ಅನಿಲಭಾಗ್ಯ ಯೋಜನೆಗೆ ಸಿಎಂ ಚಾಲನೆ


Team Udayavani, Feb 21, 2018, 6:10 AM IST

180220kpn57.jpg

ಬೆಂಗಳೂರು : ಬಡವರ್ಗದವರಿಗೆ ಉಚಿತ ಅನಿಲ ಸಂಪರ್ಕ, 2 ಸಿಲಿಂಡರ್‌, ಸ್ಟೌವ್‌ ಹಾಗೂ ಲೈಟರ್‌ ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನಿಲಭಾಗ್ಯಕ್ಕೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಮೊದಲ ಹಂತದಲ್ಲಿ 10 ಲಕ್ಷ ಕುಟುಂಬ ಸೇರಿದಂತೆ 30 ಲಕ್ಷ ಕುಟುಂಬ ಈ ಯೋಜನೆಯ ಫ‌ಲಾನುಭವ ಪಡೆಯಲಿದೆ ಎಂದು ಘೋಷಿಸಿದರು.

ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ವತಿಯಿಂದ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಮನಗರ ತಾಲೂಕಿನ ಗ್ರಹಿಣಿಯರಾದ ಬೋರಮ್ಮ, ನಂದಿನಿ, ಜಯಲಕ್ಷ್ಮೀ ಮತ್ತು ದೀಪು ಅವರಿಗೆ ಗ್ಯಾಸ್‌ಸ್ಟೌವ್‌ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದ ಅವರು, ಆದಷ್ಟು ಬೇಗ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರ ಸರ್ಕಾರದ ಉಜ್ವಲ ಯೋಜನೆಯು ರಾಜ್ಯದ 10 ಸಾವಿರ ಜನರಿಗೂ ಸರಿಯಾಗಿ ತಲುಪಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿಗಳು ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಜನರಿಗೂ ಅನಿಲ ಸಂಪರ್ಕ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅನಿಲಭಾಗ್ಯ ಜಾರಿಗೆ ತಂದಿದ್ದೇವೆ. ರಾಜ್ಯದ 30 ಲಕ್ಷ ಕುಟುಂಬಗಳಿಗೆ ಇದರ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.

ರಾಜ್ಯದಲ್ಲಿ 1.40 ಕೋಟಿ ಬಿಪಿಎಲ್‌ ಕುಟುಂಬ ಇದೆ. ಅನ್ನಭಾಗ್ಯ, ಶಾಧಿಭಾಗ್ಯ, ಮೈತ್ರಿ, ಮನಸ್ವಿನಿ, ಆರೋಗ್ಯ ಭಾಗ್ಯ, ಇಂದಿರಾ ಕ್ಯಾಂಟೀನ್‌ ಸೇರಿ ಅನೇಕ ಜನರ ಪರ ಕಾರ್ಯಕ್ರಮ ನೀಡಿದ್ದೇವೆ. 6.50 ಕೋಟಿ ಜನರಲ್ಲಿ ಶೇ.90ರಷ್ಟು ಜನರು ರಾಜ್ಯ ಸರ್ಕಾರದ ಒಂದಲ್ಲ ಒಂದು ಯೋಜನೆಯ ಫ‌ಲಾನುಭವ ಪಡೆಯುತ್ತಿದ್ದಾರೆ ಎಂದರು.

ಗ್ರಾಮೀಣ ಭಾಗದ ಮಹಿಳೆಯರು ಹೊಗೆ ಸೇವಿಸುವುದನ್ನು ತಪ್ಪಿಸಲು, ಸೌದಿಗಾಗಿ ಮರ ಕಡಿಯುವುದನ್ನು ನಿಲ್ಲಿಸಲು ಮತ್ತು ಪರಿಸರ ಸಂರಕ್ಷಣೆಯ ಮೂಲ ಉದ್ದೇಶದೊಂದಿಗೆ  ಅನಿಲಭಾಗ್ಯ ಆರಂಭಿಸಿದ್ದೇವೆ. ಅನಿಲ ಸಂಪರ್ಕದ ಜತೆಗೆ ಗ್ಯಾಸ್‌ಸ್ಟೌವ್‌, ಲೈಟರ್‌ ಮತ್ತು ಎರಡು ಸಿಲಿಂಡರ್‌ ಕೂಡ ನೀಡುತ್ತಿದ್ದೇವೆ. ರಾಜ್ಯದ ಜನತೆ ಅನ್ನಭಾಗ್ಯದ ಅಕ್ಕಿಯನ್ನು ಅನಿಲಭಾಗ್ಯದ ಗ್ಯಾಸ್‌ ಮೂಲಕ ಅಡುಗೆ ಮಾಡಿ, ನೆಮ್ಮದಿಯ ಬದುಕು ನಡೆಸಲಿ ಎಂಬುದೇ ಸರ್ಕಾರದ ಮೂಲ ಧ್ಯೇಯವಾಗಿದೆ ಎಂದು ವಿವರಿಸಿದರು.

