು ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಜೋಗಿನಮಠದ ಬಳಿ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ರಸ್ತೆ ಪಕ್ಕದ ಗುಡ್ಡ ಕುಸಿದಿದ್ದು, ಬುಧವಾರ ನಸುಕಿನ ಜಾವ ಕೆಲ ಹೊತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಹಾಸನ ಜಿಲ್ಲೆಯಲ್ಲಿ ಮಳೆ ಬೀಳುತ್ತಿದ್ದು, ಹೇಮಾವತಿ, ಯಗಚಿ ನದಿಯ ಒಳ ಹರಿವು ದಾಖಲೆಯ ಪ್ರಮಾಣದಲ್ಲಿದೆ. ಜಲಾನಯನ ಪ್ರದೇಶದಲ್ಲಿ ಇತ್ತೀಚಿಗೆ ಸುರಿಯುತ್ತಿರುವ ಮಳೆಯಿಂದಾಗಿ ಯಗಚಿ ಜಲಾಶಯದ ನೀರಿನ ಮಟ್ಟದಲ್ಲಿ 2 ಅಡಿ ಹೆಚ್ಚಾಗಿದೆ. ಹೇಮಾವತಿ ಜಲಾಶಯಕ್ಕೆ 37946 ಕ್ಯೂಸೆಕ್‌ ಒಳ ಹರಿವಿದ್ದು, ಜಲಾಶಯದ ನೀರಿನ ಮಟ್ಟ ಒಂದೇ ದಿನ 8.5 ಅಡಿಗಳಿಗೆ ಏರಿದೆ.

ಬದಲಿ ಮಾರ್ಗವೂ ಅಪಾಯಕಾರಿ ಸುಳ್ಯ: ಚಾರ್ಮಾಡಿ ಘಾಟಿ ಗುಡ್ಡ ಕುಸಿದು ಸಂಚಾರ ನಿರ್ಬಂಧದ ಬೆನ್ನಲ್ಲೆ, ಬದಲಿ ಮಾರ್ಗಗಳಲ್ಲಿ ಒಂದಾದ ಮಂಗಳೂರು-ಸಂಪಾಜೆ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿಯಲು ಬಾಯ್ದೆರೆದು ನಿಂತಿದೆ.

ಚಾರ್ಮಾಡಿ ಘಟನೆ ಹಿನ್ನೆಲೆಯಲ್ಲಿ ಉದಯವಾಣಿ ವತಿಯಿಂದ ಸಂಪಾಜೆ-ಮಡಿಕೇರಿ ರಸ್ತೆಯನ್ನು ಪರಿಶೀಲಿಸಿದ ಸಂದರ್ಭ ಇಂತಹ ಹಲವು ಅಪಾಯಕಾರಿ ಸ್ಥಳಗಳು ಕಂಡು ಬಂದಿವೆ. ವಾಹನ ಓಡಾಟ ಸಂಖ್ಯೆ ಹೆಚ್ಚಾಗಿರುವುದಲ್ಲದೆ ಕೊಡಗಿನಾದ್ಯಂತ ಭಾರಿ ಮಳೆ ಆಗುತ್ತಿರುವುದರಿಂದ ಹಲವು ಕಡೆಗಳಲ್ಲಿ ಮಣ್ಣು ಶಿಥಿಲಗೊಂಡು ಬೃಹತ್‌ ಗಾತ್ರದ ಮರಗಳು ರಸ್ತೆ ಕಡೆ ವಾಲಿವೆ. ಮಡಿಕೇರಿ ಪೇಟೆಗೆ ಕೆಲ ಕಿ.ಮೀ. ಸನಿಹದಲ್ಲಿರುವ ಮದೆನಾಡು ಬಳಿ ಪ್ರತಿ ಬಾರಿ ಗುಡ್ಡ ಕುಸಿತ ಆಗುತ್ತಿದ್ದು, ಅಲ್ಲಿ ತಿರುವೊಂದರ ಬಳಿ ರಕ್ಷಣಾ ಗೋಡೆ ನಿರ್ಮಿಸಲಾಗಿದೆ. ಅದು ಕೂಡ ಬಿರುಕು ಬಿಟ್ಟಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.