ಮಹಾನ್ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು
Team Udayavani, Jan 30, 2021, 8:23 AM IST
ಬೆಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಹೇಳಿಕೊಂಡು ಪ್ರತಿಷ್ಠಿತ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚಿರುವ ಯುವರಾಜ್ ಅಲಿಯಾಸ್ ಸ್ವಾಮಿಯ ಮತ್ತೂಂದು ವಂಚನೆ ಪ್ರಕರಣ ಬಯಲಾಗಿದೆ.
ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷಗಿರಿ ಕೊಡಿಸುವುದಾಗಿ ನಂಬಿಸಿ ಆಂಧ್ರದ ಕಾಳಹಸ್ತಿಯ ಬಿಜೆಪಿ ಮುಖಂಡ ಕೋಲಾ ಆನಂದ್ ಎಂಬುವವರ ಬಳಿ ಒಂದೂವರೆ ಕೋಟಿ ರೂ. ಪಡೆದಿರುವುದು ಬಯಲಾಗಿದೆ.
ಈ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿ ಯುವರಾಜನನ್ನು ಫೆ.1ರವರೆಗೆ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:ಪಕ್ಷಕ್ಕೆ ಹಮಾಲಿ ಮಾಡಿದ್ದು ನಾವು, ಬೇರೆಯವರು ಅಧಿಕಾರ ಅನುಭವಿಸುತ್ತಿದ್ದಾರೆ: ರೇಣುಕಾಚಾರ್ಯ
ಶ್ರೀಕಾಳಹಸ್ತಿ ದೇವಾಲಯಕ್ಕೆ ತೆರಳಿದ್ದ ಯುವರಾಜ ಅಲ್ಲಿ ಕೋಲಾಆನಂದ್ ಎಂಬುವವರನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ, ತಾನು ಆರ್ಎಸ್ಎಸ್ ಕಾರ್ಯಕರ್ತ ಎಂದು ನಂಬಿಸಿದ್ದ. ಜತೆಗೆ, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರ ಜತೆಗಿನ ಪೊಟೋಗಳನ್ನು ತೋರಿಸಿ ನಾನು ಅತ್ಯಂತ ಪ್ರಭಾವಿ ಎಂದು ಹೇಳಿಕೊಂಡಿದ್ದ. ಅಷ್ಟೇ ಅಲ್ಲದೆ ನೀವು ಹಣ ನೀಡಿ ಬೆಂಗಳೂರಿಗೆ ಬಂದರೆ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿದ್ದ.
ಯುವರಾಜನ ಮಾತು ನಂಬಿ ಆನಂದ ಕಾಳ ಬೆಂಗಳೂರಿಗೆ ಆಗಮಿಸಿ ಐಶಾರಾಮಿ ಹೋಟೆಲ್ನಲ್ಲಿ ತಂಗಿದ್ದರು. ಅಲ್ಲಿ ಭೇಟಿ ಮಾಡಿದ್ದ ಯುವರಾಜ ಅವರಿಂದ 1.5 ಕೋಟಿ ರೂ. ಪಡೆದುಕೊಂಡಿದ್ದ. ಬಳಿಕ ಹುದ್ದೆಯೂ ಕೊಡಿಸದೇ ಹಣವೂ ವಾಪಾಸ್ ನೀಡಿರಲಿಲ್ಲ. ಕೋಲಾ ಆನಂದ್ ಹಣ ವಾಪಾಸ್ ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿ, ಐಟಿ, ಇಡಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದ.
ಇದನ್ನೂ ಓದಿ: ಸುದ್ದಿಯಲ್ಲಿದ್ದಾರೆ ನ್ಯಾ| ಗಣೇದಿವಾಲಾ
ಸಿಸಿಬಿ ಪೊಲೀಸರು ಯುವರಾಜನನ್ನು ವಂಚನೆ ಪ್ರಕರಣದಲ್ಲಿ ಬಂಧಿಸಿರುವ ಮಾಹಿತಿ ತಿಳಿದುಕೊಂಡಿದ್ದ ಕೋಲಾ ಆನಂದ್ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