ಈ ಯೋಜನೆಯಡಿ ಕುಟುಂಬವೊಂದಕ್ಕೆ ಉಚಿತ ಅನಿಲ ಸಂಪರ್ಕ, ಗ್ಯಾಸ್‌ಸ್ಟೌವ್‌, 2 ಸಿಲಿಂಡರ್‌ ಮತ್ತು ಲೈಟರ್‌ ನೀಡಲು 4254 ರೂ. ಖರ್ಚು ಬರುತ್ತದೆ. ಅದನ್ನು ಪೂರ್ತಿಯಾಗಿ ಸರ್ಕಾರವೇ ಭರಿಸಲಿದೆ. ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮುಂದಾಳತ್ವದಲ್ಲಿ ಅರ್ಹ ಫ‌ಲಾನುಭವಿಗಳ ಆಯ್ಕೆ ನಡೆದಿದೆ. ಈ ಯೋಜನೆಯಲ್ಲಿ ಆಹಾರ ಸಚಿವ ಯು.ಟಿ. ಖಾದರ್‌ ಅವರು ತುಂಬಾ ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಶ್ಲಾ ಸಿದರು.

ಆಹಾರ ಸಚಿವ ಯು.ಟಿ.ಖಾದರ್‌, ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಹಾಗೂ ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌, ಮೇಯರ್‌ ಸಂಪತ್‌ ರಾಜ್‌, ಶಾಸಕ ಕೆ.ಎನ್‌.ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಂ.ಕೆ.ಲಕ್ಷ್ಮೀನಾರಾಯಣ, ಆಹಾರ ಇಲಾಖೆ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ, ಕಾರ್ಮಿಕ ಇಲಾಖೆ ಆಯುಕ್ತೆ ವಿ.ಚೈತ್ರಾ, ಅಹಾರ ಇಲಾಖೆ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್‌ ಮೊದಲಾದವರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದ ಉಜ್ವಲ್‌ ಯೋಜನೆ ಸಮಾಜದ ಶೇ.10ರಷ್ಟು ಜನರಿಗೆ ಮಾತ್ರ ಲಭ್ಯವಾಗುತ್ತಿದ್ದು, ಶೇ.90ರಷ್ಟು ಕುಟುಂಬ ವಂಚಿತರಾಗಿದ್ದಾರೆ. ರಾಜ್ಯದ ಶೋಷಿತರು, ನಿರ್ಗತಿಕರು, ಬಡವರನ್ನೇ ಗುರಿಯಾಗಿಟ್ಟುಕೊಂಡು ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಜಾರಿಗೆ ತಂದಿದ್ದೇವೆ. 30 ಲಕ್ಷ ಕುಟುಂಬ ಇದರ ಫ‌ಲಾನುಭವ ಪಡೆಯಲಿದೆ. ಅನ್ನಭಾಗ್ಯ, ರಿಯಾಯ್ತಿ ದರದಲ್ಲಿ ತೊಗರಿ ಬೇಳೆ, ಆನ್‌ಲೈನ್‌ ಮೂಲಕ ರೇಷನ್‌ ಕಾರ್ಡ್‌ ಸೌಲಭ್ಯ ಸೇರಿದಂತೆ ಆಹಾರ ಇಲಾಖೆ ಹಲವು ಕ್ರಾಂತಿಕಾರಕ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್‌ ಹೇಳಿದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.