ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ
Team Udayavani, Apr 27, 2018, 6:30 AM IST
ಬೆಂಗಳೂರು: ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಈ ಸಂಬಂಧ ಯಾವುದೇ ದೂರುಗಳು ಬಂದರೂ ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ.
ರಾಯಚೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆಂದು ಏ.24ರಂದು “ಉದಯವಾಣಿ’ ವರದಿ ಪ್ರಕಟಿಸಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೊಂಬಿ, ಗಲಾಟೆ, ಘರ್ಷಣೆ ಮುಂತಾದ ಅನಿರೀಕ್ಷಿತ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಆ ಗಲಾಟೆಗೆ ಮಕ್ಕಳು ಬಲಿಯಾಗದಂತೆ ಎಚ್ಚರ ವಹಿಸುವುದು ಎಲ್ಲರ ಜವಾಬ್ದಾರಿ. ಇಂತಹ ಘಟನೆ ಸಂಭವಿಸಿದರೆ, ರಾಜಕೀಯ ಪಕ್ಷಗಳೇ ನೇರ ಹೊಣೆ ಎಂದು ಆಯೋಗದ ಅಧ್ಯಕ್ಷೆ ಡಾ| ಕೃಪಾ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