3 ದಿನ ಮೊದಲೇ ಮಕ್ಕಳ ದಿನ


Team Udayavani, Nov 12, 2017, 12:45 PM IST

uma.jpg

ಬೆಂಗಳೂರು: ಮಕ್ಕಳ ದಿನಾಚರಣೆಗೂ ಮುನ್ನವೇ ಮಹಾನಗರದಲ್ಲಿ ಮಕ್ಕಳ ಕಲರವ ಶುರುವಾಗಿದೆ. ತೋಟಗಾರಿಕೆ ಇಲಾಖೆ ಜತೆ 15ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳು ಸೇರಿಕೊಂಡು ಕಬ್ಬನ್‌ಪಾರ್ಕ್‌ನಲ್ಲಿ ಮಕ್ಕಳ ಮನಸ್ಸಿಗೆ ಮುದನೀಡುವ ಹೊಸ ಪ್ರಪಂಚವನ್ನೇ ಅನಾವರಣ ಮಾಡಿವೆ.

ನಾಲ್ಕು ಗೋಡೆ ನಡುವೆಯೇ ಆಡಿ ಕುಣಿಯುವ ನಗರದ ಚಿಣ್ಣರಿಗೆ ಪರಿಚಯಿಸಲೆಂದೇ ಆಯೋಜಿಸಿದ್ದ ಕಲೆ, ವಿಜ್ಞಾನ, ತಂತ್ರಜ್ಞಾನ, ಗ್ರಾಮೀಣ ಸಂಸ್ಕೃತಿ, ಕುಸ್ತಿ ಸೇರಿ, ಹಳ್ಳಿಗಾಡಿನ ವಿವಿಧ ಕ್ರೀಡೆಗಳು ಮೊದಲ ದಿನದ ಆಕರ್ಷಣೆಯಾಗಿದ್ದವು.

ಮಡಿಕೆ ತಯಾರಿ, ರಾಗಿ ಬೀಸುವುದು, ಎತ್ತಿನ ಬಂಡಿ, ಕುದುರೆ ಟಾಂಗಾ ಸವಾರಿ, ಮೀನು ಹಿಡಿಯುವುದು, ಚೌಕಾಬಾರ, ಮಲ್ಲಕಂಬ, ಸೈಕಲ್‌ ಗಾಲಿ ಸ್ಪರ್ಧೆ, ಕವಡೆ ಆಟ, ಮೊಸರು ಕಡೆಯುವುದು, ಜಾದು, ಜನಪದ ಕುಣಿತ, ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ, ಖಗೋಳಕ್ಕೆ ಸಂಬಂಧಿಸಿದಂತೆ ಮಿನಿ ತಾರಾಲಯ ಗಮನ ಸೆಳೆಯಿತು.

ಇದರೊಂದಿಗೆ ಅರಣ್ಯ ಇಲಾಖೆಯಿಂದ ವನ್ಯ ಜೀವಿ, ಅರಣ್ಯದ ಕುರಿತು ಮಾಹಿತಿ-ಜಾಗೃತಿ, ದೇಶ ಕಾಯುವ ಸೈನಿಕರ ಸಾಕ್ಷಾತ್‌ ದರ್ಶನ, ಅವರ ಉಡುಗೆ-ತೊಡುಗೆ ಬಗ್ಗೆ ತಿಳಿಯುವ ಅವಕಾಶವನ್ನು ಮಕ್ಕಳಿಗೆ ಒದಗಿಸಲಾಗಿದೆ.

ನೀವೂ ಮೀನು ಹಿಡಿಯಿರಿ!: ಮೀನುಗಾರಿಕೆ ಇಲಾಖೆಯ ವಿವಿಧ ತಳಿಯ ಮೀನುಗಳ ಪ್ರದರ್ಶನ ಮಕ್ಕಳನ್ನು ಹೆಚ್ಚು ಸೆಳೆಯುತ್ತಿದೆ. ಸಿಹಿ ನೀರು, ಸಮುದ್ರ ಮೀನುಗಳ ಕುರಿತು ಮಾಹಿತಿ ಕೂಡ ಇಲ್ಲಿ ಲಭ್ಯವಿದ್ದು, ಮಿನಿ ಮೀನಿನ ಕೊಳ ಸೃಷ್ಟಿಸಿ ಮೀನುಗಳನ್ನು ಬಿಟ್ಟು, ಅವುಗಳನ್ನು ಹಿಡಿಯುವುದು ಹೇಗೆ ಎಂದು ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ತಿಳಿವಳಿಕೆ
ನೀಡಲಾಗುತ್ತಿದೆ. ಮೀನು ಹಿಡಿಯಲು ಬಳಸುತ್ತಿದ್ದ ಹಳೆಯ ಬಲೆಗಳಿಂದ ಇತ್ತೀಚಿನ ದಿನಗಳಲ್ಲಿ ಬಳಕೆ ಮಾಡುತ್ತಿರುವ ಆಧುನಿಕ ಬಲೆಗಳವರೆಗಿನ ಸಚಿತ್ರ ಮಾಹಿತಿ ಇಲ್ಲಿದೆ.

