ಬೆಂಗಳೂರು ಹಸಿರಾಗಿಸಲುಪಣ ತೊಟ್ಟ ಮುದ್ದು ಮಕ್ಕಳು


Team Udayavani, Nov 27, 2017, 12:58 PM IST

blore-6.jpg

ಬೆಂಗಳೂರು: ಅಲ್ಲಲ್ಲಿ ಪುಟಾಣಿ ಮಕ್ಕಳ ಕಲರವ. ಆಗಸದಲ್ಲಿ ಆಗಾಗ ಇಣುಕುತ್ತಿದ್ದ ಸೂರ್ಯ, ಹಸಿರುಡುಗೆ ತೊಟ್ಟು ಕಂಗೊಳಿಸುತ್ತಿದ್ದ ಮಹಿಳೆಯರು, ಹಸಿರುಳಿಸಿ ಗೀತೆಗಳಿಗೆ ಕುಣಿದು ಕುಪ್ಪಳಿಸಿದ ಚಿಣ್ಣರು. ಹಸಿರು ತನವೇ ಮೇಳೈಸಿದ ಮೈದಾನದ ತುಂಬೆಲ್ಲಾ ಚಪ್ಪಾಳೆಯ ಹೊನಲು… ಇಂತಹ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದು,ª ಅದಮ್ಯ ಚೇತನ ಸಂಸ್ಥೆ ನೂರನೇ ಹಸಿರು ಭಾನುವಾರದ ಅಂಗವಾಗಿ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ
ಆಯೋಜಿಸಿದ್ದ ಬೃಹತ್‌ ಹಸಿರು ಸಮಾರಂಭ.

“ಮನೆಗೊಂದು ಮರ, ಊರಿಗೊಂದು ವನ’, “ಪರಿಸರ ಹಚ್ಚಹಸಿರು, ಎಲ್ಲರ ಬದುಕು ಉಸಿರು’ ಎಂಬ ಹಸಿರು
ಫ‌ಲಕಗಳನ್ನು ಹಿಡಿದಿದ್ದ ಪುಟಾಣಿಗಳು, “ಉಸಿರಾಗಲಿ ಹಸಿರು’ ಎಂಬ ಘೋಷಣೆ ಮೊಳಗಿಸಿ ಹಸಿರು ಕ್ರಾಂತಿಗೆ ಪಣ 
ತೊಟ್ಟರು. ಬೀದಿ ನಾಟಕ ಮತ್ತು ಕ್ರಾಂತಿ ಗೀತೆಗಳ ಮೂಲಕ ನೆರೆದವರಿಗೆ ಹಸಿರುಳಿಸುವ ಬಗ್ಗೆ ತಿಳುವಳಿಕೆ ನೀಡಿದರು.

ಬೆಳಗ್ಗೆ ಕಾಲೇಜುಗಳಲ್ಲಿ ಗಿಡ ನೆಟ್ಟ ನಾರಾಯಣ ಹೃದಯಾಲಯ ವೈದ್ಯಕೀಯ ಕಾಲೇಜು, ಸಂಜಯ್‌ ಗಾಂಧಿ
ಕಾಲೇಜು, ನೈಸ್‌ ಸಂಸ್ಥೆ, ಗ್ರೀನ್‌ ಸ್ಟೇಜ್‌, ಆಲಾಪನ ತಂಡ ಹಾಗೂ ಬನ್ನೇರು ಘಟ್ಟದ ಶಿವಳ್ಳಿ ಶಾಲೆಯ ವಿದ್ಯಾರ್ಥಿಗಳು
ನಂತರ ಜಯನಗರದ ಕಿತ್ತೂರು ರಾಣಿ ಚನ್ನಮ್ಮ ಕ್ರೀಡಾಂಗಣಕ್ಕೆ ಆಗಮಿಸಿ ಬೆಂಗಳೂರನ್ನು ಹಸಿರಾಗಿಸುವ ಪಣ ತೊಟ್ಟ ರು. ಚಿತ್ರನಟ ಸುದೀಪ್‌ ಸೇರಿದಂತೆ ಹಲವು ಗಣ್ಯರು ತಮ್ಮ ಮನೆಯಲ್ಲಿಯೆ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದ್ದು ವಿಶೇಷ.

