![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಬಾಲ್ಯವಿವಾಹ ಅಪರಾಧಿಗೆ 10 ವರ್ಷ ಜೈಲು
Team Udayavani, Apr 21, 2018, 11:56 AM IST
![balya-vivaha.jpg](https://www.udayavani.com/wp-content/uploads/2018/04/21/balya-vivaha.jpg)
ಬೆಂಗಳೂರು: ಮೊದಲನೇ ವಿವಾಹ ಸಂಗತಿ ಮುಚ್ಚಿಟ್ಟು 14 ವರ್ಷದ ಅಪ್ರಾಪೆ¤ಯನ್ನು ಮದುವೆ ಮಾಡಿಕೊಂಡಿದ್ದ ಸೈಯದ್ ಮುಜಾಮಿಲ್ (24) ಎಂಬಾತನಿಗೆ 10 ವರ್ಷಗಳ ಜೈಲುಶಿಕ್ಷೆ ವಿಧಿಸಿ ನಗರದ ಪೋಕೊ ನ್ಯಾಯಾಲಯ ತೀರ್ಪು ನೀಡಿದೆ.
2014ರ ಆಗಸ್ಟ್ನಲ್ಲಿ ನಡೆದಿದ್ದ ವಿವಾಹ ಸಂಬಂಧ ಬಾಲ್ಯ ವಿವಾಹ ಹಾಗೂ ಅತ್ಯಾಚಾರ (ಪೋಕೊ) ಕಾಯ್ದೆಯಡಿ ಮೈಕೋಲೇಔಟ್ ಠಾಣೆ ಪೊಲೀಸರು ಆರೋಪಿ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿರುವ ನ್ಯಾಯಾಧೀಶರಾದ ವನಮಾಲ ಯಾದವ್, ಕೃತ್ಯ ಎಸಗಿದ ಅಪರಾಧಿ ಸೈಯದ್ ಮುಜಾಮಿಲ್ಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಈ ಕೃತ್ಯಕ್ಕೆ ಸಹಕರಿಸಿದ ಆರೋಪಿ ಅಪ್ರುಶ್ ಪಾಷಾನಿಗೆ 40 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಾರೆ.
14ನೇ ವರ್ಷದ ಮಗಳನ್ನು ಆಕೆಯ ತಂದೆ, ತಾಯಿ ಹಾಗೂ ಸಂಬಂಧಿಕರು ಆಟೋಚಾಲಕ ಸೈಯದ್ ಮುಜಾಮಿಲ್ಗೆ 2014ರ ಆಗಸ್ಟ್ 24ರಂದು ವಿವಾಹ ಮಾಡಿಕೊಟ್ಟಿದ್ದರು. ಈ ವೇಳೆ ಬಾಲಕಿಗೆ 18 ವರ್ಷ ತುಂಬಿದೆ ಎಂದು ಆಕೆಯ ಪೋಷಕರು ಮತ್ತು ಮುಜಾಮಿಲ್ ಮದುವೆ ಮಾಡಿಸುವ ಮೌಲ್ವಿಗೆ ತಿಳಿಸಿದ್ದರು. ಅಲ್ಲದೆ, ಮದುವೆಯಾದ ದಿನವೇ ಮುಜಾಮಿಲ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.
ಇದಕ್ಕೆ ಮುನ್ನವೇ ಮುಜಾಮಿಲ್ಗೆ ಬೇರೆ ಮದುವೆಯಾಗಿದ್ದು, ಪತ್ನಿ ಆತನನ್ನು ತೊರೆದಿದ್ದಳು. ಈ ವಿಚಾರವನ್ನೂ ಆತ ಮುಚ್ಚಿಟ್ಟಿದ್ದ. ತನ್ನ ಅಪ್ರಾಪ್ತ ತಂಗಿಗೆ ಮದುವೆ ಮಾಡಿದ್ದನ್ನು ತಿಳಿದ ಆಕೆಯ ಅಣ್ಣ ತನ್ನ ಪೋಷಕರು ಮತ್ತು ಮುಜಾಮಿಲ್ ವಿರುದ್ಧ ಮೈಕೋಲೇಔಟ್ ಠಾಣೆಯಲ್ಲಿ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದರು.
ಎಲ್ಲರೂ ನಾಪತ್ತೆ: ಆದರೆ, ಮುಜಾಮಿಲ್ ಮತ್ತಿತರರ ವಿರುದ್ಧ ದೂರು ದಾಖಲಾದ ಕೆಲವೇ ದಿನಗಳಲ್ಲಿ ದೂರು ನೀಡಿದ ಬಾಲಕ, ಸಂತಸ್ತೆ ಹಾಗೂ ಪ್ರಕರಣದ ಇನ್ನಿತರೆ ಆರೋಪಿಗಳಾದ 10 ಮಂದಿ ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ ಎಂದು ಪ್ರಾಸಿಕ್ಯೂಶನ್ ಪರ ವಾದಿಸಿದ್ದ ಸರ್ಕಾರಿ ಅಭಿಯೋಜಕ ಎಸ್.ಎನ್ ಹಿರೇಮನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.