ವಿವಾಹವಾಗುವುದಾಗಿ ವಂಚನೆ; ಯುವತಿ ಆತ್ಮಹತ್ಯೆ ಯತ್ನ


Team Udayavani, Feb 6, 2019, 6:41 AM IST

vivaha.jpg

ಬೆಂಗಳೂರು: ಪ್ರೀತಿಸಿ ವಂಚನೆಗೊಳಗಾದ ವಿಚಾರ ಕುರಿತು ಆಪ್ತಸಮಾಲೋಚನೆಗೆ ಬಂದಿದ್ದ ಯುವತಿಯೊಬ್ಬಳು ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಬೆಂಗಳೂರಿನ ಹಲಸೂರು ನಿವಾಸಿ ಸಂಗೀತಾ(25)(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಸಂತ್ರಸ್ತೆಗೆ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಮೂಲದ ಪ್ರದೀಪ್‌(ಹೆಸರು ಬದಲಾಯಿಸಲಾಗಿದೆ) ವಂಚನೆ ಮಾಡಿದವನು.

ಮೈಸೂರು ಮೂಲದ ಪ್ರದೀಪ್‌ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಕ್ಯಾಬ್‌ ಚಾಲಕನಾಗಿದ್ದು, ಇಲ್ಲಿಯೇ ವಾಸವಾಗಿದ್ದಾನೆ. ಈ ವೇಳೆ ತನ್ನ ಸ್ನೇಹಿತರ ಮೂಲಕ ಹಲಸೂರು ನಿವಾಸಿ ಸಂಗೀತಾ ಅವರನ್ನು ಪರಿಚಯಿಸಿಕೊಂಡಿದ್ದಾನೆ. ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಕಳೆದ 10 ತಿಂಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಪ್ರದೀಪ್‌ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಆಕೆಯ ಜತೆ ಸಲುಗೆಯಿಂದಿದ್ದ.

ಇದೀಗ ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿ. ಆದರೆ, ಕೆಲ ತಿಂಗಳಿಂದ ಪ್ರದೀಪ್‌ ಸಂತ್ರಸ್ತೆಯ ಸಂಪರ್ಕಕ್ಕೆ ಸಿಗದೆ, ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದ. ಇದರಿಂದ ಆತಂಕಗೊಂಡ ಸಂತ್ರಸ್ತೆ ಒಂದು ತಿಂಗಳ ಹಿಂದೆ ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿರುವ ವನಿತಾ ಸಹಾಯವಾಣಿ ಕೇಂದ್ರದಲ್ಲಿ ದೂರು ನೀಡಿದ್ದರು ಎಂದು ಕೇಂದ್ರದ ಅಧಿಕಾರಿಗಳು ಹೇಳಿದರು.

ಮದುವೆಗೆ ನಿರಾಕರಣೆ: ಸಂತ್ರಸ್ತೆಯ ದೂರಿನ ಸಂಬಂಧ ಸಹಾಯವಾಣಿ ಕೇಂದ್ರದ ಅಧಿಕಾರಿಗಳು ಇಬ್ಬರನ್ನು ಎರಡು ಬಾರಿ ಆಪ್ತಸಮಾಲೋಚನೆ ಮಾಡಿದ್ದಾರೆ. ಈ ವೇಳೆ ಕೆಲ ಷರತ್ತುಗಳನ್ನು ಒಪ್ಪಿಕೊಂಡರೆ, ಆಕೆಯನ್ನು ವಿವಾಹ ಮಾಡಿಕೊಳ್ಳುವುದಾಗಿ ಪ್ರದೀಪ್‌ ಹೇಳಿಕೆ ನೀಡಿದ್ದ. ಆತನ ಷರತ್ತುಗಳಿಗೆ ಸಂತ್ರಸ್ತೆ ಕೂಡ ಸಮ್ಮತಿ ಸೂಚಿಸಿದ್ದರು.

ಹೀಗಾಗಿ ಫೆ.5ರಂದು ಮತ್ತೂಮ್ಮೆ ಕೌನ್ಸೆಲಿಂಗ್‌ಗೆ ಬರುವಂತೆ ಕೇಂದ್ರದ ಅಧಿಕಾರಿಗಳೂ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಕೌನ್ಸೆಲಿಂಗ್‌ಗೆ ಬಂದ ಪ್ರದೀಪ್‌, ಸಂಗೀತಾರನ್ನು ಮದುವೆ ಮಾಡಿಕೊಳ್ಳಲು ಕಾಲವಕಾಶ ಬೇಕಿದೆ ಎಂದು ನುಣುಕಿಕೊಳ್ಳಲು ಯತ್ನಿಸಿದ್ದಾನೆ.

ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನ: ಪ್ರಿಯಕರನ ಮಾತು ಕೇಳಿದ ಸಂತ್ರಸ್ತೆ ಆತಂಕಗೊಂಡು ಸಹಾಯವಾಣಿ ಕೇಂದ್ರದಿಂದ ಹೊರಬಂದು ಶೌಚಾಲಯಕ್ಕೆ ಹೋಗಿದ್ದಾರೆ. ಅನುಮಾನಗೊಂಡ ಪೋಷಕರು ಆಕೆಯ ಹಿಂದೆಯೇ ಹೋಗಿದ್ದಾರೆ. ಬಳಿಕ ಶೌಚಾಲಯದ ಬಾಗಿಲು ಹಾಕಿಕೊಂಡ ಸಂತ್ರಸ್ತೆ, ಗಾಜಿನ ಬಳೆಯ ಮೂಲಕ ಎಡಗೈ ಕೊಯ್ದುಕೊಂಡಿದ್ದಾರೆ.

ಇದನ್ನು ಗಮನಿಸಿದ ಆಕೆಯ ಸಂಬಂಧಿಕರು ಜೋರಾಗಿ ಕೂಗಿಕೊಂಡಿದ್ದಾರೆ. ಕೂಡಲೇ ನೆರವಿಗೆ ಧಾವಿಸಿದ ಕಚೇರಿಯ ಸಿಬ್ಬಂದಿ ಶೌಚಾಲಯದಿಂದ ಆಕೆಯನ್ನು ಹೊರ ಕರೆತಂದು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವನಿತಾ ಸಹಾಯವಾಣಿ ಕೇಂದ್ರದ ಅಧಿಕಾರಿಗಳು ಹೇಳಿದರು.

ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮದುವೆಯಾಗಿಲ್ಲ. 10 ತಿಂಗಳ ಹಿಂದೆ ಯವಕನೊಬ್ಬನನ್ನು ಪ್ರೀತಿಸುತ್ತಿದ್ದರು. ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾರೆ. ಮಂಗಳವಾರ ಕೌನ್ಸೆಲಿಂಗ್‌ ವೇಳೆ ಆತ ಮದುವೆಗೆ ಕಾಲವಕಾಶ ಕೇಳಿದ್ದ. ಇದರಿಂದ ಆತಂಕಗೊಂಡ ಸಂತ್ರಸ್ತೆ ಶೌಚಾಲಯದಲ್ಲಿ ಕೈ ಕೊಯ್ದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಯುವಕ ಮದುವೆಗೆ ನಿರಾಕರಿಸಿದರೆ, ಪೊಲೀಸರಿಗೆ ದೂರು ನೀಡಲಾಗುವುದು.
-ರಾಣಿ ಶೆಟ್ಟಿ, ವನಿತಾ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.