ಜನಾಂದೋಲನವಾಗಲಿ: ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಅನಂತ್‌ ಕುಮಾರ್‌, ಗಾಂಧೀಜಿ ಅವರ ಚಂಪಾರಣ್ಯ ಸತ್ಯಾಗ್ರಹ ಈ ಕಾರ್ಯಕ್ರಮಕ್ಕೆ ಪ್ರೇರಣೆಯಾಗಿದೆ ಎಂದು ಹೇಳಿದರು.  ಪ್ರಧಾನಿ ನರೇಂದ್ರ ಮೋದಿ ಅವರು ಹಸಿರುಕರಣಕ್ಕೆ ಪಣ ತೊಟ್ಟಿದ್ದಾರೆ. ಅದಮ್ಯ ಚೇತನ ಸಂಸ್ಥೆ ಬೆಂಗಳೂರಿನಲ್ಲಿ ಈಗಾಗಲೇ ಒಂದು ವರೆಲಕ್ಷ ಗಿಡಗಳನ್ನು ನೆಟ್ಟಿದ್ದು, 1 ಕೋಟಿ ಗಿಡ ನಡುವ ಉದ್ದೇಶವನ್ನಿಟ್ಟುಕೊಂಡಿದೆ ಎಂದು ತಿಳಿಸಿದರು. 

ಪ್ರತಿಯೊಬ್ಬ ಮನುಷ್ಯನಿಗೆ ಉಸಿರಾಡಲು 7 ಮರಗಳ ಅವಶ್ಯಕತೆ ಇದೆ. ಆದರೆ ಬೆಂಗಳೂರಿನಲ್ಲಿ 1 ಕೋಟಿ
ಜನರಿಗೆ ಕೇವಲ 14 ಲಕ್ಷ ಮರಗಳು ಉಳಿದಿವೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಸಸ್ಯಾಗ್ರಹ ಒಂದು ದೊಡ್ಡ
ಜನಾಂದೋಲನವಾಗಲಿದೆ. ಮುಂದೆ ಇದು ಭಾರತೀಯರ ಆಂದೋಲವಾಗಲಿ ಎಂದು ಆಶಿಸಿದರು. ಸಂಸದ ಪಿ.ಸಿ.ಮೋಹನ್‌, ಮಾಜಿ ಸಚಿವ ಆರ್‌, ಅಶೋಕ್‌, ರಾಮಚಂದ್ರೇಗೌಡ, ಶಾಸಕ ವಿಜಯ್‌ ಕುಮಾರ್‌, ಪಾಲಿಕೆ ಸದಸ್ಯ ನಾಗರಾಜ್‌ ಮತ್ತಿತರರಿದ್ದರು.

130 ಸ್ಥಳಗಳಲ್ಲಿ ಗಿಡ ನೆಟ್ಟು ಬೆಂಬಲ
ನೂರನೇ ಹಸಿರು ಭಾನುವಾರದ ಹಿನ್ನೆಲೆಯಲ್ಲಿ ಅಮೆರಿಕ, ಅಹದಾಬಾದ್‌, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ಒಟ್ಟು 130 ಸ್ಥಳಗಳಲ್ಲಿ ಅತ್ತಿ, ಆಲ, ಬೇವು, ಹುಣಸೆ, ಸಂಪಿಗೆ, ಸೇವಂತಿಗೆ, ಅರಳಿ ಗಿಡ ಸೇರಿದಂತೆ ಹಲವು ಜಾತಿಯ ಸಸಿಗಳನ್ನು ನೆಡಲಾಗಿದೆ. ಇಡೀ ಬೆಂಗಳೂರನ್ನು ಹಸರೀಕರಣ ಮಾಡುವ ನಿಟ್ಟಿನಲ್ಲಿ ಅದಮ್ಯ ಚೇತನ ಸಂಸ್ಥೆ ಹೆಜ್ಜೆ ಇಟ್ಟಿದ್ದು, ಇದಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ್‌ ಕುಮಾರ್‌ ಹೇಳಿದರು. ಹಸಿರು ಕ್ರಾಂತಿಗೆ ಪಣತೊಟ್ಟ ಅದ್ಯಚೇತನ ಸಂಸ್ಥೆಗೆ ಬೆಂಬಲಿಸಿ ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ, ಸಿದ್ಧಲಿಂಗಯ್ಯ, ಚಿತ್ರ ನಟ ಸುದೀಪ್‌ ಸೇರಿದಂತೆ ಹಲವು ದಿಗ್ಗಜರು ಸಸಿನೆಟ್ಟು ನೀರೆರೆದಿದ್ದು ಮತ್ತೂಂದು ವಿಶೇಷ.

ಹಲವು ಪ್ರದೇಶಗಳಲ್ಲಿ ಈಗ ಕಾಡು ನಾಶವಾಗಿ ಹೋಗಿದ್ದು ಮುಂದೊಂದು ದಿನ ಉಸಿರಾಟಕ್ಕೂ ಗಾಳಿಸಿಗದಂತ ವಾತಾವರಣ ನಿರ್ಮಾಣ ವಾಗಬಹುದು. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳ ಬೇಕು. ಹೀಗಾಗಿ ಈ ಕಾರ್ಯ ಕ್ರಮಕ್ಕೆ ಕೈ ಜೋಡಿಸಿದ್ದೇವೆ.
 ಭವ್ಯ, ಶಿವಳ್ಳಿ ಶಾಲೆ ವಿದ್ಯಾರ್ಥಿನಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.