ಫ‌ಲಪುಷ್ಪ ಪ್ರದರ್ಶನ: ತೋಟಗಾರಿಕೆ ಇಲಾಖೆಯಿಂದ ಸುಮಾರು 1.50 ಲಕ್ಷ ಗುಲಾಬಿ, ಅಂಥೇರಿಯಂ, ಲಿಲ್ಲಿ, ಬರ್ಡ್‌ ಆಫ್ ಪ್ಯಾರಡೈಸ್‌ ಇತ್ಯಾದಿ ಹೂವುಗಳನ್ನು ಬಳಸಿ ನಿರ್ಮಿಸಲಾಗಿರುವ ತಾಜ್‌ಮಹಲ್‌, ಮೆಕ್ಸಿಕೋದ ಮಾಯನ್‌ ನಾಗರಿಕತೆಯ ಚಿಂಚನ್‌ ಇಟ್ಜ್  ದೇವಸ್ಥಾನ (ಪಿರಮಿಡ್‌), ಲೋಟಸ್‌ ಟೆಂಪಲ್‌, ಕ್ಯಾಪ್ಸಿಕಂ ಬಳಸಿ ತಯಾರಿಸಲಾಗಿರುವ ಮಕ್ಕಳ ಸ್ನೇಹಿ ಪೊಲೀಸ್‌ ಠಾಣೆ, 24 ಅಡಿ ಎತ್ತರದ ಫ್ಲವರ್‌ ರೈನ್‌ಫಾಲ್‌, ಮರಗಳಿಗೆ ಪುಷ್ಪ ಅಲಂಕಾರ, ಸ್ಯಾಂಡ್‌ ಆರ್ಟ್‌, ಕಲ್ಲಂಗಡಿಗಳಲ್ಲಿ ಜ್ಞಾನಪೀಠ ಪುರಸ್ಕೃತರ ಕೆತ್ತನೆ, ಮಹಡಿ ಉದ್ಯಾನವನ, ಕಿಚನ್‌ಗಾರ್ಡನ್‌, ಅಣಬೆ ಬೇಸಾಯದ ಪ್ರಾತ್ಯಕ್ಷಿಕೆಗಳು ಮಕ್ಕಳನ್ನು ಸೆಳೆಯುತ್ತಿದೆ

ಹಬ್ಬದಲ್ಲಿ ಏನೆಲ್ಲಾ ಇದೆ ಗೊತ್ತಾ? ಮಡಿಕೆ ತಯಾರಿ, ರಾಗಿ ಬೀಸುವುದು, ಎತ್ತಿನ ಬಂಡಿ, ಕುದುರೆ ಟಾಂಗಾ ಸವಾರಿ, ಚಿತ್ರ ಬಿಡಿಸುವುದು, ಮೀನು ಹಿಡಿಯುವುದು, ಚೌಕಾಬಾರ, ಮಲ್ಲಕಂಬ, ಸೈಕಲ್‌ ಟೈರ್‌ ಸ್ಪರ್ಧೆ, ಕವಡೆ ಆಟ, ಮೊಸರು ಕಡೆಯುವುದು, ಜಾದು, ಜನಪದ ಕುಣಿತ, ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ, ಮಿನಿ
ತಾರಾಲಯ, ಸ್ಪೀಕರ್‌ ಮೂಲಕ ವಿವಿಧ ವನ್ಯ ಮೃಗ, ಪಕ್ಷಿಗಳ ಧ್ವನಿ ಕೇಳಿಸುವಿಕೆ, ಯೋಧರು ಬಳಸುವ ಬಂದೂಕು, ಉಡುಗೆ-ತೊಡುಗೆ, ಪೇಂಟಿಂಗ್‌ ಪ್ರದರ್ಶನ, ರಸಪ್ರಶ್ನೆ, ರಂಗೋಲಿ ಸ್ಪರ್ಧೆಗಳು ಈ ಹಬ್ಬದಲ್ಲಿವೆ. ಇಲ್ಲಿ ಮಕ್ಕಳು ಏನೇ ಆಟವಾಡಿದರೂ ಕಾಸಿಲ್ಲ!

ನಾಲ್ಕು ದಿನಗಳ ಮಕ್ಕಳ ಹಬ್ಬ ಮಕ್ಕಳಲ್ಲಿ ಬೌದ್ಧಿಕ, ಶಾರೀರಿಕ, ಮಾನಸಿಕ ವಿಕಾಸಕ್ಕೆ ವೇದಿಕೆಯಾಗಲಿದೆ
ಎಂಬ ವಿಶ್ವಾಸವಿದೆ. ಆರೋಗ್ಯ, ಆಹಾರ ಪದ್ಧತಿ ಮತ್ತು ಗ್ರಾಮೀಣ ಕ್ರೀಡೆಗಳು, ದೇಸೀ ಸಂಸ್ಕೃತಿ, ಜಾನಪದ ಕಲೆಗಳ ಕುರಿತು ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ.
●ಉಮಾಶ್ರೀ, ಸಚಿವೆ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.