ಡೇಟಿಂಗ್‌ ಆ್ಯಪ್‌ನಲ್ಲಿ ಯುವತಿಗೆ ವಂಚನೆ


Team Udayavani, Jun 11, 2023, 12:38 PM IST

ಡೇಟಿಂಗ್‌ ಆ್ಯಪ್‌ನಲ್ಲಿ ಯುವತಿಗೆ ವಂಚನೆ

ಬೆಂಗಳೂರು: ಡೇಟಿಂಗ್‌ ಆ್ಯಪ್‌ನಲ್ಲಿ ಹೆಸರು ಬದಲಿಸಿಕೊಂಡು ನಕಲಿ ಪ್ರೊಫೈಲ್‌ ಸೃಷ್ಟಿಸಿ ಮಹಿಳಾ ಟೆಕಿಗೆ ವಂಚಿಸಿದ ಜಮ್ಮು-ಕಾಶ್ಮೀರ ಮೂಲದ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಗಲೂರು ನಿವಾಸಿ ಮುದಾಸಿರ್‌ (41) ಬಂಧಿತ. 33 ವರ್ಷದ ಮಹಿಳಾ ಟೆಕಿಗೆ ಆರೋಪಿ ವಂಚಿಸಿದ್ದು, ಆಕೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಜಮ್ಮು-ಕಾಶ್ಮೀರ ಮೂಲದ ಆರೋಪಿ ಮುದಾಸಿರ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳು ಇದ್ದಾರೆ. ಎಂಬಿಎ ಪದವೀಧರನಾಗಿದ್ದು ರಿಯಲ್‌ ಎಸ್ಟೇಟ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಈ ನಡುವೆ ಬಂಬಲ್‌ ಎಂಬ ಡೇಟಿಂಗ್‌ ಆ್ಯಪ್‌ನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿ, ಯುವತಿಯರಿಗಾಗಿ ಶೋಧಿಸುತ್ತಿದ್ದ. ಇದೇ ವೇಳೆ ಅದೇ ಆ್ಯಪ್‌ನಲ್ಲಿದ್ದ ಯುವತಿ, ಮದುವೆಗಾಗಿ ಸಂಗಾತಿ ಹುಡುಕಾಡುತ್ತಿದ್ದರು. ಆಗ ಆರೋಪಿ ಆಕೆ ಜತೆ ಚಾಟಿಂಗ್‌ ಆರಂಭಿಸಿದ್ದು, ತನ್ನನ್ನು ಅನಿರುದ್ಧ/ ಅಭಿಷೇಕ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ಲಕ್ಷಾಂತರ ರೂ. ವೇತನದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಹೀಗಾಗಿ ಆಕೆ ಕೂಡ ಆತನೊಂದಿಗೆ ಸಂಪರ್ಕ ಮುಂದುವರಿಸಿದ್ದರು. ಬಳಿಕ ಇಬ್ಬರು ಪರಸ್ಪರ ವಾಟ್ಸ್‌ಆ್ಯಪ್‌ ಮತ್ತು ಕರೆಗಳು ಹಾಗೂ ವಿಡಿಯೋ ಕರೆಗಳನ್ನು ಮಾಡುತ್ತ ಆತ್ಮೀಯರಾಗಿದ್ದರು. ಈ ನಡುವೆ ಒಮ್ಮೆ ಯುವತಿಯನ್ನು ಭೇಟಿಯಾದ ಆರೋಪಿ, ಮದುವೆ ಆಗುವುದಾಗಿ ನಂಬಿಸಿ ಆಕೆ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಲ್ಲದೆ, ಕೆಲ ದಿನಗಳ ಬಳಿಕ ತನ್ನ ತಾಯಿಗೆ ಅನಾರೋಗ್ಯವಾಗಿದೆ ಎಂದು ಒಂದು ಲಕ್ಷ ರೂ. ಪಡೆದುಕೊಂಡಿದ್ದ. ಆ ನಂತರ ತಾಯಿ ಮೃತಪಟ್ಟಿದ್ದಾರೆ ಎಂದು ಮತ್ತೆ ಸುಳ್ಳು ಹೇಳಿ, ಆಗಲು ಒಂದಷ್ಟು ಹಣ ಪಡೆದುಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ದುಬೈಗೆ ಹೋಗುವುದಾಗಿ ಹೇಳಿದ್ದ!: ಕೆಲ ತಿಂಗಳ ಹಿಂದೆ ಆರೋಪಿ ಕರೆ ಮಾಡಿ, ತನ್ನ ಸಹೋದರ ದುಬೈನಲ್ಲಿದ್ದಾನೆ. ಆತನ ಭೇಟಿಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾನೆ. ಆ ಬಳಿಕ ಆತನ ಮೊಬೈಲ್‌ ಸ್ವಿಚ್ಡ್ ಆಫ್ ಆಗಿದೆ. ಅದರಿಂದ ಅನುಮಾನಗೊಂಡ ಯುವತಿ, ಆತನ ಪ್ರೊಫೈಲ್‌ ಪರಿಶೀಲಿಸಿದಾಗ, ಆತ ಅನ್ಯ ಕೋಮಿನ ಯುವಕ ಎಂಬುದು ಗೊತ್ತಾಗಿದೆ. ಅಲ್ಲದೆ, ಯುವತಿಯರಿಗೆ ವಂಚಿಸುವುದೇ ಈತನ ಕಾಯಕವಾಗಿದೆ ಎಂಬುದು ತಿಳಿದು, ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ‌

ಈ ಸಂಬಂಧ ಮೊಬೈಲ್‌ ನೆಟ್‌ವರ್ಕ್‌ ಹಾಗೂ ಇತರೆ ತಾಂತ್ರಿಕ ತನಿಖೆ ಮೂಲಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.