ಬಂಧನ ಭೀತಿ; ಚಿಕ್ಕರಾಯಪ್ಪಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು
Team Udayavani, Mar 24, 2017, 5:25 PM IST
ಬೆಂಗಳೂರು:ಬಂಧನದ ಭೀತಿಯಿಂದ ಕೋರ್ಟ್ ಮೊರೆ ಹೋಗಿದ್ದ ಕಾವೇರಿ ನೀರಾವರಿ ನಿಗಮದ ಎಂಡಿ ಚಿಕ್ಕರಾಯಪ್ಪಗೆ ಶುಕ್ರವಾರ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಇತ್ತೀಚೆಗೆ ಚಿಕ್ಕರಾಯಪ್ಪ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ, ಪಾಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಐಟಿ ದಾಳಿ ಆಧರಿಸಿ ಎಸಿಬಿ ದೂರು ದಾಖಲಿಸಿತ್ತು.
ಈ ಹಿನ್ನೆಲೆಯಲ್ಲಿ ಬಂಧನ ಭೀತಿಗೊಳಗಾಗಿದ್ದ ಚಿಕ್ಕರಾಯಪ್ಪ ಹಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.