ಬಾಲ್ಯವಿವಾಹ ಅಪರಾಧಿಗೆ 10 ವರ್ಷ ಜೈಲು


Team Udayavani, Apr 21, 2018, 11:56 AM IST

balya-vivaha.jpg

ಬೆಂಗಳೂರು: ಮೊದಲನೇ ವಿವಾಹ ಸಂಗತಿ ಮುಚ್ಚಿಟ್ಟು 14 ವರ್ಷದ ಅಪ್ರಾಪೆ¤ಯನ್ನು ಮದುವೆ ಮಾಡಿಕೊಂಡಿದ್ದ ಸೈಯದ್‌ ಮುಜಾಮಿಲ್‌ (24) ಎಂಬಾತನಿಗೆ 10 ವರ್ಷಗಳ ಜೈಲುಶಿಕ್ಷೆ ವಿಧಿಸಿ ನಗರದ ಪೋಕೊ ನ್ಯಾಯಾಲಯ ತೀರ್ಪು ನೀಡಿದೆ.

2014ರ ಆಗಸ್ಟ್‌ನಲ್ಲಿ ನಡೆದಿದ್ದ ವಿವಾಹ ಸಂಬಂಧ ಬಾಲ್ಯ ವಿವಾಹ ಹಾಗೂ ಅತ್ಯಾಚಾರ (ಪೋಕೊ) ಕಾಯ್ದೆಯಡಿ ಮೈಕೋಲೇಔಟ್‌ ಠಾಣೆ ಪೊಲೀಸರು ಆರೋಪಿ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿರುವ ನ್ಯಾಯಾಧೀಶರಾದ ವನಮಾಲ ಯಾದವ್‌, ಕೃತ್ಯ ಎಸಗಿದ ಅಪರಾಧಿ ಸೈಯದ್‌ ಮುಜಾಮಿಲ್‌ಗೆ  10 ವರ್ಷ ಜೈಲು ಶಿಕ್ಷೆ ಹಾಗೂ ಈ ಕೃತ್ಯಕ್ಕೆ ಸಹಕರಿಸಿದ ಆರೋಪಿ ಅಪ್ರುಶ್‌ ಪಾಷಾನಿಗೆ 40 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಾರೆ.

14ನೇ ವರ್ಷದ ಮಗಳನ್ನು ಆಕೆಯ ತಂದೆ, ತಾಯಿ ಹಾಗೂ ಸಂಬಂಧಿಕರು ಆಟೋಚಾಲಕ ಸೈಯದ್‌ ಮುಜಾಮಿಲ್‌ಗೆ 2014ರ ಆಗಸ್ಟ್‌ 24ರಂದು ವಿವಾಹ ಮಾಡಿಕೊಟ್ಟಿದ್ದರು. ಈ ವೇಳೆ ಬಾಲಕಿಗೆ 18 ವರ್ಷ ತುಂಬಿದೆ ಎಂದು ಆಕೆಯ ಪೋಷಕರು ಮತ್ತು ಮುಜಾಮಿಲ್‌ ಮದುವೆ ಮಾಡಿಸುವ ಮೌಲ್ವಿಗೆ ತಿಳಿಸಿದ್ದರು. ಅಲ್ಲದೆ, ಮದುವೆಯಾದ ದಿನವೇ ಮುಜಾಮಿಲ್‌ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.

ಇದಕ್ಕೆ ಮುನ್ನವೇ ಮುಜಾಮಿಲ್‌ಗೆ ಬೇರೆ ಮದುವೆಯಾಗಿದ್ದು, ಪತ್ನಿ ಆತನನ್ನು ತೊರೆದಿದ್ದಳು. ಈ ವಿಚಾರವನ್ನೂ ಆತ ಮುಚ್ಚಿಟ್ಟಿದ್ದ. ತನ್ನ ಅಪ್ರಾಪ್ತ ತಂಗಿಗೆ ಮದುವೆ ಮಾಡಿದ್ದನ್ನು ತಿಳಿದ ಆಕೆಯ ಅಣ್ಣ ತನ್ನ ಪೋಷಕರು ಮತ್ತು ಮುಜಾಮಿಲ್‌ ವಿರುದ್ಧ ಮೈಕೋಲೇಔಟ್‌ ಠಾಣೆಯಲ್ಲಿ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದರು. 

ಎಲ್ಲರೂ ನಾಪತ್ತೆ: ಆದರೆ, ಮುಜಾಮಿಲ್‌ ಮತ್ತಿತರರ ವಿರುದ್ಧ ದೂರು ದಾಖಲಾದ ಕೆಲವೇ ದಿನಗಳಲ್ಲಿ ದೂರು ನೀಡಿದ ಬಾಲಕ, ಸಂತಸ್ತೆ ಹಾಗೂ ಪ್ರಕರಣದ ಇನ್ನಿತರೆ ಆರೋಪಿಗಳಾದ 10 ಮಂದಿ ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ ಎಂದು ಪ್ರಾಸಿಕ್ಯೂಶನ್‌ ಪರ ವಾದಿಸಿದ್ದ ಸರ್ಕಾರಿ ಅಭಿಯೋಜಕ ಎಸ್‌.ಎನ್‌ ಹಿರೇಮನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.